Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲಂ ಚೇಂಬರ್ ಚುನಾವಣೆ: ಮತ್ತೆ ಸಾರಾ ಗೋವಿಂದು ಬಳಗಕ್ಕೆ ಜಯ

karnataka film chamber of commerce: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಇಂದು ನಡೆದಿದ್ದು, ಇಂದೇ ಫಲಿತಾಂಶವೂ ಪ್ರಕಟವಾಗಿದೆ. ಈ ಬಾರಿ ಪ್ರದರ್ಶಕರ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಿಡಲಾಗಿದ್ದು, ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಮತ್ತು ವಜ್ರೇಶ್ವರಿ ಚಿತ್ರಮಂದಿರದ ಮಾಲೀಕ ಸುಂದ‌ರ್ ರಾಜು ಆರ್ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಫಲಿತಾಂಶ ಇದೀಗ ಪ್ರಕಟವಾಗಿದೆ.

ಫಿಲಂ ಚೇಂಬರ್ ಚುನಾವಣೆ: ಮತ್ತೆ ಸಾರಾ ಗೋವಿಂದು ಬಳಗಕ್ಕೆ ಜಯ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
Follow us
ಮಂಜುನಾಥ ಸಿ.
|

Updated on: Dec 14, 2024 | 11:21 PM

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಇಂದು (ಡಿಸೆಂಬರ್ 14) ನಡೆದಿದೆ. ಇದೇ ದಿನ ಫಲಿತಾಂಶವೂ ಪ್ರಕಟವಾಗಿದ್ದು, ಮತ್ತೊಮ್ಮೆ ಸಾರಾ ಗೋವಿಂದು ಬಳಕ್ಕೆ ಚುನಾವಣೆಯಲ್ಲಿ ಜಯ ದೊರಕಿದೆ. ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ನರಸಿಂಹಲು ಆಯ್ಕೆ ಆಗಿದ್ದಾರೆ. ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿ ಕೆವಿ ವೆಂಕಟೇಶ್ ಆಯ್ಕೆ ಆಗಿದ್ದಾರೆ. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಸಾರಾ ಗೋವಿಂದು ಬಳಗದವರಾಗಿದ್ದು, ಮತ್ತೊಮ್ಮೆ ಇದೇ ಬಳಗಕ್ಕೆ ವಾಣಿಜ್ಯ ಮಂಡಳಿಯ ಚುಕ್ಕಾಣಿ ದೊರೆತಿದೆ.

ಮಧ್ಯಾಹ್ನದಿಂದ ಚುನಾವಣೆ ನಡೆದಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಲಾಗಿದೆ. ಗುರುರಾಜ ಕಲ್ಯಾಣ ಮಂಟಪದಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಮುಖವಾಗಿ ಸಾರಾ ಗೋವಿಂದು ಬಣ ಮತ್ತು ಭಾಮಾ ಹರೀಶ್ ಅವರ ಬಣಗಳ ಮಧ್ಯೆ ಜಿದ್ದಾಜಿದ್ದಿ ನಡೆದಿತ್ತು. ಅಂತಿಮವಾಗಿ ಸಾರಾ ಗೋವಿಂದು ಬಣಕ್ಕೆ ಜಯ ದೊರೆತಿದೆ.

ಅಧ್ಯಕ್ಷ ಸ್ಥಾನಕ್ಕೆ ನರಸಿಂಹಲು ಎಂ, ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ವಲಯ ಸಫೈರ್ ವೆಂಕಟೇಶ್, ನಿರ್ಮಾಪಕ ವಲಯ ಕಾರ್ಯದರ್ಶಿ ಸ್ಥಾನಕ್ಕೆ ಪ್ರವೀಣ್ ಕುಮಾರ್, ವಿತರಕ ವಲಯದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಹೆಚ್ ಸಿ ಶ್ರೀನಿವಾಸ್, ವಿತರಕ ವಲಯ ಗೌರವ ಕಾರ್ಯದರ್ಶಿ ಕುಮಾರ್ ಎಂ ಎನ್ (ಕೆಸಿಎನ್ ಕುಮಾರ್), ಪ್ರದರ್ಶಕ ವಲಯ ಉಪಾಧ್ಯಕ್ಷ ಸ್ಥಾನ ರಂಗಪ್ಪ, ಪ್ರದರ್ಶಕ ವಲಯ ಕಾರ್ಯದರ್ಶಿ ಸ್ಥಾನಕ್ಕೆ ಕುಶಾಲ್ ಎಲ್, ಖಚಾಂಚಿ ಸ್ಥಾನಕ್ಕೆ-ಚಿಂಗಾರಿ ಮಹದೇವ್ ಆಯ್ಕೆ ಆಗಿದ್ದಾರೆ.

ಇದನ್ನೂ ಓದಿ:ಸ್ಯಾಂಡಲ್​ವುಡ್​ನಲ್ಲಿ ದೌರ್ಜನ್ಯ ತಡೆಗೆ ಸಮಿತಿ, ಫಿಲಂ ಚೇಂಬರ್​ನಲ್ಲಿ ಚರ್ಚಿಸಲು ನಿರ್ಧಾರ

ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ಒಟ್ಟು 128 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಅದರಲ್ಲಿ 24 ಮಂದಿ ಅವಿರೋಧವಾಗಿ ಆಗಿಬಿಟ್ಟಿದ್ದರು. ವಾಣಿಜ್ಯ ಮಂಡಳಿಯಲ್ಲಿ ಒಟ್ಟು 1,409 ಮತದಾರರಿದ್ದು ಇದರಲ್ಲಿ ಅತಿ ಹೆಚ್ಚು ಮತ ನಿರ್ಮಾಪಕ ವಲಯದಿಂದಲೇ ಇದೆ. ನಿರ್ಮಾಪಕರ ವಲಯದಿಂದ 889 ಮತಗಳಿವೆ. ಈ ಬಾರಿ ಪ್ರದರ್ಶಕರ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಿಡಲಾಗಿದ್ದು, ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಮತ್ತು ವಜ್ರೇಶ್ವರಿ ಚಿತ್ರಮಂದಿರದ ಮಾಲೀಕ ಸುಂದ‌ರ್ ರಾಜು ಆರ್ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ವಿಜಯ ನರಸಿಂಹಲು ಎಂ ಅವರಿಗೆ ದೊರೆತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ