AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಬಗ್ಗೆ ಅವಹೇಳನಕಾರಿ ಹೇಳಿಕೆ; ಅಹೋರಾತ್ರ, ಚರಣ್ ವಿರುದ್ಧ ಪೊಲೀಸರಿಗೆ ದೂರು ನೀಡಿದ ವಾಣಿಜ್ಯ ಮಂಡಳಿ

ಸುದೀಪ್ ವಿರುದ್ಧ ಚರಣ್ ಬಳಕೆ ಮಾಡಿದ್ದ ಶಬ್ದ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ನಿರ್ದೇಶಕ ನಂದ ಕಿಶೋರ್ ಅವರು ಕೂಡ ಚರಣ್ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಸುದೀಪ್ ಬಗ್ಗೆ ಅವಹೇಳನಕಾರಿ ಹೇಳಿಕೆ; ಅಹೋರಾತ್ರ, ಚರಣ್ ವಿರುದ್ಧ ಪೊಲೀಸರಿಗೆ ದೂರು ನೀಡಿದ ವಾಣಿಜ್ಯ ಮಂಡಳಿ
ಕಿಚ್ಚ ಸುದೀಪ್
TV9 Web
| Edited By: |

Updated on:Jul 11, 2022 | 5:03 PM

Share

ಚರಣ್ (Charan) ಎಂಬುವವರು ಕಿಚ್ಚ ಸುದೀಪ್ (Kichcha Sudeep) ಬಗ್ಗೆ ಅವಹೇಳನಕಾರಿಯಾದಂತಹ ಮಾತುಗಳನ್ನು ಆಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಚಿತ್ರರಂಗದ ಅನೇಕರು ಚರಣ್​ ವಿರುದ್ಧ ಕಿಡಿಕಾರಿದ್ದರು. ಸುದೀಪ್ ಫ್ಯಾನ್ಸ್ ಕೂಡ ಕೋಪಗೊಂಡಿದ್ದರು. ಈಗ ಈ ವಿಚಾರಕ್ಕೆ ಸಂಬಂಧಿಸಿ ವಾಣಿಜ್ಯ ಮಂಡಳಿಯವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ ಮಾಡಲಾಗಿದೆ. ಈ ದೂರಿನ ಪ್ರತಿ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಸುದೀಪ್ ವಿರುದ್ಧ ಚರಣ್ ಬಳಕೆ ಮಾಡಿದ್ದ ಶಬ್ದ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ನಿರ್ದೇಶಕ ನಂದ ಕಿಶೋರ್ ಅವರು ಕೂಡ ಚರಣ್ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ನಂದ ಕಿಶೋರ್ ವಿರುದ್ಧವೂ ಚರಣ್ ಹರಿಹಾಯ್ದಿದ್ದರು. ಈಗ ಚರಣ್ ವಿರುದ್ಧ ದೂರು ನೀಡಲಾಗಿದೆ.

‘ಭಾರತೀಯ ಚಿತ್ರರಂಗದ ಹೆಸರಾಂತ ಕಲಾವಿದ ಕಿಚ್ಚ ಸುದೀಪ್ ವಿರುದ್ಧ ಅಹೋರಾತ್ರ ಮತ್ತು ಚರಣ್ ಎಂಬುವರು ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ, ಅವಹೇಳನಕಾರಿಯಾಗಿ ಪದಬಳಕೆ ಮಾಡಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗ ಹಾಗೂ ಸುದೀಪ್‌ ಘನತೆ, ಗೌರವಕ್ಕೆ ಚ್ಯುತಿ ತಂದಿದ್ದು ಬೇಸರದ ಸಂಗತಿ. ಇಂತಹ ಹೇಳಿಕೆಗಳಿಂದ ಕನ್ನಡ ಚಿತ್ರರಂಗ ಹಾಗೂ ಕಲಾವಿದರ ಬಗ್ಗೆ ಸಾರ್ವಜನಿಕರಲ್ಲಿ ಇಲ್ಲಸಲ್ಲದ ಗೊಂದಲಗಳಿಗೆ ಎಡೆಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಅಹೋರಾತ್ರ ಮತ್ತು ಚರಣ್ ವಿರುದ್ಧ ಕಾನೂನು ಕ್ರಮ ಜರುಗಿಸಿ, ಚಿತ್ರರಂಗದ ಹಾಗೂ ಕಲಾವಿದರ ಬೆಳವಣಿಗೆಗೆ ಯಾವುದೇ ರೀತಿಯ ಚ್ಯುತಿ ಬರದಂತೆ ಸಹಕರಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕೋರುತ್ತೇವೆ’ ಎಂದು ವಾಣಿಜ್ಯ ಮಂಡಳಿಯವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ
Image
Kichcha Sudeep: ಕಿಚ್ಚ ಸುದೀಪ್​ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿದ ವ್ಯಕ್ತಿ ವಿರುದ್ಧ ನಿರ್ದೇಶಕ ನಂದ ಕಿಶೋರ್​ ಆಕ್ರೋಶ
Image
ಕಿಚ್ಚ ಸುದೀಪ್​ಗೆ ಸಿಕ್ತು ಮತ್ತೊಂದು ಬ್ಯಾಟ್ ಗಿಫ್ಟ್​; ಇದರಲ್ಲಿದೆ ಹಲವು ದಿಗ್ಗಜರ ಆಟೋಗ್ರಾಫ್​
Image
‘ವಿಕ್ರಾಂತ್ ರೋಣ’ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಿಂಚಿದ ಸುದೀಪ್​-ಜಾಕ್ವೆಲಿನ್
Image
Vikrant Rona Press Meet: ರಕ್ಷಿತ್​ ಶೆಟ್ಟಿಯ ಮಾತಿಗೆ ಫಿದಾ ಆಗಿ ವೇದಿಕೆಗೆ ಬಂದು ತಬ್ಬಿಕೊಂಡ ಕಿಚ್ಚ ಸುದೀಪ್​

ಇದನ್ನೂ ಓದಿ: ಕಿಚ್ಚ ಸುದೀಪ್​ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿದ ವ್ಯಕ್ತಿ ವಿರುದ್ಧ ನಿರ್ದೇಶಕ ನಂದ ಕಿಶೋರ್​ ಆಕ್ರೋಶ

ಕಿಚ್ಚ ಸುದೀಪ್ ಬಗ್ಗೆ ಚರಣ್ ಅವಹೇಳನಕಾರಿಯಾಗಿ ಮಾತನಾಡಿರುವುದು ನಿರ್ದೇಶಕ ನಂದ ಕಿಶೋರ್​ ಗಮನಕ್ಕೆ ಬಂದಿತ್ತು. ಆ ಬಗ್ಗೆ ಅವರು ಸಿಟ್ಟಾಗಿದ್ದರು. ಅವಹೇಳನಕಾರಿಯಾಗಿ ಮಾತನಾಡಿದ ಚರಣ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ‘ಕನ್ನಡ ಚಿತ್ರರಂಗದ ಯಾವುದೇ ಕಲಾವಿದರ ಬಗ್ಗೆ ಮಾತನಾಡುವುದಕ್ಕೂ ಮುನ್ನ ಎಚ್ಚರಿಕೆ ಇರಲಿ’ ಎಂದು ಖಡಕ್​ ವಾರ್ನಿಂಗ್​ ನೀಡಿದ್ದರು.

Published On - 4:55 pm, Mon, 11 July 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ