ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ಜಯಭೇರಿ: ಎನ್​ಎಂ ಸುರೇಶ್ ಮೊದಲ ಪ್ರತಿಕ್ರಿಯೆ

NM Suresh: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನಿರ್ಮಾಪಕ ಎನ್​ಎಂ ಸುರೇಶ್ ಭರ್ಜರಿ ಜಯಭೇರಿ ಭಾರಿಸಿದ್ದಾರೆ.

ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ಜಯಭೇರಿ: ಎನ್​ಎಂ ಸುರೇಶ್ ಮೊದಲ ಪ್ರತಿಕ್ರಿಯೆ
ಎನ್​ಎಂ ಸುರೇಶ್
Follow us
|

Updated on:Sep 24, 2023 | 8:12 AM

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka film chamber of commerce) ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನಿರ್ಮಾಪಕ ಎನ್​ಎಂ ಸುರೇಶ್ ಜಯಭೇರಿ ಭಾರಿಸಿದ್ದು, ಫಿಲಂ ಚೇಂಬರ್​ನ ಹೊಸ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ನಾಲ್ಕು ಮಂದಿ ಸ್ಪರ್ಧಿಸಿದ್ದರು. ನಾಲ್ಕು ಸ್ಪರ್ಧಿಗಳ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ನಿರ್ಮಾಪಕ ಎನ್​ಎಂ ಸುರೇಶ್ ಜಯಭೇರಿ ಭಾರಿಸಿದ್ದಾರೆ.

ಚುನಾವಣೆಯಲ್ಲಿ ಗೆದ್ದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸುರೇಶ್, ”ಇದೊಂದು ಐತಿಹಾಸಿಕ ಗೆಲುವು. ನಾಲ್ಕು ಜನರು ಚುನಾವಣೆಯಲ್ಲಿ ಸ್ಪರ್ಧಿಸಿ, ನಾಲ್ಕೂ ಜನರ ನಡುವೆ ಸ್ಪರ್ಧೆ ಇದ್ದಾಗಲೂ ಎಣಿಕೆ ಸಮಯದಲ್ಲಿ ಪ್ರತಿ ಟೇಬಲ್​ನಲ್ಲಿಯೂ ನನಗೆ ಮುನ್ನಡೆ ದೊರೆತಿದೆ. ಇಷ್ಟು ಮೆಜಾರಿಟಿಯಲ್ಲಿ ನನಗೆ ಮತ ಬರಲು ನನ್ನ ಗುರುಗಳಾದ ಸಾರಾ ಗೋವಿಂದು ಅವರು ಕಾರಣ. ಅವರಿಗೆ ನನ್ನ ಧನ್ಯವಾದ. ನನ್ನನ್ನು ಗೆಲ್ಲಿಸಬೇಕು ಎಂದು ಅವರಿಗೆ ಆಸೆಯಿತ್ತು, ನನ್ನ ಮೂಲಕ ಅವರ ಆಸೆ ಈಡೇರಿತು” ಎಂದಿದ್ದಾರೆ.

ಇದನ್ನೂ ಓದಿ:‘ನಾನು ಆಡಂಬರ ಮಾಡಲ್ಲ, ಸುಳ್ಳು ಆಶ್ವಾಸನೆ ಕೊಡಲ್ಲ’: ಫಿಲ್ಮ್​ ಚೇಂಬರ್​ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್​ಎಂ ಸುರೇಶ್​ ಹೇಳಿಕೆ

ಮುಂದುವರೆದು, ”ಕನ್ನಡ ಚಿತ್ರರಂಗ ಸದಾ ರೈತರ ಪರ. ನೆಲ, ಜಲ, ಭಾಷೆಯ ವಿಷಯ ಯಾವಾಗ ಬಂದಿದೆಯೋ ಆಗ, ಎಲ್ಲವನ್ನೂ ಬದಿಗೊತ್ತಿ ಬೆಂಬಲ ನೀಡುವ ಕಾರ್ಯ ಮಾಡಿದ್ದೇವೆ. ಇಂಥಹಾ ಸಂಕಷ್ಟದ ಸನ್ನಿವೇಶದಲ್ಲಿ ನಾವು ಬೆಂಬಲ ನೀಡದಿದ್ದರೆ ನಮ್ಮ ಜೀವನ ಸಾರ್ಥಕ ಎನಿಸಿಕೊಳ್ಳುವುದಿಲ್ಲ. ನೆಲ-ಜಲ-ಭಾಷೆಯ ಪರವಾಗಿ ನಿಂತವರಿಗೆ ನಾವು ಬೆಂಬಲ ನೀಡಬೇಕು, ಸಹಾಯ ನೀಡಬೇಕು. ಅದು ನಮ್ಮ ಆದ್ಯ ಕರ್ತವ್ಯ. ಆ ಕಾರ್ಯವನ್ನು ನಾವು ಹಿಂದೆಯೂ ಮಾಡಿದ್ದೇವೆ. ಮುಂದೆಯೂ ಮಾಡುತ್ತೇವೆ” ಎಂದಿದ್ದಾರೆ.

ಮಂಗಳೂರು, ”ನಾಳೆ (ಸೆಪ್ಟೆಂಬರ್ 24) ಮೊದಲ ಮೀಟಿಂಗ್ ಕರೆಯುತ್ತೇವೆ. ಹಿರಿಯರು, ಮಾಜಿ ಅಧ್ಯಕ್ಷರ ಜೊತೆ ಕೂತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಚಿತ್ರರಂಗ ಕಾವೇರಿ ವಿಷಯದಲ್ಲಿ ಎಂದೂ ಹಿಂದೆ ಉಳಿದಿಲ್ಲ ಎಂದ ಸುರೇಶ್, ನನ್ನ ಗೆಲುವಿಗೆ ಕಾರಣವಾದ ಎಲ್ಲಾ ನಿರ್ಮಾಪಕರಿಗೆ ವಿತರಿಕರಿಗೆ ಹಾಗೂ ಪ್ರದರ್ಶಕರಿಗೆ ಧನ್ಯವಾದಗಳು ನನಗೆ ತುಂಬಾ ಖುಷಿಯಾಗಿದೆ. ನಾನು ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸುತ್ತೇನೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ” ಎಂದಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನಿರ್ಮಾಪಕ ಶಿಲ್ಪ ಶ್ರೀನಿವಾಸ್ 217 ಮತಗಳು ಗಳಿಸಿದರೆ, ವಿತರಕ ಏ ಗಣೇಶ್ 204 ಮತ, ಮಾರ್ಸ್ ಸುರೇಶ್ 181 ಮತಗಳು, ನಿರ್ಮಾಪಕ ಎನ್​ಎಂ ಸುರೇಶ್ 337 ಮತಗಳನ್ನು ಗಳಿಸಿದರು. ಒಟ್ಟು ಮತ ಲೆಕ್ಕಾಚಾರದಲ್ಲಿ 120 ಮತಗಳಿಂದ ನಿರ್ಮಾಪಕ ಎನ್.ಎಮ್ ಸುರೇಶ್ ಗೆಲುವು ಸಾಧಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಅಧ್ಯಕ್ಷರಾಗಿ ಎಮ್ ಎನ್ ಸುರೇಶ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಆಗಿ ಬಾ.ಮಾ ಗಿರೀಶ್ ಆಯ್ಕೆ. ಖಜಾಂಚಿಯಾಗಿ ಜಯಸಿಂಹ ಮಸೂರಿ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಪ್ರಮಿಳಾ ಜೋಶಾಯಿ ಆಯ್ಕೆ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Sat, 23 September 23

ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು