AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಶಿವಣ್ಣ-ರವಿಚಂದ್ರನ್​ ಬರ್ತ್​ಡೇ ಸಂಭ್ರಮ; ಸ್ಟಾರ್ ನಟರ ಹುಟ್ಟುಹಬ್ಬ ಒಟ್ಟಾಗಿ ಆಚರಿಸಲು ಪ್ಲ್ಯಾನ್

ಶಿವರಾಜ್​ಕುಮಾರ್ ಅವರು ಜುಲೈ 12ರಂದು ಜನಿಸಿದ್ದಾರೆ. ರವಿಚಂದ್ರನ್ ಅವರು ಜನಿಸಿದ್ದು ಮೇ 30ರಂದು. ಇವರ ಬರ್ತ್​ಡೇಯನ್ನು ದೊಡ್ಡದಾಗಿ ನಡೆಸಲು ಪ್ಲ್ಯಾನ್ ನಡೆದಿದೆ.

ಸ್ಯಾಂಡಲ್​ವುಡ್​ನಲ್ಲಿ ಶಿವಣ್ಣ-ರವಿಚಂದ್ರನ್​ ಬರ್ತ್​ಡೇ ಸಂಭ್ರಮ; ಸ್ಟಾರ್ ನಟರ ಹುಟ್ಟುಹಬ್ಬ ಒಟ್ಟಾಗಿ ಆಚರಿಸಲು ಪ್ಲ್ಯಾನ್
ರವಿಚಂದ್ರನ್​-ಶಿವಣ್ಣ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 04, 2022 | 4:56 PM

ನಟ ಶಿವರಾಜ್​ಕುಮಾರ್ (Shivarajkumar) ಹಾಗೂ ರವಿಚಂದ್ರನ್​ ಅವರು ಸಮಕಾಲೀನರು. ಅವರ ನಡುವೆ ಒಂದು ವರ್ಷ ವಯಸ್ಸಿನ ಅಂತರವಿದೆ. ಇಬ್ಬರೂ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಶಿವರಾಜ್​​​ಕುಮಾರ್ ಅವರು 125ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದಾರೆ. ರವಿಚಂದ್ರನ್ (Ravichandran) ಅವರು ನಟನೆಯ ಜತೆಗೆ ನಿರ್ಮಾಪಕನಾಗಿ, ನಿರ್ದೇಶಕನಾಗಿ ಗಮನ ಸೆಳೆದಿದ್ದಾರೆ. ಶಿವಣ್ಣಗೆ 60 ವರ್ಷ ವಯಸ್ಸು. ರವಿಚಂದ್ರನ್​ಗೆ 61 ವರ್ಷ ತುಂಬಿದೆ. ಈಗ ಇಬ್ಬರ ಬರ್ತ್​ಡೇಯನ್ನು ಒಟ್ಟಾಗಿ ಆಚರಿಸಲು ಕರ್ನಾಟಕ ಫಿಲಂ​ ಚೇಂಬರ್ ನಿರ್ಧರಿಸಿದೆ.

ಶಿವರಾಜ್​ಕುಮಾರ್ ಅವರು ಜುಲೈ 12ರಂದು ಜನಿಸಿದ್ದಾರೆ. ರವಿಚಂದ್ರನ್ ಅವರು ಜನಿಸಿದ್ದು ಮೇ 30ರಂದು. ಇವರ ಬರ್ತ್​ಡೇಯನ್ನು ದೊಡ್ಡದಾಗಿ ನಡೆಸಲು ಪ್ಲ್ಯಾನ್ ನಡೆದಿದೆ. ಫಿಲಂ​ ಚೇಂಬರ್ ವತಿಯಿಂದ ಈ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ. ಈ ಬಗ್ಗೆ ಕರ್ನಾಟಕ ಫಿಲಂ​ ಚೇಂಬರ್ ಅಧ್ಯಕ್ಷ ಭಾ.ಮಾ. ಹರೀಶ್ ಅವರು ಟಿವಿ9 ಕನ್ನಡದ ಜತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಶಿವರಾಜ್​ಕುಮಾರ್ ಅವರು ಈ ಬಾರಿ 60ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬರ್ತ್​​ಡೇಯನ್ನು ದೊಡ್ಡದಾಗಿ ಆಚರಿಸಲು ಪುನೀತ್ ರಾಜ್​ಕುಮಾರ್ ಈ ಮೊದಲು ನಿರ್ಧರಿಸಿದ್ದರು. ಆದರೆ, ಪುನೀತ್ ಅಕಾಲಿಕ ಮರಣ ಹೊಂದಿದರು. ಅಪ್ಪು ಇಲ್ಲ ಎಂಬ ಕಾರಣಕ್ಕೆ ಶಿವರಾಜ್​ಕುಮಾರ್ ಅವರು ಈ ಬಾರಿ ಬರ್ತ್​ಡೇ ಆಚರಿಸಿಕೊಂಡಿಲ್ಲ. ಈ ಕಾರಣಕ್ಕೆ ಅಕ್ಟೋಬರ್ ಅಥವಾ ನವೆಂಬರ್​​ನಲ್ಲಿ ಶಿವಣ್ಣ ಹಾಗೂ ರವಿಚಂದ್ರನ್​ ಬರ್ತ್​ಡೇ ದೊಡ್ಡದಾಗಿ ಆಯೋಜನೆಗೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ
Image
‘ಓಂ’ ಸಿನಿಮಾ ಸ್ಟೈಲ್​ನಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ಗೆ ಶಿವರಾಜ್​ಕುಮಾರ್ ಎಂಟ್ರಿ; ಇಲ್ಲಿದೆ ವಿಡಿಯೋ
Image
‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್
Image
ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್​ಕುಮಾರ್
Image
Sudeep: ‘ನಾನು-ಶಿವಣ್ಣ ಕೆಲವು ಸಮಯ ಮಾತಾಡ್ತಾ ಇರಲಿಲ್ಲ, ಕಾರಣ ಹುಡುಕ್ತಾ ಹೋದ್ರೆ..’; ಸುದೀಪ್​ ನೇರ ಮಾತು

ಇದನ್ನೂ ಓದಿ: ‘ಘೋಸ್ಟ್​’ ಸ್ವಾಗತಿಸಿದ ಕಿಚ್ಚ ಸುದೀಪ್​; ಶಿವರಾಜ್​ಕುಮಾರ್ ಲುಕ್ ನೋಡಿ ಫ್ಯಾನ್ಸ್ ಫಿದಾ

ಅಂದುಕೊಂಡಂತೆ ನಡೆದರೆ ಇದು ಸ್ಯಾಂಡಲ್​ವುಡ್​ ಪಾಲಿಗೆ ಬಹುದೊಡ್ಡ ದಿನವಾಗಲಿದೆ. ಶಿವಣ್ಣ ಹಾಗೂ ರವಿಚಂದ್ರನ್ ಸ್ಯಾಂಡಲ್​ವುಡ್​ನಲ್ಲಿ ಅಜಾತಶತ್ರುಗಳು. ಈ ಕಾರಣಕ್ಕೆ ಬಹುತೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಹಾಜರಿ ಹಾಕುವ ಸಾಧ್ಯತೆ ಇದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೆ ಪರಭಾಷೆಯ ಸ್ಟಾರ್​​ಗಳನ್ನು ಆಹ್ವಾನಿಸಲು ಚಿಂತನೆ ನಡೆದಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಮಾಡಲು ಪ್ಲ್ಯಾನ್ ರೂಪಿಸಲಾಗುತ್ತಿದೆ.

Published On - 4:32 pm, Thu, 4 August 22

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು