AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಸಿದ್ದರಾಮಯ್ಯ ಭೇಟಿ ಮಾಡಿದ ಕನ್ನಡ ಚಿತ್ರರಂಗದ ಗಣ್ಯರು; ಸಿಎಂ ಮುಂದೆ ಇಟ್ಟ ಮನವಿಗಳೇನು?

Karnataka Film Chamber of Commerce: ‘ಒಂದಷ್ಟು ಸಮಸ್ಯೆಗಳ ಬಗ್ಗೆ ಮನವಿ ಕೊಟ್ಟಿದ್ದೇವೆ. ಚಿತ್ರರಂಗದ ಧ್ಯೇಯ ಮತ್ತು ಉದ್ದೇಶದ ಬಗ್ಗೆಯೂ ಸಿಎಂ ಮುಂದೆ ಪ್ರಸ್ತಾಪ ಮಾಡಲಾಯ್ತು. ಸಬ್ಸಿಡಿ ವಿಚಾರ ಏನೂ ಸದ್ಯಕ್ಕೆ ಚರ್ಚೆ ಮಾಡಿಲ್ಲ’ ಎಂದು ಭಾ.ಮ. ಹರೀಶ್​ ಹೇಳಿದ್ದಾರೆ.

Siddaramaiah: ಸಿದ್ದರಾಮಯ್ಯ ಭೇಟಿ ಮಾಡಿದ ಕನ್ನಡ ಚಿತ್ರರಂಗದ ಗಣ್ಯರು; ಸಿಎಂ ಮುಂದೆ ಇಟ್ಟ ಮನವಿಗಳೇನು?
ಸಿಎಂ ಸಿದ್ದರಾಮಯ್ಯ, ಭಾ.ಮ. ಹರೀಶ್​
ಮದನ್​ ಕುಮಾರ್​
|

Updated on: Jun 01, 2023 | 12:48 PM

Share

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka Film Chamber of Commerce) ಪ್ರಮುಖರು ಇಂದು (ಜೂನ್​ 1) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್ ಅವರ ನೇತೃತ್ವದಲ್ಲಿ ಈ ಭೇಟಿ ನಡೆದಿದೆ. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಆ ಕುರಿತು ಭಾ.ಮ. ಹರೀಶ್​ (Ba Ma Harish) ಅವರು ಮಾಹಿತಿ ಹಂಚಿಕೊಂಡಿದ್ದಾರೆ. ರಾಜಕೀಯಕ್ಕೂ ಚಿತ್ರೋತ್ಸಮಕ್ಕೂ ಹತ್ತಿರದ ನಂಟು. ರಾಜಕೀಯದಲ್ಲಿನ ಅನೇಕರು ಚಿತ್ರೋದ್ಯಮದ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಹಾಗೆಯೇ ಚಿತ್ರರಂಗದ ಅನೇಕರು ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ಸಿನಿಮಾ ಕ್ಷೇತ್ರಕ್ಕೆ ಸರ್ಕಾರಗಳು ಮೊದಲಿನಿಂದಲೂ ಬೆಂಬಲ ನೀಡುತ್ತಲೇ ಬಂದಿವೆ. ಚಿತ್ರರಂಗದ ಬೇಡಿಕೆಗಳು ಇನ್ನೂ ಸಾಕಷ್ಟು ಇವೆ. ಹೊಸ ಸರ್ಕಾರದ ಮುಂದೆ ಕನ್ನಡ ಚಿತ್ರರಂಗದವರು (Kannada Film Industry) ಕೆಲವು ಮನವಿಗಳನ್ನು ಇಟ್ಟಿದ್ದಾರೆ.

‘ವಾಣಿಜ್ಯ ಮಂಡಳಿ ವತಿಯಿಂದ ಒಂದಷ್ಟು ಸಮಸ್ಯೆಗಳ ಬಗ್ಗೆ ಮನವಿ ಕೊಟ್ಟಿದ್ದೇವೆ. ಚಿತ್ರರಂಗದ ಧ್ಯೇಯ ಮತ್ತು ಉದ್ದೇಶದ ಬಗ್ಗೆಯೂ ಸಿಎಂ ಮುಂದೆ ಪ್ರಸ್ತಾಪ ಮಾಡಲಾಯ್ತು. ಸಬ್ಸಿಡಿ ವಿಚಾರ ಏನೂ ಸದ್ಯಕ್ಕೆ ಚರ್ಚೆ ಮಾಡಿಲ್ಲ. ಚಲನಚಿತ್ರ ಅಕಾಡೆಮಿ ಅಧ್ಯಕ್ಷರು ಹಾಗೂ ಕಂಠೀರವ ಸ್ಟುಡಿಯೋ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದೇವೆ. ಸಿನಿಮಾದವರಿಗೆ ಅವಕಾಶ ಕೊಡಿ ಅಂತ ಕೇಳಿದ್ದೇವೆ. ಈ ವಿಚಾರಗಳ ಬಗ್ಗೆ ಸಿಎಂಗೆ ಮನವರಿಕೆ ಮಾಡಿದ್ದೇವೆ. ಸಿಎಂ ಕೂಡ ಉತ್ತಮ ರೀತಿಯಲ್ಲಿ ಸ್ಪಂದನೆ ನೀಡಿದ್ದಾರೆ’ ಎಂದು ಭಾ.ಮ. ಹರೀಶ್​ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಹೊಸ ಸರ್ಕಾರದಿಂದ ಶಿವರಾಜ್ ಕುಮಾರ್ ಅವರಿಗಿರುವ ನಿರೀಕ್ಷೆ ಇಷ್ಟೆ

‘ಸೆನ್ಸಾರ್ ಮಂಡಳಿ ವಿಚಾರದಲ್ಲಿ ಗೊಂದಲಗಳಿವೆ. ಇದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ಈ ಹಿಂದೆ ಲೋಕಸಭಾ ಸದಸ್ಯರಿಗೆ ಮನವಿ ಮಾಡಿದ್ದೆವು. ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ವ್ಯಕ್ತಿಯನ್ನು ಆಯ್ಕೆ ಮಾಡುವಂತೆ ಹೇಳಿದ್ದೆವು. ಆದರೆ ಸೆನ್ಸಾರ್ ಮಂಡಳಿಯಲ್ಲಿ ಕಾರ್ಯಕರ್ತರ ನೇಮಕ ಮಾಡಿದರೆ ಸಮಸ್ಯೆ ಆಗುತ್ತದೆ. ಈ ವಿಚಾರಕ್ಕೆ ಸಂಬಂಧಪಟ್ಟ ಲೋಕಸಭೆ ಸದಸ್ಯರನ್ನು ಮತ್ತೆ ಭೇಟಿಯಾಗಿ ಮನವಿ ಮಾಡುತ್ತೇವೆ. ಸಮಗ್ರ ಕನ್ನಡ ಚಿತ್ರೋದ್ಯಮದ ಅಭಿವೃದ್ಧಿ ಬಗ್ಗೆ ಚರ್ಚೆ ಆಗಿದೆ’ ಎಂದು ಭಾ.ಮ. ಹರೀಶ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ