AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರೀಕರಣ ಬಂದ್ ಇಲ್ಲ, ಗಡುವು ಪಡೆದ ಫಿಲಂ ಚೇಂಬರ್, ಯೂನಿಟ್ ಮಾಲೀಕರ ಮೇಲೆ ನಿರ್ಮಾಪಕರ ಸಂಘ ದೂರು

Karnataka Film Chamber of Commerce: ಹೊರಾಂಗಣ ಚಿತ್ರೀಕರಣ ಕಾರ್ಮಿಕರ ಸಂಘವು ಕರೆ ನೀಡಿದ್ದ ಚಿತ್ರೀಕರಣ ಬಂದ್​ ಅನ್ನು ಮುಂದೂಡುವಲ್ಲಿ ಫಿಲಂ ಚೇಂಬರ್ ಯಶಸ್ವಿಯಾಗಿದೆ.

ಚಿತ್ರೀಕರಣ ಬಂದ್ ಇಲ್ಲ, ಗಡುವು ಪಡೆದ ಫಿಲಂ ಚೇಂಬರ್, ಯೂನಿಟ್ ಮಾಲೀಕರ ಮೇಲೆ ನಿರ್ಮಾಪಕರ ಸಂಘ ದೂರು
ಫಿಲಂ ಚೇಂಬರ್
ಮಂಜುನಾಥ ಸಿ.
|

Updated on: Jun 04, 2023 | 9:41 PM

Share

ಹೊರಾಂಗಣ ಚಿತ್ರೀಕರಣ (Outdor Shooting) ಕಾರ್ಮಿಕರ ಸಂಘವು (Shooting Labor) ವೇತನ ಹೆಚ್ಚಳ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೂನ್ 5ರಿಂದ ಚಿತ್ರೀಕರಣಕ್ಕೆ ಬಹಿಷ್ಕಾರ ಹೇಳಿದ್ದವು. ಆದರೆ ಫಿಲಂ ಚೇಂಬರ್ ಹಾಗೂ ನಿರ್ಮಾಪಕರ ಸಂಘವು (Producer) ಹೊರಾಂಗಣ ಚಿತ್ರೀಕರಣ ಕಾರ್ಮಿಕರ ಸಂಘದೊಟ್ಟಿಗೆ ಮಾತುಕತೆ ನಡೆಸಿದ್ದು ಬೇಡಿಕೆಗಳ ಈಡೇರಿಕೆಗೆ ಹದಿನೈದು ದಿನಗಳ ಗಡುವನ್ನು ಪಡೆದುಕೊಂಡಿದೆ. ಇದರ ಬೆನ್ನಲ್ಲೆ ನಿರ್ಮಾಪಕರ ಸಂಘವು ಲೈಟ್​ಮೆನ್ ಕಾರ್ಮಿಕರ ಸಂಘ, ಯೂನಿಕ್ ಮಾಲೀಕರ, ತಂತ್ರಜ್ಞರ ಸಂಘದ ವಿರುದ್ಧ ಸರಣಿ ದೂರುಗಳನ್ನು ಮಾಡಿದ್ದು, ಕೆಲವಾರು ಪ್ರಶ್ನೆಗಳನ್ನು ಸಹ ಮಾಡಿದೆ.

ಕ್ಯಾಮೆರಾಮನ್​ಗಳ ಬಳಿ ಕೆಲಸಕ್ಕೆ ಇರುವವರೇ ಪ್ರತ್ಯೇಕವಾಗಿ ಜನರೇಟರ್ ಇನ್ನಿತರೆ ಯೂನಿಟ್​ಗಳನ್ನು ಬಾಡಿಗೆಗೆ ನೀಡುತ್ತಿದ್ದಾರೆ. ಲೈಟ್​ಮೆನ್ ಹಾಗೂ ಇನ್ನಿತರೆ ಸಂಘಗಳ ಒಟ್ಟು ಸದಸ್ಯರ ಸಂಖ್ಯೆಯಾದರೂ ಗೊತ್ತಿದೆಯೇ? ಪ್ಯಾಕೇಜ್ ಹೆಸರಲ್ಲಿ ಕಡಿಮೆ ಹಣದ ಆಮಿಷ ತೋರಿಸಿ ಆ ಬಳಿಕ ಹೆಚ್ಚುವರಿ ಹಣ ಪೀಕಿಸುತ್ತಿರುವುದು ನಿರ್ಮಾಪಕರಿಗೆ ಹೊರೆಯಾಗುತ್ತಿದೆ. ಯುನಿಟ್ ಮಾಲೀಕರು ಒಪ್ಪಿಕೊಂಡ ಚಿತ್ರಗಳಿಗೆ ಯೂನಿಟ್​ನ ಸದಸ್ಯರೇ ಬೇರೆ ಯೂನಿಟ್​ನಿಂದ ಯಂತ್ರಗಳನ್ನು ಕರೆಸಿ ಹಾಕುತ್ತಿದ್ದಾರೆ. ಇದು ನಿಯಮಕ್ಕೆ ಬಾಹಿರವಲ್ಲವೆ? ಇತ್ಯಾದಿ ಪ್ರಶ್ನೆಗಳನ್ನು ನಿರ್ಮಾಪಕ ಸಂಘದವರು ಕೇಳಿದ್ದಾರೆ.

ಎಂಟು ಲೈಟ್​ಮೆನ್​ಗಳನ್ನು ಕೆಲಸಕ್ಕೆ ಕಳಿಸಿ 10 ಜನರ ಭತ್ಯೆ ಪಡೆದುಕೊಳ್ಳಲಾಗುತ್ತಿದೆ. ಯೂನಿಟ ಸದಸ್ಯರ ಮಾಹಿತಿ ಕೇಳಿದರೆ ನಾವು ಸಂಘದಲ್ಲಿಲ್ಲ ಎಂದು ಹೇಳುತ್ತಾರೆ, ಸಂಘದ ಸದಸ್ಯರಲ್ಲದೇ ಇರುವವರನ್ನು ಏಕೆ ಕೆಲಸಕ್ಕೆ ಕಳಿಸುತ್ತಿದ್ದೀರಿ? ನಿರ್ಮಾಪಕರಿಂದ ಹೆಚ್ಚಿನ ಹಣ ಪಡೆದು ಕಾರ್ಮಿಕರಿಗೆ ಕಡಿಮೆ ಹಣ ನೀಡುತ್ತಿರುವುದು ಸಹ ನಮ್ಮ ಗಮನಕ್ಕೆ ಬಂದಿದೆ. ಇದು ನಿರ್ಮಾಪಕರಿಗೆ ಮಾಡಿದ ಮೋಸ ಅಲ್ಲವೆ? 40-50 ಜನ ಯೂನಿಟ್ ಸರಬರಾಜು ಮಾಡುತ್ತಿದ್ದಾರೆ. ಇದರಲ್ಲಿ ಒಬ್ಬರೂ ಸಹ ವಾಣಿಜ್ಯ ಮಂಡಳಿ ಸದಸ್ಯರಾಗಿಲ್ಲ ಎಂದಿದೆ ನಿರ್ಮಾಪಕರ ಸಂಘ.

ಇನ್ನು ಈ ಒತ್ತಾಯ, ಪ್ರತಿಭಟನೆಗಳ ಬಗ್ಗೆ ಮಾತನಾಡಿರುವ ಫಿಲಂ ಚೇಂಬರ್ ಅಧ್ಯಕ್ಷ ಭಾಮಾ ಹರೀಶ್, ”ಹೊರಾಂಗಣ ಚಿತ್ರೀಕರಣ ಕಾರ್ಮಿಕರ ಭತ್ಯೆ ಹೆಚ್ಚಳದ ಬಗ್ಗೆ ಮೊದಲಿನಿಂದಲೂ ಬೇಡಿಕೆ ಇದೆ. ಕೋವಿಡ್ ಇದ್ದ ಕಾರಣದಿಂದ ಭತ್ಯೆ ಹೆಚ್ಚಳ ಮಾಡಿರಲಿಲ್ಲ. ಆ ಬಗ್ಗೆ ಸಮಿತಿ ರಚಿಸಲಾಗಿದ್ದು ಕೆ.ಮಂಜು, ರಾಕ್​ಲೈನ್ ವೆಂಕಟೇಶ್, ದಯಾಳು ಅವಿನಾಶ್, ಸೂರಪ್ಪ ಬಾಬು ಸಮಿತಿಯಲ್ಲಿದ್ದಾರೆ. ಇನ್ನು ಡ್ಯಾನ್ಸ್ ಹಾಗೂ ಫೈಟರ್ ಅಸೋಸಿಯೇಷನ್​ನ ಮೀಟಿಂಗ್ ಇದೆ. ಅದರ ಬಗ್ಗೆ ಚರ್ಚೆ ಮಾಡಿ ಅದನ್ನೂ ಸರಿಪಡಿಸುತ್ತೇವೆ. ಇನ್ನು ಯೂನಿಟ್ ಮಾಲೀಕರು ಹಾಗೂ ಅವರ ಕಾರ್ಮಿಕರ ನಡುವೆ ಭಿನ್ನಾಭಿಪ್ರಾಯ ಇತ್ತು ಅದನ್ನು ಸಹ ಸರಿಪಡಿಸುತ್ತೇವೆ” ಎಂದಿದ್ದಾರೆ.

ಶೂಟಿಂಗ್ ಬಂದ್ ಮಾಡುವ ಬೆದರಿಕೆ ಬಗ್ಗೆ ಮಾತನಾಡಿದ ಭಾಮಾ ಹರೀಶ್, ”ಶೂಟಿಂಗ್ ಬಂದ್ ಮಾಡುವ ಬಗ್ಗೆ ಕೆಲವರು ಹೇಳಿದ್ದರು. ಆದರೆ ಹಾಗಾಗಲು ಬಿಟ್ಟಿಲ್ಲ. ಅವರನ್ನು ಕಚೇರಿಗೆ ಕರೆಸಿ ಮಾತನಾಡಿದ್ದೇವೆ. ನಮ್ಮ ಕಾರ್ಯದರ್ಶಿಗಳು ಅವರೊಟ್ಟಿಗೆ ಮಾತನಾಡಿಸಿ ಸಂಧಾನ ಮಾಡಿದ್ದಾರೆ. ಜೂನ್ 5 ರಂದು ಚಿತ್ರೀಕರಣ ಬಂದ್ ಆಗುವುದಿಲ್ಲ. ಎಂದಿನಂತೆ ಸರಾಗವಾಗಿ ಶೂಟಿಂಗ್ ನಡೆಯಲಿದೆ” ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ