Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಇಲ್ಲಿದೆ ಪೂರ್ಣ ಪಟ್ಟಿ

Karnataka State Film Awards 2019: ಕರ್ನಾಟಕ ಸರ್ಕಾರವು 2019ರ ರಾಜ್ಯ ಸಿನಿಮಾ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. 2019 ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಸುದೀಪ್​ಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಿರುವುದು ವಿಶೇಷ. ಆರು ವರ್ಷದ ಹಿಂದೆ ಬಿಡುಗಡೆ ಆದ ಸಿನಿಮಾಗಳಿಗೆ ಈಗ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಇಲ್ಲಿದೆ ಪೂರ್ಣ ಪಟ್ಟಿ
State Film Awards 2019
Follow us
ಮಂಜುನಾಥ ಸಿ.
|

Updated on:Jan 22, 2025 | 5:39 PM

ಕರ್ನಾಟಕ ರಾಜ್ಯ ಸರ್ಕಾರವು 2019ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಇಂದು (ಜನವರಿ 22) ಘೋಷಣೆ ಮಾಡಿದೆ. 2019 ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಿಗೆ ಆರು ವರ್ಷಗಳ ಬಳಿಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ನಟ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದೆ. ಅನುಪಮಾ ಗೌಡಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ. ಯಾವ ಯಾವ ಸಿನಿಮಾಗಳು, ನಟ-ನಟಿ ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ನೀಡಲಾಗಿದೆ ಎಂಬ ಪೂರ್ಣ ಪಟ್ಟಿ ಇಲ್ಲಿ.

ಅತ್ಯುತ್ತಮ ನಟ ಸುದೀಪ್ (ಪೈಲ್ವಾನ್)

ಅತ್ಯುತ್ತಮ ನಟಿ ಅನುಪಮಾ ಗೌಡ (ತ್ರಯಂಬಕಂ)

ಅತ್ಯುತ್ತಮ ಸಿನಿಮಾ (1st) ಮೋಹನದಾಸ (ಪಿ ಶೇಷಾದ್ರಿ)

ಅತ್ಯುತ್ತಮ ಸಿನಿಮಾ (2nd) ಲವ್ ಮಾಕ್ಟೆಲ್ (ಡಾರ್ಲಿಂಗ್ ಕೃಷ್ಣ)

ಅತ್ಯುತ್ತಮ ಸಿನಿಮಾ (3rd) ಅರ್ಘ್ಯಂ (ವೈ ಶ್ರೀನಿವಾಸ್)

ಸಾಮಾಜಿಕ ಕಳಕಳಿ ಚಿತ್ರ ಕನ್ನೇರಿ (ಮಂಜುನಾಥ ಎಸ್)

ಮನರಂಜನಾ ಸಿನಿಮಾ ಇಂಡಿಯಾ vs ಇಂಗ್ಲೆಂಡ್ (ನಾಗತಿಹಳ್ಳಿ ಚಂದ್ರಶೇಖರ್)

ಮಕ್ಕಳ ಸಿನಿಮಾ ಎಲ್ಲಿ ಆಡೋದು ನಾವು ಎಲ್ಲಿ ಆಡೋದು (ಅರುಣ್ ಕುಮಾರ್)

ನಿರ್ದೇಶಕನ ಮೊದಲ ಚಿತ್ರ ಗೋಪಾಲ ಗಾಂಧಿ (ನಾಗೇಶ್)

ಪ್ರಾದೇಶಿಕ ಸಿನಿಮಾ ಟ್ರಿಬಲ್ ತಲಾಖ್ (ಬ್ಯಾರಿ ಭಾಷೆ-ನಿರ್ದೇಶಕ: ಯಾಕೂಬ್)

ಅತ್ಯುತ್ತಮ ಪೋಷಕ ನಟಿ ಅನೂಷಾ ಕೃಷ್ಣ (ಬ್ರಾಹ್ಮಿ)

ಅತ್ಯುತ್ತಮ ಪೋಷಕ ನಟ ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)

ಅತ್ಯುತ್ತಮ ಕತೆ ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ (ಜಯಂತ್ ಕಾಯ್ಕಿಣಿ)

ಅತ್ಯುತ್ತಮ ಚಿತ್ರಕತೆ ಲವ್ ಮಾಕ್ಟೆಲ್ (ಡಾರ್ಲಿಂಗ್ ಕೃಷ್ಣ)

ಅತ್ಯುತ್ತಮ ಸಂಭಾಷಣೆ ಅಮೃತಮತಿ (ಬರಗೂರು ರಾಮಚಂದ್ರಪ್ಪ)

ಅತ್ಯುತ್ತಮ ಛಾಯಾಗ್ರಹಣ ಮೋಹನದಾಸ (ಜಿಎಸ್ ಭಾಸ್ಕರ್)

ಅತ್ಯುತ್ತಮ ಸಂಕಲನ ಝಾನ್ಸಿ ಐಪಿಎಸ್ (ಬಸವರಾಜ್ ಅರಸ್)

ಅತ್ಯುತ್ತಮ ಬಾಲನಟ ಪ್ರೀತಂ (ಮಿಂಚು ಹುಳ)

ಅತ್ಯುತ್ತಮ ಬಾಲನಟಿ ಸುಗಂಧಿ (ಬೇಬಿ ವೈಷ್ಣವಿ ಅಡಿಗ)

ಅತ್ಯುತ್ತಮ ಕಲಾ ನಿರ್ದೇಶನ ಮೋಹನದಾಸ (ಹೊಸ್ಮನೆ ಮೂರ್ತಿ)

ಅತ್ಯುತ್ತಮ ಗೀತ ರಚನೆ ಪೆನ್ಸಿಲ್ ಬಾಕ್ಸ್ (ರಝಾಕ್ ಪುತ್ತೂರು)

ಅತ್ಯುತ್ತಮ ಗಾಯಕ ರಘು ದೀಕ್ಷಿತ್ (ಲವ್ ಮಾಕ್ಟೆಲ್)

ಅತ್ಯುತ್ತಮ ಗಾಯಕಿ ಜಯದೇವಿ ಶೆಟ್ಟಿ (ರಾಗ ಭೈರವಿ)

ತೀರ್ಪುಗಾರರ ಪ್ರಶಸ್ತಿ ಅಮೃತಮತಿ, ತಮಟೆ ನರಸಿಂಹಯ್ಯ, ಮಕ್ಕಡ್ ಮನಸು

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Wed, 22 January 25

Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯುವಕ
ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯುವಕ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?