AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್​; ಸಿಎಂ ಯಡಿಯೂರಪ್ಪಗೆ ಧನ್ಯವಾದ ಹೇಳಿದ ಸುನೀಲ್ ಪುರಾಣಿಕ್

ಕೊವಿಡ್​ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು.

ಸಿನಿಮಾ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್​;  ಸಿಎಂ ಯಡಿಯೂರಪ್ಪಗೆ ಧನ್ಯವಾದ ಹೇಳಿದ ಸುನೀಲ್ ಪುರಾಣಿಕ್
ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಿಎಂಗೆ ಪುರಾಣಿಕ್ ಮನವಿ
ರಾಜೇಶ್ ದುಗ್ಗುಮನೆ
|

Updated on:Jun 03, 2021 | 5:59 PM

Share

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್​ನಲ್ಲಿ ಚಿತ್ರರಂಗದ ಕಾರ್ಮಿಕರನ್ನು ಗಣನೆಗೆ ತೆಗೆದುಕೊಳ್ಳಲಾಗಿದ್ದು, ತಲಾ 3000 ರೂಪಾಯಿ ನೀಡಲಾಗುತ್ತಿದೆ.

ಕೊರೊನಾ ವೈರಸ್​ ನಿಯಂತ್ರಣಕ್ಕೆ ಹೇರಿರುವ ಲಾಕ್​ಡೌನ್​ನಿಂದ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಕರು ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ, ಇವರಿಗೆ ವಿಶೇಷ ಪ್ಯಾಕೇಜ್​ ನೀಡುವಂತೆ ಕೋರಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಸರ್ಕಾರ ಇದಕ್ಕೆ ಈಗ ಸ್ಪಂದಿಸಿದೆ.

ಕೊವಿಡ್​ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು. ಇನ್ನು, ಸಾಕಷ್ಟು ಸಿನಿಮಾಗಳು ಘೋಷಣೆ ಆಗಿ, ಶೂಟಿಂಗ್​ ಕೂಡ ಶುರುವಾಗಿತ್ತು. ಹೀಗಾಗಿ, ಎಲ್ಲವೂ ಮತ್ತೆ ಮೊದಲಿನಂತಾಯಿತು ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಏಕಾಏಕಿ ಕೊವಿಡ್​ ಎರಡನೇ ಅಲೆ ಹೆಚ್ಚಿದ್ದರಿಂದ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇತ್ತೀಚೆಗೆ ಮಾತನಾಡಿದ್ದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಸಿನಿಮಾ ಕಾರ್ಮಿಕರಿಗೆ 2ನೇ ಹಂತದಲ್ಲಿ ಪ್ಯಾಕೇಜ್ ರಿಲೀಸ್​ ಮಾಡುತ್ತಿದ್ದೇವೆ. ಇದರಲ್ಲಿ ಸಿನಿಮಾ ತಂತ್ರಜ್ಞರು, ಕಾರ್ಮಿಕರ ಸೇರ್ಪಡೆ ಮಾಡುತ್ತಿದ್ದೇವೆ ಎಂದಿದ್ದರು. ಅಂತೆಯೇ ಸರ್ಕಾರ ಈಗ ಕಾರ್ಮಿಕರಿಗೆ ಮೂರು ಸಾವಿರ ರೂಪಾಯಿ ನೀಡುತ್ತಿದೆ. ಕರ್ನಾಟಕದಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: Lockdown Guidelines: ಜೂನ್ 14ರವರೆಗೆ ಲಾಕ್​ಡೌನ್ ಮುಂದುವರಿಕೆ; 500 ಕೋಟಿ ಆರ್ಥಿಕ ಪ್ಯಾಕೇಜ್: ಸಿಎಂ ಯಡಿಯೂರಪ್ಪ ಘೋಷಣೆ

Published On - 5:54 pm, Thu, 3 June 21

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ