AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್​; ಸಿಎಂ ಯಡಿಯೂರಪ್ಪಗೆ ಧನ್ಯವಾದ ಹೇಳಿದ ಸುನೀಲ್ ಪುರಾಣಿಕ್

ಕೊವಿಡ್​ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು.

ಸಿನಿಮಾ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್​;  ಸಿಎಂ ಯಡಿಯೂರಪ್ಪಗೆ ಧನ್ಯವಾದ ಹೇಳಿದ ಸುನೀಲ್ ಪುರಾಣಿಕ್
ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಿಎಂಗೆ ಪುರಾಣಿಕ್ ಮನವಿ
ರಾಜೇಶ್ ದುಗ್ಗುಮನೆ
|

Updated on:Jun 03, 2021 | 5:59 PM

Share

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್​ನಲ್ಲಿ ಚಿತ್ರರಂಗದ ಕಾರ್ಮಿಕರನ್ನು ಗಣನೆಗೆ ತೆಗೆದುಕೊಳ್ಳಲಾಗಿದ್ದು, ತಲಾ 3000 ರೂಪಾಯಿ ನೀಡಲಾಗುತ್ತಿದೆ.

ಕೊರೊನಾ ವೈರಸ್​ ನಿಯಂತ್ರಣಕ್ಕೆ ಹೇರಿರುವ ಲಾಕ್​ಡೌನ್​ನಿಂದ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಕರು ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ, ಇವರಿಗೆ ವಿಶೇಷ ಪ್ಯಾಕೇಜ್​ ನೀಡುವಂತೆ ಕೋರಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಸರ್ಕಾರ ಇದಕ್ಕೆ ಈಗ ಸ್ಪಂದಿಸಿದೆ.

ಕೊವಿಡ್​ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು. ಇನ್ನು, ಸಾಕಷ್ಟು ಸಿನಿಮಾಗಳು ಘೋಷಣೆ ಆಗಿ, ಶೂಟಿಂಗ್​ ಕೂಡ ಶುರುವಾಗಿತ್ತು. ಹೀಗಾಗಿ, ಎಲ್ಲವೂ ಮತ್ತೆ ಮೊದಲಿನಂತಾಯಿತು ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಏಕಾಏಕಿ ಕೊವಿಡ್​ ಎರಡನೇ ಅಲೆ ಹೆಚ್ಚಿದ್ದರಿಂದ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇತ್ತೀಚೆಗೆ ಮಾತನಾಡಿದ್ದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಸಿನಿಮಾ ಕಾರ್ಮಿಕರಿಗೆ 2ನೇ ಹಂತದಲ್ಲಿ ಪ್ಯಾಕೇಜ್ ರಿಲೀಸ್​ ಮಾಡುತ್ತಿದ್ದೇವೆ. ಇದರಲ್ಲಿ ಸಿನಿಮಾ ತಂತ್ರಜ್ಞರು, ಕಾರ್ಮಿಕರ ಸೇರ್ಪಡೆ ಮಾಡುತ್ತಿದ್ದೇವೆ ಎಂದಿದ್ದರು. ಅಂತೆಯೇ ಸರ್ಕಾರ ಈಗ ಕಾರ್ಮಿಕರಿಗೆ ಮೂರು ಸಾವಿರ ರೂಪಾಯಿ ನೀಡುತ್ತಿದೆ. ಕರ್ನಾಟಕದಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: Lockdown Guidelines: ಜೂನ್ 14ರವರೆಗೆ ಲಾಕ್​ಡೌನ್ ಮುಂದುವರಿಕೆ; 500 ಕೋಟಿ ಆರ್ಥಿಕ ಪ್ಯಾಕೇಜ್: ಸಿಎಂ ಯಡಿಯೂರಪ್ಪ ಘೋಷಣೆ

Published On - 5:54 pm, Thu, 3 June 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು