AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್​; ಸಿಎಂ ಯಡಿಯೂರಪ್ಪಗೆ ಧನ್ಯವಾದ ಹೇಳಿದ ಸುನೀಲ್ ಪುರಾಣಿಕ್

ಕೊವಿಡ್​ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು.

ಸಿನಿಮಾ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್​;  ಸಿಎಂ ಯಡಿಯೂರಪ್ಪಗೆ ಧನ್ಯವಾದ ಹೇಳಿದ ಸುನೀಲ್ ಪುರಾಣಿಕ್
ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಿಎಂಗೆ ಪುರಾಣಿಕ್ ಮನವಿ
Follow us
ರಾಜೇಶ್ ದುಗ್ಗುಮನೆ
|

Updated on:Jun 03, 2021 | 5:59 PM

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್​ನಲ್ಲಿ ಚಿತ್ರರಂಗದ ಕಾರ್ಮಿಕರನ್ನು ಗಣನೆಗೆ ತೆಗೆದುಕೊಳ್ಳಲಾಗಿದ್ದು, ತಲಾ 3000 ರೂಪಾಯಿ ನೀಡಲಾಗುತ್ತಿದೆ.

ಕೊರೊನಾ ವೈರಸ್​ ನಿಯಂತ್ರಣಕ್ಕೆ ಹೇರಿರುವ ಲಾಕ್​ಡೌನ್​ನಿಂದ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಕರು ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ, ಇವರಿಗೆ ವಿಶೇಷ ಪ್ಯಾಕೇಜ್​ ನೀಡುವಂತೆ ಕೋರಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಸರ್ಕಾರ ಇದಕ್ಕೆ ಈಗ ಸ್ಪಂದಿಸಿದೆ.

ಕೊವಿಡ್​ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು. ಇನ್ನು, ಸಾಕಷ್ಟು ಸಿನಿಮಾಗಳು ಘೋಷಣೆ ಆಗಿ, ಶೂಟಿಂಗ್​ ಕೂಡ ಶುರುವಾಗಿತ್ತು. ಹೀಗಾಗಿ, ಎಲ್ಲವೂ ಮತ್ತೆ ಮೊದಲಿನಂತಾಯಿತು ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಏಕಾಏಕಿ ಕೊವಿಡ್​ ಎರಡನೇ ಅಲೆ ಹೆಚ್ಚಿದ್ದರಿಂದ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇತ್ತೀಚೆಗೆ ಮಾತನಾಡಿದ್ದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಸಿನಿಮಾ ಕಾರ್ಮಿಕರಿಗೆ 2ನೇ ಹಂತದಲ್ಲಿ ಪ್ಯಾಕೇಜ್ ರಿಲೀಸ್​ ಮಾಡುತ್ತಿದ್ದೇವೆ. ಇದರಲ್ಲಿ ಸಿನಿಮಾ ತಂತ್ರಜ್ಞರು, ಕಾರ್ಮಿಕರ ಸೇರ್ಪಡೆ ಮಾಡುತ್ತಿದ್ದೇವೆ ಎಂದಿದ್ದರು. ಅಂತೆಯೇ ಸರ್ಕಾರ ಈಗ ಕಾರ್ಮಿಕರಿಗೆ ಮೂರು ಸಾವಿರ ರೂಪಾಯಿ ನೀಡುತ್ತಿದೆ. ಕರ್ನಾಟಕದಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: Lockdown Guidelines: ಜೂನ್ 14ರವರೆಗೆ ಲಾಕ್​ಡೌನ್ ಮುಂದುವರಿಕೆ; 500 ಕೋಟಿ ಆರ್ಥಿಕ ಪ್ಯಾಕೇಜ್: ಸಿಎಂ ಯಡಿಯೂರಪ್ಪ ಘೋಷಣೆ

Published On - 5:54 pm, Thu, 3 June 21

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ