AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIFFES 2023: ಬೆಂಗಳೂರು ಚಿತ್ರೋತ್ಸವಕ್ಕೆ ಸರ್ಕಾರದಿಂದ 4.49 ಕೋಟಿ ರೂ. ಅನುದಾನ; ಮಾ.23ರಂದು ಚಾಲನೆ

R Ashok | 14th Bengaluru International Film Festival: 14ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಮಾರ್ಚ್​ 23ರಂದು ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ.

ಮದನ್​ ಕುಮಾರ್​
|

Updated on:Feb 08, 2023 | 4:53 PM

Share

ಸಿನಿಮಾಸಕ್ತರ ಪಾಲಿನ ಹಬ್ಬ ಎಂದೇ ಕರೆಯಲ್ಪಡುವ ‘ಬೆಂಗಳೂರು ಸಿನಿಮೋತ್ಸವ’ದ (BIFFES) 14ನೇ ಆವೃತ್ತಿಗೆ ಸಿದ್ಧತೆಗಳು ನಡೆಯುತ್ತಿವೆ. ಪ್ರತಿ ಬಾರಿಯಂತೆ ಈ ವರ್ಷ ಕೂಡ ಅದ್ದೂರಿಯಾಗಿ ಸಿನಿಮೋತ್ಸವ ಮಾಡಲಾಗುವುದು. ಈ ಕುರಿತು ಮಾಹಿತಿ ನೀಡಲು ಇಂದು (ಫೆ.8) ಕಂದಾಯ ಸಚಿವ ಆರ್​. ಅಶೋಕ್​ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ‘14ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ’ (14th Bengaluru International Film Festival) ಸಲುವಾಗಿ ಕರ್ನಾಟಕ ಸರ್ಕಾರದಿಂದ 4.49 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ, ಈ ಸಿನಿಮೋತ್ಸವದಲ್ಲಿ ಪ್ರಶಸ್ತಿ ಗೆಲ್ಲುವ ಚಿತ್ರಗಳಿಗೆ ನೀಡುವ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸಲು ಸಲಹೆ ನೀಡಿರುವುದಾಗಿ ಆರ್​. ಅಶೋಕ್​ (R Ashok) ತಿಳಿಸಿದ್ದಾರೆ.

14ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ಕುರಿತಂತೆ ಪೂರ್ವಭಾವಿ ಸಭೆ ನಡೆಸಲಾಯಿತು. ಅದರಲ್ಲಿ ಚಿತ್ರರಂಗದ ಹಲವರು ಭಾಗಿ ಆಗಿದ್ದರು. ಅಶೋಕ್​ ಕಶ್ಯಪ್​, ಸುನೀಲ್​ ಪುರಾಣಿಕ್​, ಭಾ.ಮ. ಹರೀಶ್​, ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು ಮುಂತಾದವರ ಜೊತೆ ಚರ್ಚೆ ನಡೆಸಲಾಯಿತು. ಆ ಬಳಿಕ ಆರ್​. ಅಶೋಕ್​ ಸುದ್ದಿಗೋಷ್ಠಿ ನಡೆಸಿದರು. ಈ ಬಾರಿಯ ಸಿನಿಮೋತ್ಸವದ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು.

ಮಾರ್ಚ್​ 23ರಂದು ಬೆಂಗಳೂರು ಸಿನಿಮೋತ್ಸವ ಉದ್ಘಾಟನೆ:

ವಿಧಾನಸೌಧದ ಮುಂಭಾಗದಲ್ಲಿ ಮಾರ್ಚ್​ 23ರಂದು 14ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಉದ್ಘಾಟನೆ ಆಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ. ಈ ಸಮಾರಂಭಕ್ಕೆ ಬೇರೆ ಭಾಷೆಯ ಹೆಸರಾಂತ ನಟ-ನಟಿಯರನ್ನು ಅತಿಥಿಗಳನ್ನಾಗಿ ಕರೆಸಲು ಪ್ರಯತ್ನಿಸಲಾಗುತ್ತಿದೆ. ಯಾವ ಕಲಾವಿದರ ಹೆಸರು ಅಂತಿಮವಾಗಲಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ
Image
2023ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ದಿನಾಂಕ ರಿವೀಲ್
Image
ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ‘ಕೆಜಿಎಫ್​’ ಚಿತ್ರವನ್ನು ಹಾಡಿ ಹೊಗಳಿದ ರಾಣಾ ದಗ್ಗುಬಾಟಿ
Image
ದೇವರ ಬಗೆಗಿನ ಗ್ರಹಿಕೆ ಬಗ್ಗೆ ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ
Image
ಸಿನಿಮೋತ್ಸವದ ಬಗ್ಗೆ ಗೌರವ ಇಲ್ಲದವರು ಅದನ್ನು ಉತ್ಸವ ಆಗಿ ಆಚರಿಸಲು ಹೇಗೆ ಸಾಧ್ಯ? ರಾಜ್​ ಬಿ. ಶೆಟ್ಟಿ ಪ್ರಶ್ನೆ

ಇದನ್ನೂ ಓದಿ: ಬೆತ್ತಲಾಗಿ ಕಾನ್ ಸಿನಿಮೋತ್ಸವದ ರೆಡ್ ಕಾರ್ಪೆಟ್​ ಮೇಲೆ ನಡೆದ ಯುವತಿ; ಮುಜುಗರ ತಂದ ಘಟನೆ

ಓರಿಯನ್​ ಮಾಲ್​ನಲ್ಲಿ ಸಿನಿಮಾ ಪ್ರದರ್ಶನ:

ಬೆಂಗಳೂರಿನ ರಾಜಾಜಿನಗರದಲ್ಲಿ ಇರುವ ಓರಿಯನ್​ ಮಾಲ್​ನ 11 ಪರದೆಗಳಲ್ಲಿ ಸಿನಿಮಾಗಳು ಪ್ರದರ್ಶನ ಆಗಲಿವೆ. ಅಂದಾಜು 300 ಸಿನಿಮಾಗಳನ್ನು ಇದಕ್ಕಾಗಿ ಆಯ್ಕೆ ಮಾಡಲಾಗಿದೆ. ಹಲವು ರಾಷ್ಟ್ರಗಳ ಸಿನಿಮಾಗಳನ್ನು ನೋಡುವ ಅವಕಾಶ ಸಿನಿಮಾಸಕ್ತರಿಗೆ ಸಿಗಲಿದೆ. ಇತ್ತೀಚೆಗೆ ನಿಧನರಾದ ಕೆ. ವಿಶ್ವನಾಥ್​, ವಾಣಿ ಜಯರಾಂ ಅವರಿಗೆ ನಮನ ಸಲ್ಲಿಸಲಾಗುವುದು.

ಇದನ್ನೂ ಓದಿ: ಸಿನಿಮೋತ್ಸವದ ಬಗ್ಗೆ ಗೌರವ ಇಲ್ಲದವರು ಅದನ್ನು ಉತ್ಸವ ಆಗಿ ಆಚರಿಸಲು ಹೇಗೆ ಸಾಧ್ಯ? ರಾಜ್​ ಬಿ. ಶೆಟ್ಟಿ ಪ್ರಶ್ನೆ

ಪ್ರಶಸ್ತಿಯ ನಗದು ಬಹುಮಾನ ಹೆಚ್ಚಳಕ್ಕೆ ಆರ್​. ಅಶೋಕ್ ಸಲಹೆ:

‘ಇದು ಅಂತಾರಾಷ್ಟ್ರೀಯ ಮಟ್ಟದ ಸಿನಿಮೋತ್ಸವ. ಹಾಗಾಗಿ ಬಹುಮಾನದ ಮೊತ್ತ ಕೂಡ ಒಳ್ಳೆಯ ರೀತಿಯಲ್ಲಿ ಇರಬೇಕು. ಈಗ ಇರುವುದು 5 ವರ್ಷಗಳ ಹಿಂದೆ ನಿಗದಿ ಮಾಡಿದ್ದ ಮೊತ್ತ. ಅದನ್ನು ಹೆಚ್ಚಿಸಬೇಕು ಅಂತ ನಾನು ಸಲಹೆ ನೀಡಿದ್ದೇನೆ. ಕೆಲವೇ ದಿನಗಳಲ್ಲಿ ಅದು ನಿರ್ಣಯ ಆಗಲಿದೆ’ ಎಂದು ಆರ್​. ಅಶೋಕ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:53 pm, Wed, 8 February 23

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ