AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಚಿತ್ರಮಂದಿರದಲ್ಲಿ ಹೌಸ್​ಫುಲ್​ಗೆ ಅವಕಾಶ?; ಸಭೆಯಲ್ಲಿ ಸಿಎಂ ಕಡೆಯಿಂದ ಸಕಾರಾತ್ಮಕ ಸ್ಪಂದನೆ

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ತಂದ ಟಫ್​ ರೂಲ್ಸ್​ನಿಂದಾಗಿ ಹಲವು ನಿರ್ಮಾಪಕರಿಗೆ ಸಿನಿಮಾ ರಿಲೀಸ್​ ಮಾಡೋಕೆ ಆಗಿಲ್ಲ. ಈಗಾಗಲೇ ಹಲವು ಪ್ರೊಡ್ಯೂಸರ್​ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಮಾಡುವುದರ ಜತೆಗೆ ಸಾಲದ ಹೊರೆಯನ್ನೂ ಹೊತ್ತಿದ್ದಾರೆ.

ಶೀಘ್ರವೇ ಚಿತ್ರಮಂದಿರದಲ್ಲಿ ಹೌಸ್​ಫುಲ್​ಗೆ ಅವಕಾಶ?; ಸಭೆಯಲ್ಲಿ ಸಿಎಂ ಕಡೆಯಿಂದ ಸಕಾರಾತ್ಮಕ ಸ್ಪಂದನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
TV9 Web
| Edited By: |

Updated on:Jan 31, 2022 | 6:04 PM

Share

ಕೊವಿಡ್ (Covid 19) ಕಾಣಿಸಿಕೊಂಡಾಗಿನಿಂದಲೂ ಸಾಕಷ್ಟು ತೊಂದರೆಗೆ ಸಿಲುಕಿರುವ ಚಿತ್ರರಂಗಕ್ಕೆ ಇತ್ತೀಚೆಗೆ ಸರ್ಕಾರದ ಹೊಸ ನಿಯಮದಿಂದ ನಿರಾಸೆ ಆಗಿತ್ತು. ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆ ಮುಂದುವರಿಸಲು ಸರ್ಕಾರ ಆದೇಶಿಸಿತ್ತು. ಈ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಶೀಘ್ರವೇ ಚಿತ್ರಮಂದಿರದಲ್ಲಿ ಹೌಸ್​ಫುಲ್​ಗೆ (100 Percent Occupency) ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗಳ (Basavaraj Bommai) ಜತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಸಭೆ ನಡೆಸಿದ್ದಾರೆ. ಈ ವೇಳೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. 

‘ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿ ವಿಚಾರಕ್ಕೆ ಸಂಬಂಧಿಸಿ 4-5 ದಿನಗಳಲ್ಲಿ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಪೂರ್ಣ ಮಾಹಿತಿ ನೀಡುವಂತೆ ಸಿಎಂ ಕೇಳಿದರು. ತಜ್ಞರ ಜತೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಜೈರಾಜ್ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಫಿಲ್ಮ್ ಚೇಂಬರ್​ ಆಕ್ರೋಶ ಹೊರಹಾಕಿತ್ತು. ‘ಚಿತ್ರೋದ್ಯಮದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬೇರೆ ಎಲ್ಲಾ ಉದ್ಯಮಗಳಿಗೂ ಸರ್ಕಾರ ಅವಕಾಶ ನೀಡಿದೆ.  ಚಿತ್ರೋದ್ಯಮಕ್ಕೆ ಯಾಕೆ ಸಂಪೂರ್ಣ ಅವಕಾಶ ನೀಡುತ್ತಿಲ್ಲ? ಈಗಾಗಲೇ ನಿರ್ಮಾಪಕರು, ಕಲಾವಿದರು ಬೀದಿಗೆ ಬಂದಿದ್ದಾರೆ. ಥಿಯೇಟರ್​ಗಳಿಗೆ ಶೇ.100ರಷ್ಟು ಆಸನ ವ್ಯವಸ್ಥೆಗೆ ಅವಕಾಶ ನೀಡಲಿ’ ಎಂದು ಫಿಲ್ಮ್ ಚೇಂಬರ್ ಕಾರ್ಯದರ್ಶಿ ಎನ್.ಎಂ.ಸುರೇಶ್ ಹೇಳಿಕೆ ನೀಡಿದ್ದರು.

‘ಎಲ್ಲ ಕ್ಷೇತ್ರಗಳಿಗೂ 50:50 ನಿಯಮದಿಂದ ವಿನಾಯಿತಿ ಸಿಕ್ಕಿದೆ. ಆದರೆ, ಚಿತ್ರಮಂದಿರಗಳಿಗೆ ಮಾತ್ರ ಏಕೆ ರಿಲ್ಯಾಕ್ಸ್ ಕೊಟ್ಟಿಲ್ಲ ಗೊತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಮಾಡುತ್ತೇನೆ. ಅವರು ಯಾವಾಗಲೂ ಇಂಡಸ್ಟ್ರಿ ಪರವಾಗಿದ್ದಾರೆ’ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದರು

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ತಂದ ಟಫ್​ ರೂಲ್ಸ್​ನಿಂದಾಗಿ ಹಲವು ನಿರ್ಮಾಪಕರಿಗೆ ಸಿನಿಮಾ ರಿಲೀಸ್​ ಮಾಡೋಕೆ ಆಗಿಲ್ಲ. ಈಗಾಗಲೇ ಹಲವು ಪ್ರೊಡ್ಯೂಸರ್​ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಮಾಡುವುದರ ಜತೆಗೆ ಸಾಲದ ಹೊರೆಯನ್ನೂ ಹೊತ್ತಿದ್ದಾರೆ. ಈ ಎಲ್ಲಾ ಕಾರಣದಿಂದ ಚಿತ್ರಮಂದಿರದ ಮೇಲೆ ಹೇರಿರುವ ನಿರ್ಬಂಧ ತೆಗೆಯಬೇಕು ಎಂಬುದು ಚಿತ್ರರಂಗದವರ ಒತ್ತಾಯ. ಒಂದೊಮ್ಮೆ ಥಿಯೇಟರ್​ಗಳಲ್ಲಿ ಹೌಸ್​ಫುಲ್​ಗೆ ಅವಕಾಶ ನೀಡಿದರೆ ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್​ ಆಗಲಿವೆ. ಇದರಿಂದ ಚಿತ್ರರಂಗಕ್ಕೆ ಮೊದಲಿನ ಕಳೆ ಬರಲಿದೆ.

ಇದನ್ನೂ ಓದಿ: ಲಸಿಕೆ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಸುಪ್ರೀಂಗೆ ತಿಳಿಸಿದ ಕೇಂದ್ರ; ಗೊಂದಲದಲ್ಲಿವೆ ಚಿತ್ರಮಂದಿರಗಳು

ಎಲ್ಲ ಕ್ಷೇತ್ರಗಳಿಗೂ ವಿನಾಯಿತಿ ಆದರೆ, ಚಿತ್ರಮಂದಿರಗಳಿಗೆ ಯಾಕಿಲ್ಲ; ನಟ ಶಿವರಾಜ್ ಕುಮಾರ್ ಹೇಳಿದ್ದೇನು..?

Published On - 6:01 pm, Mon, 31 January 22

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!