AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ಚಿತ್ರರಂಗಕ್ಕೆ ಗುಡ್​ನ್ಯೂಸ್​; ಸಿನಿಮಾ ಕಾರ್ಮಿಕರಿಗೆ 2ನೇ ಹಂತದಲ್ಲಿ ಪ್ಯಾಕೇಜ್

Lockdown Relief Fund: ಕೊವಿಡ್​ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು. ಆದರೆ, ಈಗ ಸಿನಿಮಾ ಕೆಲಸ ನಿಂತಿದೆ.

ಸರ್ಕಾರದಿಂದ ಚಿತ್ರರಂಗಕ್ಕೆ ಗುಡ್​ನ್ಯೂಸ್​; ಸಿನಿಮಾ ಕಾರ್ಮಿಕರಿಗೆ 2ನೇ ಹಂತದಲ್ಲಿ ಪ್ಯಾಕೇಜ್
ಡಿಸಿಎಂ ಅಶ್ವತ್ಥನಾರಾಯಣ
ರಾಜೇಶ್ ದುಗ್ಗುಮನೆ
| Edited By: |

Updated on:May 31, 2021 | 2:57 PM

Share

ಕೊರೊನಾ ವೈರಸ್​ ನಿಯಂತ್ರಣಕ್ಕೆ ಹೇರಿರುವ ಲಾಕ್​ಡೌನ್​ನಿಂದ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಕರು ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ, ಇವರಿಗೆ ವಿಶೇಷ ಪ್ಯಾಕೇಜ್​ ನೀಡುವಂತೆ ಕೋರಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಇಂದು (ಮೇ 31) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಈಗ, ಸರ್ಕಾರ ಇದಕ್ಕೆ ಸ್ಪಂದಿಸಿದ್ದು, ಎರಡನೇ ಹಂತದಲ್ಲಿ ಸಿನಿಮಾ ಕಾರ್ಮಿಕರಿಗೆ ಹಣ ಬಿಡುಗಡೆ ಮಾಡುತ್ತಿದೆ.

ಕೊವಿಡ್​ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು. ಇನ್ನು, ಸಾಕಷ್ಟು ಸಿನಿಮಾಗಳು ಘೋಷಣೆ ಆಗಿ, ಶೂಟಿಂಗ್​ ಕೂಡ ಶುರುವಾಗಿತ್ತು. ಹೀಗಾಗಿ, ಎಲ್ಲವೂ ಮತ್ತೆ ಮೊದಲಿನಂತಾಯಿತು ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಏಕಾಏಕಿ ಕೊವಿಡ್​ ಎರಡನೇ ಅಲೆ ಹೆಚ್ಚಿದ್ದರಿಂದ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ತಕ್ಷಣವೇ ಚಿತ್ರೋದ್ಯಮದ ನೆರವಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಸುನೀಲ್ ಪುರಾಣಿಕ್ ಮನವಿಯಲ್ಲಿ ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ಪ್ಯಾಕೇಜ್ ಘೋಷಣೆ ಸಂದರ್ಭದಲ್ಲಿ ಚಿತ್ರೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದರು.

ಈ ಬಗ್ಗೆ ಈಗ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಬೆಂಗಳೂರಿನಲ್ಲಿ ಸೋಮವಾರ (ಮೇ 31) ಮಾತನಾಡಿದ್ದಾರೆ. ಲಾಕ್‌ಡೌನ್ ಬಗ್ಗೆ ನಿರ್ಧರಿಸಲು ಇನ್ನೂ ಸಮಯವಿದೆ. ಕೊರೊನಾ ಪ್ರಕರಣ ಆಧರಿಸಿ ಲಾಕ್‌ಡೌನ್ ತೀರ್ಮಾನ ಮಾಡುತ್ತೇವೆ. ಸಿನಿಮಾ ಕಾರ್ಮಿಕರಿಗೆ 2ನೇ ಹಂತದಲ್ಲಿ ಪ್ಯಾಕೇಜ್ ರಿಲೀಸ್​ ಮಾಡುತ್ತಿದ್ದೇವೆ. ಇದರಲ್ಲಿ ಸಿನಿಮಾ ತಂತ್ರಜ್ಞರು, ಕಾರ್ಮಿಕರ ಸೇರ್ಪಡೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಚಿತ್ರರಂಗದ ತಂತ್ರಜ್ಞರಿಗೆ ವಿಶೇಷ ಪ್ಯಾಕೇಜ್​ ಘೋಷಿಸಿ; ಸಿಎಂ ಯಡಿಯೂರಪ್ಪ ಬಳಿ ಸುನೀಲ್​ ಪುರಾಣಿಕ್​, ನಟಿ ತಾರಾ ಮನವಿ

Published On - 2:51 pm, Mon, 31 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು