AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರ ಶಿವರಾಂ ಅಂತ್ಯಕ್ರಿಯೆ; ಹಿರಿಯ ನಟನ ಹೆಸರನ್ನು ಚಿರಸ್ಥಾಯಿಯಾಗಿಸುವ ಭರವಸೆ ನೀಡಿದ ಸಚಿವ ಆರ್​.ಅಶೋಕ್

Actor Shivaram: ನಟ ಶಿವರಾಂ ಅವರ ನೆನಪನ್ನು ಚಿರಸ್ಥಾಯಿಯಾಗಿಸುವ ಕೆಲಸ ಮಾಡಲಾಗುವುದು ಎಂದು ಸಚಿವ ಆರ್.ಅಶೋಕ್ ನುಡಿದಿದ್ದಾರೆ. ನಾಳೆ (ಡಿ.04) ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಭಾನುವಾರ ಶಿವರಾಂ ಅಂತ್ಯಕ್ರಿಯೆ; ಹಿರಿಯ ನಟನ ಹೆಸರನ್ನು ಚಿರಸ್ಥಾಯಿಯಾಗಿಸುವ ಭರವಸೆ ನೀಡಿದ ಸಚಿವ ಆರ್​.ಅಶೋಕ್
ನಟ ಶಿವರಾಂ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 04, 2021 | 5:17 PM

Share

ಬೆಂಗಳೂರು: ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ (S Shivaram) ಅವರ ಹೆಸರನ್ನು ಚಿರಸ್ಥಾಯಿಯಾಗಿಸುವ ಕೆಲಸವನ್ನು ಮಾಡುತ್ತೇವೆ ಎಂದು ಸಚಿವ ಆರ್.ಅಶೋಕ್ (R Ashok) ನುಡಿದಿದ್ದಾರೆ. ಶಿವರಾಂ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಅವರು ಮಾತನಾಡಿದರು. ಶಿವರಾಂ ಅವರ ನಿಧನ ಕರ್ನಾಟಕಕ್ಕೆ ಶೋಕ ತಂದೊಡ್ಡಿದ್ದು, ನಮ್ಮವರನ್ನು ಕಳೆದುಕೊಂಡಿದ್ದರಿಂದ ನಮಗೆ ನೋವಾಗಿದೆ. ಅವರ ಹೆಸರು ಚಿರಸ್ಥಾಯಿಯಾಗಿರುವಂತೆ ಕೆಲಸ ಮಾಡುತ್ತೇವೆ. ನನ್ನ ಕ್ಷೇತ್ರದಲ್ಲಿ ಅವರ ನೆನಪು ಉಳಿಸುವ ಕೆಲಸ ಮಾಡುತ್ತೇವೆ. ಯಾವುದಾದರೂ ಕಟ್ಟಡ, ರಸ್ತೆಗೆ ಶಿವರಾಂ ಹೆಸರಿಡುತ್ತೇವೆ’’ ಎಂದು ಸಚಿವರು ಹೇಳಿದ್ದಾರೆ. ಶಿವರಾಂ ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡ ಅಶೋಕ್, ತಿಂಗಳಿಗೆ ಒಮ್ಮೆಯಾದರೂ ಬಂದು ನನ್ನ ಜತೆ ಮಾತನಾಡುತ್ತಿದ್ದರು. ತುಂಬಾ ಸಂಭಾವಿತ ಕಲಾವಿದರು, ಹಿರಿಯ ಕಲಾವಿದರು. ಪುನೀತ್​ (Puneeth Rajkumar) ನಿಧನದ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಆಘಾತವಾಗಿದೆ’’ ಎಂದು ಕಂಬನಿ ಮಿಡಿದಿದ್ದಾರೆ. ನಾಳೆ (ಡಿಸೆಂಬರ್ 05) ರವೀಂದ್ರ ಕಲಾಕ್ಷೇತ್ರದಲ್ಲಿ (Raveendra Kalakshethra) 2 ಗಂಟೆಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಶಿವರಾಂ ಅವರ ಕಾರ್ಯಗಳನ್ನು ಸ್ಮರಿಸಿದ ಸಚಿವ ಅಶೋಕ್, ‘‘ಚಿತ್ರರಂಗದ ಬಹಳ ಹಿರಿಯ ನಟರು ಶಿವರಾಂ. ನಾಗರಹಾವು ಸಿನಿಮಾದಿಂದ ಹಿಡಿದು ಇದುವರೆಗೂ ನೂರಾರು ಚಿತ್ರದಲ್ಲಿ ನಟಿಸಿದ್ದಾರೆ. ಸಾಂಸಾರಿಕ ಚಿತ್ರಗಳಲ್ಲಿ ಹೆಚ್ಚು ನಟನೆ ಮಾಡಿದ್ದರು. ಡಾ. ರಾಜ್​ ಕುಮಾರ್ ಜೊತೆ ಮಾಲೆ ಹಾಕಿ ಅಯ್ಯಪ್ಪ ದರ್ಶನ ಮಾಡಿದವರು. ನಮ್ಮ ಆಫೀಸ್ ಗೆ ಬರುತ್ತಿದ್ದರು. ಸ್ವಂತ ಲೈಬ್ರರಿ ಸ್ಥಾಪನೆ ಮಾಡಿದ್ದರು. ತುಂಬಾ ಸಂಭಾವಿತ ಕಲಾವಿದರು ಶಿವರಾಮ್’’ ಎಂದು ಹೇಳಿದ್ದಾರೆ.

‘‘ಮೊನ್ನೆ ಪುನೀತ್ ಅವರನ್ನು ಕಳೆದುಕೊಂಡೆವು. ಅವರ ಫ್ಯಾಮಿಲಿ ಕೂಡ ಇಲ್ಲಿಗೆ ಬಂದಿದ್ದರು. ಮೈಸೂರು ಆಶ್ರಮದಲ್ಲಿ ಅನಾಥ ಮಕ್ಕಳಿದ್ದಾರೆ. ಅಲ್ಲಿ ಸಾವಿರ ಮಕ್ಕಳಿಗೆ ಅವಕಾಶ ಕಲ್ಪಿಸಬೇಕು. ಪುನೀತ್ ಅವರು ನಮ್ಮೊಂದಿಗಿಲ್ಲ. ಇವಾಗ ಇನ್ನೊಂದು ನೋವು. ನನ್ನನ್ನು ಶಿವರಾಂ ಅವರು ಕುಟುಂಬದ ವ್ಯಕ್ತಿ ಅಂಥ ಪರಿಚಯ ಮಾಡ್ಕೊಂಡ್ತಿದ್ದರು. ನಿನ್ನೆ ಆಸ್ಪತ್ರೆಗೆ ಹೋಗಿದ್ದೆ. ಅವರನ್ನು ನೋಡಿ ದುಖಃ ಆಯ್ತು’’ ಎಂದು ಅಶೋಕ್ ಹೇಳಿದ್ದಾರೆ.

‘‘ಕರ್ನಾಟಕದ ಜನತೆ ಅವರ ಸಿನಿಮಾಗಳನ್ನ ನೋಡಿದ್ದಾರೆ. ಅವರ ಕುಟುಂಬಕ್ಕೆ ದುಖಃ ಭರಿಸೋ ಶಕ್ತಿ ನೀಡಲಿ. ನಮ್ಮ ಕ್ಷೇತ್ರದಲ್ಲಿ ಅವರ ಹೆಸರು ಯಾವಾಗಲೂ ಇರುತ್ತದೆ. ಅವರ ನೆನಪು ಉಳಿಸೋ ಕೆಲಸವನ್ನು ಮಾಡುತ್ತೇವೆ. ಯಾವುದಾದರೂ ಕಟ್ಟಡಕ್ಕೆ ಅಥವಾ ರಸ್ತೆಗೆ ಅವರ ಹೆಸರು ಇಡುತ್ತೇವೆ. ನಾಳೆ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಎರಡು ಘಂಟೆ ಅಭಿಮಾನಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಬಳಿಕ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ಮಾಡಲಾಗುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’’ ಎಂದು ಅಶೋಕ್ ನುಡಿದಿದ್ದಾರೆ.

ನಾಳೆ 11ಕ್ಕೆ ಅಂತ್ಯಕ್ರಿಯೆ: ಶಿವರಾಂ ಪುತ್ರ ಲಕ್ಷ್ಮೀಶ್ ಮಾಹಿತಿ ಶಿವರಾಮ್ ಪುತ್ರ ಲಕ್ಷ್ಮೀಶ್ ಅಂತ್ಯಕ್ರಿಯೆಯ ಕುರಿತು ಮಾಹಿತಿ ನೀಡಿದ್ದಾರೆ. ‘‘ಬೆಳ್ಳಗ್ಗೆ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರವನ್ನು ರವಾನಿಸಲಾಗುವುದು. 7.30- 10 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿರಲಿದೆ. ನಂತರ 11 ಗಂಟೆಗೆ ಬನಶಂಕರಿಯ ಚಿತಗಾರದಲ್ಲಿ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ’’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:

Actor Shivarm: ಕ್ಯಾಮೆರಾದೊಂದಿಗೆ ನಟ ಶಿವರಾಂ; ಅಪರೂಪದ ಚಿತ್ರಗಳು ಇಲ್ಲಿವೆ

ಅಯ್ಯಪ್ಪ ಸ್ವಾಮಿ ಪೂಜೆ ವೇಳೆ ಶಿವರಾಂ ಮಾಡಿದ ಆ ಒಂದು ಕೆಲಸವೇ ಅವರ ಪ್ರಾಣಕ್ಕೆ ಮುಳುವಾಯ್ತಾ?

Published On - 5:05 pm, Sat, 4 December 21

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ