AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ರಜನಿಕಾಂತ್​ ಮೊದಲ ಸಲ ಪುನೀತ್​ ಅವರನ್ನು ನೋಡಿದ್ದು ಎಲ್ಲಿ? ದೇವರ ಸನ್ನಿಧಿಯ ಆ ಘಟನೆಯೇ ರೋಮಾಂಚಕ

Rajinikanth | Puneeth Rajkumar: ‘ಆ ಮಗುವಿನ ಧ್ವನಿ ಒಂದು ಜೇಂಕಾರದ ಸದ್ದಿನಂತೆ ಕೇಳಿಸಿತು. ಅದನ್ನು ಕೇಳಿ ಎಲ್ಲರಿಗೂ ರೋಮಾಂಚನ ಆಗಿಬಿಡ್ತು’ ಎಂದು ಆ ಘಟನೆಯನ್ನು ರಜನಿಕಾಂತ್​ ನೆನಪಿಸಿಕೊಂಡಿದ್ದಾರೆ.

Puneeth Rajkumar: ರಜನಿಕಾಂತ್​ ಮೊದಲ ಸಲ ಪುನೀತ್​ ಅವರನ್ನು ನೋಡಿದ್ದು ಎಲ್ಲಿ? ದೇವರ ಸನ್ನಿಧಿಯ ಆ ಘಟನೆಯೇ ರೋಮಾಂಚಕ
ಡಾ. ರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್, ರಜನಿಕಾಂತ್​
TV9 Web
| Edited By: |

Updated on:Nov 01, 2022 | 7:52 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಬಗ್ಗೆ ಎಷ್ಟು ಹೇಳಿದರೂ ಸಾಲದು. ಜನ ಸಾಮಾನ್ಯರಿಂದ ಸೆಲೆಬ್ರಿಟಿಗಳವರೆಗೆ ಎಲ್ಲರಿಗೂ ಪುನೀತ್ ಅಚ್ಚುಮೆಚ್ಚು ಆಗಿದ್ದರು. ಆದರೆ ಇಂದು ಅವರು ಇಲ್ಲ ಎಂಬುದು ನೋವಿನ ಸಂಗತಿ. ಮರಣೋತ್ತರವಾಗಿ ಪುನೀತ್​ ರಾಜ್​ಕುಮಾರ್​ ಅವರಿಗೆ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ನೀಡಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಈ ಸಮಾರಂಭದಲ್ಲಿ ‘ಸೂಪರ್​ ಸ್ಟಾರ್​’ ರಜನಿಕಾಂತ್​ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಆರಂಭದಲ್ಲಿ ಜೋರಾಗಿ ಮಳೆ ಸುರಿಯುತ್ತಿದ್ದ ಕಾರಣ ಅವರು ಚುಟುಕಾಗಿ ಮಾತು ಪೂರ್ಣಗೊಳಿಸಿದ್ದರು. ಪುನೀತ್​ ಪರವಾಗಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಳೆ ಕಡಿಮೆ ಆಯಿತು. ಆಗ ಮತ್ತೆ ರಜನಿಕಾಂತ್ (Rajinikanth) ಅವರು ತಮ್ಮ ಮನದ ಮಾತುಗಳನ್ನು ಹೇಳಲು ಮೈಕ್​ ಕೈಗೆತ್ತಿಕೊಂಡರು.

ಡಾ. ರಾಜ್​ಕುಮಾರ್​ ಮತ್ತು ರಜನಿಕಾಂತ್​ ಅವರ ಕುಟುಂಬದ ನಡುವೆ ಹಲವು ವರ್ಷಗಳಿಂದ ಒಡನಾಟ ಇದೆ. ಪುನೀತ್​ ರಾಜ್​ಕುಮಾರ್​ ಚಿಕ್ಕ ಬಾಲಕ ಆಗಿದ್ದಾಗ ಮೊದಲ ಬಾರಿ ಅವರನ್ನು ನೋಡಿದ ಘಟನೆಯನ್ನು ಇಂದು ರಜನಿಕಾಂತ್​ ನೆನಪು ಮಾಡಿಕೊಂಡಿದ್ದಾರೆ. ಅಯ್ಯಪ್ಪ ಸ್ವಾಮಿಯ ಸನ್ನಿಧಿಯಲ್ಲಿ ಅವರು ಮೊದಲ ಬಾರಿಗೆ ಅಪ್ಪು ಮುಖವನ್ನು ನೋಡಿದ್ದು. ಆ ಸನ್ನಿವೇಶವನ್ನು ಅವರು ತುಂಬ ಚೆನ್ನಾಗಿ ವಿವರಿಸಿದ್ದಾರೆ.

‘1979ರಲ್ಲಿ ನಾನು ಮೊದಲ ಬಾರಿಗೆ ಚೆನ್ನೈನಲ್ಲಿ ಪುನೀತ್​ ರಾಜ್​ಕುಮಾರ್​ ಅವರನ್ನು ನೋಡಿದೆ. ಅಲ್ಲಿ ನಂಬಿಯಾರ್​ ಸ್ವಾಮಿ ಅಂತ ಇದ್ದಾರೆ. ಅವರು ಪ್ರತಿ ವರ್ಷ ಶಬರಿಮಲೆಗೆ ಬಂದು 48 ಕಿಲೋಮೀಟರ್​ ನಡೆದುಹೋಗ್ತಾರೆ. ಅವರ ಜೊತೆ 250 ಜನ ಸ್ವಾಮಿಗಳು ಹೋಗ್ತಾರೆ. ಅವರೊಂದಿಗೆ ಜೊತೆ ಡಾ. ರಾಜ್​ಕುಮಾರ್​ ಕೂಡ ಬರುತ್ತಿದ್ದರು. ಇರುಮುಡಿ ಕಟ್ಟಿದಾಗ ಸ್ವಾಮಿಯೇ ಶರಣಂ ಅಯ್ಯಪ್ಪ ಎನ್ನಬೇಕು. ಪ್ರತಿ ವರ್ಷ ವೀರಮಣಿ ಎಂಬ ದೊಡ್ಡ ಗಾಯಕ ಅದನ್ನು ಹೇಳುತ್ತಿದ್ದರು. ಆದರೆ 1979ರಲ್ಲಿ ಚಿಕ್ಕ ಮಗುವೊಂದು ಸ್ವಾಮಿಯೇ ಶರಣಂ ಅಯ್ಯಪ್ಪ ಅಂತ ಕೂಗಿದ್ದು ಕೇಳಿಸಿತು’ ಎಂದು ಆ ದಿನಗಳ ನೆನಪಿನ ಪುಟ ತೆರೆದಿದ್ದಾರೆ ರಜನಿಕಾಂತ್​.

ಇದನ್ನೂ ಓದಿ
Image
Karnataka Ratna: ಪುನೀತ್​ ರಾಜ್​ಕುಮಾರ್​ಗೆ ‘ಕರ್ನಾಟಕ ರತ್ನ’: ಅಪ್ಪು ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
Image
ಅಪ್ಪುಗೆ ಕರ್ನಾಟಕ ರತ್ನ: ಬೆಂಗಳೂರಿಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ವಿಡಿಯೋ
Image
Karnataka Rajyotsava 2022 Highlights : ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಬದಲಾವಣೆ: ಬೊಮ್ಮಾಯಿ ಘೋಷಣೆ
Image
Puneeth Rajkumar Samadhi: ಪುನೀತ್​​ ಸಮಾಧಿ ಎದುರು ಕಣ್ಣೀರು ಹಾಕುತ್ತಿರುವ ಫ್ಯಾನ್ಸ್​; ಮಾಸುವಂಥದ್ದಲ್ಲ ಈ ನೋವು

‘ಆ ಮಗುವಿನ ಧ್ವನಿ ಒಂದು ಜೇಂಕಾರದ ಸದ್ದಿನಂತೆ ಇತ್ತು. ಅದನ್ನು ಕೇಳಿ ಎಲ್ಲರಿಗೂ ರೋಮಾಂಚನ ಆಗಿಬಿಡ್ತು. ಯಾರ ಧ್ವನಿ ಎಂದು ಹೋಗಿ ನೋಡಿದರೆ ಡಾ. ರಾಜ್​ಕುಮಾರ್​ ಅವರ ಮಡಿಲಿನಲ್ಲಿ ನಾಲ್ಕು ವರ್ಷದ ಚಿಕ್ಕ ಮಗು ಕುಳಿತಿತ್ತು. ಕಪ್ಪು ಬಣ್ಣದ ಮಗುವಿನ ಮುಖದಲ್ಲಿ ಚಂದ್ರನಂತಹ ಕಳೆ. ಎಲ್ಲರಿಗೂ ಆ ಮಗುವನ್ನು ಕಂಡರೆ ಇಷ್ಟ. ಆ ಮಗುವನ್ನು ಅಣ್ಣಾವ್ರು ಹೆಗಲ ಮೇಲೆ ಕೂರಿಸಿಕೊಂಡು 48 ಕಿಲೋಮೀಟರ್​ ನಡೆಯುತ್ತಿದ್ದರು. ಆ ಮಗುವೇ ನಮ್ಮ ಅಪ್ಪು’ ಎಂದಿದ್ದಾರೆ ರಜನಿಕಾಂತ್​.

‘ಅಂದು ನೋಡಿದ ನಮ್ಮ ಪುನೀತ್​ ಬೆಳೆದು ಸ್ಟಾರ್​ ಆದ. ಅಪ್ಪು ಸಿನಿಮಾ 100 ಡೇಸ್​ ಓಡಿತು. ನನ್ನ ಕೈಯಾರೆ ಶೀಲ್ಡ್​ ನೀಡಿದ್ದೆ. ಇಂದು ಅಪ್ಪು ಇಲ್ಲ ಎಂಬುದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಪ್ಪು ನಿಧನರಾದಾಗ ನನಗೆ ಆಪರೇಷನ್​ ಆಗಿ ಐಸಿಯುನಲ್ಲಿ ಇದ್ದೆ. ಮೂರು ದಿನ ಆದ ಬಳಿಕ ನನಗೆ ವಿಷಯ ತಿಳಿಯಿತು’ ಎಂದು ರಜನಿಕಾಂತ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:52 pm, Tue, 1 November 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ