AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಟುಂಬಸ್ಥರ ಜತೆ ಚರ್ಚಿಸಿ ಪುನೀತ್​ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ದಿನಾಂಕ ಘೋಷಿಸುತ್ತೇವೆ’; ಬಸವರಾಜ ಬೊಮ್ಮಾಯಿ

ಪುನೀತ್ ರಾಜ್​ಕುಮಾರ್ ಅವರಿಗೆ 47ನೇ ಜನ್ಮದಿನ. ಇಂದು ಅವರಿಲ್ಲದೇ ನಾವೆಲ್ಲ ದುಃಖದಲ್ಲಿದ್ದೇವೆ. ಅವರ ಬದುಕು ನಮ್ಮೆಲ್ಲರಿಗೂ ಸ್ಫೂರ್ತಿ ಎಂದರು ಸಿಎಂ ಬಸವರಾಜ ಬೊಮ್ಮಾಯಿ.

‘ಕುಟುಂಬಸ್ಥರ ಜತೆ ಚರ್ಚಿಸಿ ಪುನೀತ್​ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ದಿನಾಂಕ ಘೋಷಿಸುತ್ತೇವೆ’; ಬಸವರಾಜ ಬೊಮ್ಮಾಯಿ
ಪುನೀತ್​-ಬಸವರಾಜ್ ಬೊಮ್ಮಾಯಿ
TV9 Web
| Edited By: |

Updated on: Mar 17, 2022 | 3:22 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ಕನ್ನಡ ಚಿತ್ರರಂಗಕ್ಕೆ ಹಾಗೂ ನಮ್ಮ ಸಮಾಜಕ್ಕೆ ನೀಡಿದ ಕೊಡುಗೆ ದೊಡ್ಡದು. ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ (Karnataka Ratna Award) ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಕಳೆದ ವರ್ಷ ಘೋಷಣೆ ಮಾಡಿದ್ದರು. ಆದರೆ, ಈ ಪ್ರಶಸ್ತಿಯನ್ನು ಯಾವಾಗ ನೀಡಲಾಗುತ್ತದೆ ಎನ್ನುವ ಬಗ್ಗೆ ಸರ್ಕಾರ ಘೋಷಣೆ ಮಾಡಿಲ್ಲ. ಇಂದು (ಮಾರ್ಚ್​ 17) ಪುನೀತ್​ ಜನ್ಮದಿನ. ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ‘ಸದ್ಯದಲ್ಲೇ ನಟ ಪುನೀತ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತೇವೆ. ಕುಟುಂಬಸ್ಥರ ಜತೆ ಚರ್ಚಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತೇವೆ’ ಎಂದರು.

ಪುನೀತ್​ ಅವರನ್ನು ಕಂಡರೆ ಬೊಮ್ಮಾಯಿಗೆ ಅಚ್ಚುಮೆಚ್ಚು. ಪುನೀತ್​ ಬಗ್ಗೆ ನಾಲ್ಕು ಒಳ್ಳೆಯ ಮಾತುಗಳನ್ನು ಅವರು ಆಡಿದರು. ‘ಪುನೀತ್ ರಾಜ್​ಕುಮಾರ್ ಅವರಿಗೆ 47ನೇ ಜನ್ಮದಿನ. ಇಂದು ಅವರಿಲ್ಲದೇ ನಾವೆಲ್ಲ ದುಃಖದಲ್ಲಿದ್ದೇವೆ. ಅವರ ಬದುಕು ನಮ್ಮೆಲ್ಲರಿಗೂ ಸ್ಫೂರ್ತಿ. ಅವರ ಸಿನಿಮಾ ‘ಜೇಮ್ಸ್’ ಕೂಡ ಬಿಡುಗಡೆಯಾಗಿದೆ. ಸಿನಿಮಾ ಯಶಸ್ವಿಯಾಗಲಿ ಎಂಬುದಾಗಿ ಶುಭಹಾರೈಸುತ್ತೇನೆ’ ಎಂದು ಅವರು ಹೇಳಿದರು.

‘ಪುನೀತ್​ ಅವರದ್ದು ಆದರ್ಶದ ಬದುಕು. ಅಂಗಾಂಗಗಳನ್ನು ಅವರು ದಾನ ಮಾಡಿರುವುದು ನಮ್ಮೆಲ್ಲರಿಗೂ ಆದರ್ಶ. ಅವರು ಮಾಡಿದ ಒಳ್ಳೆಯ ಕೆಲಸಗಳನ್ನು ನೆನೆಯೋಣ. ಪುನೀತ್ ಅವರಿಗೆ ಈಗಾಗಲೇ ‘ಕರ್ನಾಟಕ ರತ್ನ’ ಕೊಡೋದಕ್ಕೆ ತೀರ್ಮಾನ ಮಾಡಿದ್ದೇವೆ. ಶೀಘ್ರವೇ ಕುಟುಂಬ ಸದಸ್ಯರು ಜೊತೆ ಮಾತನಾಡಿ ಒಂದು ದಿನಾಂಕ‌ ನಿಗದಿ ಮಾಡುತ್ತೇವೆ’ ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ಹಂಚಿಕೊಂಡರು.

ಅಂಬರೀಷ್​ ಅವರ ಸ್ಮಾರಕ ನಿರ್ಮಾಣ ಕಾರ್ಯಕ್ರಮದಲ್ಲೂ ಈ ಬಗ್ಗೆ ಬಸವರಾಜ ಬೊಮ್ಮಾಯಿ ಮಾತನಾಡಿದ್ದರು. ‘ಪುನೀತ್ ರಾಜ್​ಕುಮಾರ್ ಅಗಲಿದ ನಂತರ ಅವರ ಅಭಿಮಾನಿಗಳನ್ನು ನೋಡುತ್ತಿದ್ದೇವೆ. ಪುನೀತ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡುವ ದಿನವನ್ನು ಆದಷ್ಟು ಬೇಗ ಪ್ರಕಟಿಸುತ್ತೇನೆ. ಪುನಿತ್ ಸ್ಮಾರಕದ ನಿರ್ಮಾಣವನ್ನೂ ಆದಷ್ಟು ಬೇಗ ಆರಂಭಿಸುತ್ತೇವೆ’ ಎಂದು ಭರವಸೆ ನೀಡಿದ್ದರು.

ಇದನ್ನೂ ಓದಿ: James Movie Review: ಜೇಮ್ಸ್​ ವಿಮರ್ಶೆ: ಗೆಳೆತನದ ಕಥೆ ಹೇಳುವ ಒಂದು ‘ಪವರ್​ಫುಲ್​’ ಶೋ

‘ಕೈ ನಡುಕ ಬರುತ್ತಿತ್ತು’; ‘ಜೇಮ್ಸ್​’ ಡಬ್ಬಿಂಗ್​ ವೇಳೆ ಸಾಧು ಕೋಕಿಲಗೆ ಆದ ಅನುಭವ ಎಂಥದ್ದು?

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್