AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಭಿಮಾನ್ ಸ್ಟುಡಿಯೋದಲ್ಲಿ ಜಾಗ, ವಿಷ್ಣುಗೆ ಕರ್ನಾಟಕ ರತ್ನ ಕೊಡಿ’; ಸಿಎಂಗೆ ಭಾರತಿ ಮನವಿ

ವಿಷ್ಣುವರ್ಧನ್ ಅವರ ಅಭಿನವ್ ಸ್ಟುಡಿಯೋದಲ್ಲಿನ ಸಮಾಧಿ ಕೆಡವಿದ್ದಾರೆ. ಸ್ಮಾರಕ ನಿರ್ಮಾಣಕ್ಕಾಗಿ 10 ಗುಂಟೆ ಜಾಗ ನೀಡುವಂತೆ ಭಾರತಿ ವಿಷ್ಣುವರ್ಧನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಅಲ್ಲದೆ, ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅಭಿಮಾನಿಗಳ ಮನವಿಯನ್ನೂ ಅವರು ಮುಂದಿಟ್ಟಿದ್ದಾರೆ.

‘ಅಭಿಮಾನ್ ಸ್ಟುಡಿಯೋದಲ್ಲಿ ಜಾಗ, ವಿಷ್ಣುಗೆ ಕರ್ನಾಟಕ ರತ್ನ ಕೊಡಿ’; ಸಿಎಂಗೆ ಭಾರತಿ ಮನವಿ
ಭಾರತಿ
ರಾಜೇಶ್ ದುಗ್ಗುಮನೆ
|

Updated on:Sep 03, 2025 | 12:33 PM

Share

ಬೆಂಗಳೂರಿನ ಅಭಿನವ್ ಸ್ಟುಡಿಯೋದಲ್ಲಿರೋ ವಿಷ್ಣುವರ್ಧನ್ (Vishnuvardhan) ಸಮಾಧಿ ಕೆಡವಿದ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಸ್ಟುಡಿಯೋದ 10 ಗುಂಟೆ ಜಾಗವನ್ನು ತಮಗೆ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದರು. ಭಾರತಿ ವಿಷ್ಣುವರ್ಧನ್ ಅವರು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಿಷ್ಣು ಅಳಿಯ ಅನಿರುದ್ಧ್ ಜತ್ಕರ್ ಕೂಡ ಈ ಸಂದರ್ಭದಲ್ಲಿ ಇದ್ದರು. ಭಾರತಿ ಅವರು ಸಿಎಂ ಬಳಿ ಮನವಿಯನ್ನು ಇಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ‘ಅಭಿಮಾನಿಗಳಿಗಾಗಿ ಸ್ಟುಡಿಯೋದಲ್ಲಿ ಜಾಗ ಕೊಡಿ ಎಂದು ಸಿಎಂ ಬಳಿ ಕೇಳಿದ್ದೇವೆ. ಅಭಿಮಾನಿಗಳ ಬಂದು ನಮಸ್ಕಾರ ಮಾಡಿ ಹೋಗಲು ಅವಕಾಶ ಮಾಡಿ ಕೊಡಬೇಕು ಎಂಬುದು ನಮ್ಮ ಮನವಿ’ ಎಂದಿದ್ದಾರೆ ಭಾರತಿ.

ವಿಷ್ಣುವರ್ಧನ್​ಗೆ ಕರ್ನಾಟಕ ರತ್ನ ಕೊಡಬೇಕು ಎಂಬುದು ಹಲವು ವರ್ಷಗಳ ಕೋರಿಕೆ. ಅಭಿಮಾನಿಗಳು ಈ ಬೇಡಿಕೆಯನ್ನು ಸರ್ಕಾರದ ಮಂದೆ ಇಡುತ್ತಲೇ ಬರುತ್ತಿದ್ದರು. ಈಗ ಅಭಿಮಾನಿಗಳ ಪರವಾಗಿ ಭಾರತಿ ಕೂಡ ಈ ರೀತಿಯ ಮನವಿ ಮಾಡಿದ್ದಾರೆ. ‘ಕರ್ನಾಟಕ ರತ್ನ ಕೊಡಬೇಕು ಎಂದು ನಾನು ಕೇಳುವುದಿಲ್ಲ. ಅಭಿಮಾನಿಗಳು ಕೇಳುತ್ತಿದ್ದಾರೆ. ಅವರ ಕೋರಿಕೆಯನ್ನು ಈಡೇರಿಸಬೇಕು’ ಎಂದು ಭಾರತಿ ಸಿಎಂ ಬಳಿ ಹೇಳಿದ್ದಾರೆ.

ಇದನ್ನೂ ಓದಿ
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು
Image
ಸಕ್ಸಸ್ ಅನ್ನೋದು ಇಂದಿಗೂ ನಂಗೆ ದೊಡ್ಡ ಯಕ್ಷ ಪ್ರಶ್ನೆ; ಸೃಜನ್ ಲೋಕೇಶ್
Image
ಸಿಟಿ ಹುಡುಗಿಯರ ಮೇಲೆ ಸಿಟ್ಟು; ಬಕೆಟ್ ಎಸೆದು ಬಾಯಿಗೆ ಬಂದಂತೆ ಬೈದ ಅಕುಲ್
Image
ಹಾಲು ಕರೆಯೋ ಟಾಸ್ಕ್​ನಲ್ಲಿ ಸೋತವರಿಗೆ ಸಗಣಿ ನೀರ ಸ್ನಾನ; ಬಂತು ವಾಕರಿಕೆ

ಇದನ್ನೂ ಓದಿ: ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡಿ: ಸಿಎಂಗೆ ಮನವಿ

ಅಭಿಮಾನ್ ಸ್ಟುಡಿಯೋದ 10 ಗುಂಟೆ ಜಾಗ ಬೇಕು ಎಂಬ ವಿಚಾರದಲ್ಲಿ ಈಗಾಗಲೇ ಭಾರತಿ ಅವರು ಅರಣ್ಯ ಇಲಾಖೆಯ ಬಳಿಯೂ ಮಾತನಾಡಿದ್ದಾರಂತೆ. ಮಂಟಪವನ್ನು ತಾವೇ ಕಟ್ಟಿಸಿಕೊಳ್ಳೋದಾಗಿ ಹೇಳಿದ್ದಾರೆ. ಸೆಪ್ಟೆಂಬರ್ 18 ವಿಷ್ಣುವರ್ಧನ್ ಜನ್ಮದಿನ. ಹೀಗಾಗಿ 10 ಗುಂಟೆ ಜಾಗ ಸೆಪ್ಟೆಂಬರ್ 17ರ ಒಳಗೆ ಸಿಕ್ಕರೆ ಖುಷಿ ಎಂದು ಅವರು ಹೇಳಿದ್ದಾರೆ.

ಕ್ಯಾಬಿನೆಟ್​​ ಸಭೆಯಲ್ಲಿ ಚರ್ಚೆ..

ಸೆಪ್ಟೆಂಬರ್ 4ರಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆಯಲಿದೆ.  ಈ ವೇಳೆ ಈ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ. ಅಧಿಕೃತ ಆದರೆ, ನಾಳೆಯೇ ಈ ಬಗ್ಗೆ ಘೋಷಣೆ ಆಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:32 pm, Wed, 3 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ