AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ಜೂನಿಯರ್​ ಎನ್​ಟಿಆರ್​ ಮನೆಯಲ್ಲಿ ಅಪ್ಪು ಫೋಟೋ; ಕರುನಾಡ ಗೆಳೆಯನಿಗೆ ತೆಲುಗು​ ನಟನ ಗೌರವ

Karnataka Ratna | Puneeth Rajkumar: ಜೂನಿಯರ್​ ಎನ್​ಟಿಆರ್​ ಅವರ ಮನಸ್ಸಿನಲ್ಲಿ ಪುನೀತ್​ ರಾಜ್​ಕುಮಾರ್​ ಬಗ್ಗೆ ಎಷ್ಟು ಗೌರವ ಇದೆ ಎಂಬುದಕ್ಕೆ ಈ ಫೋಟೋ ಸಾಕ್ಷಿ ಆಗಿದೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

Jr NTR: ಜೂನಿಯರ್​ ಎನ್​ಟಿಆರ್​ ಮನೆಯಲ್ಲಿ ಅಪ್ಪು ಫೋಟೋ; ಕರುನಾಡ ಗೆಳೆಯನಿಗೆ ತೆಲುಗು​ ನಟನ ಗೌರವ
ಪುನೀತ್​, ಎನ್​ಟಿಆರ್
TV9 Web
| Edited By: |

Updated on:Oct 30, 2022 | 3:56 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಸ್ನೇಹಜೀವಿ ಆಗಿದ್ದರು. ಕರುನಾಡಿನಲ್ಲಿ ಮಾತ್ರವಲ್ಲದೇ ಪರಭಾಷೆಯ ಅನೇಕ ಸ್ಟಾರ್​ ಕಲಾವಿದರ ಜೊತೆಗೆ ಅವರಿಗೆ ಆಪ್ತತೆ ಇತ್ತು. ಟಾಲಿವುಡ್​ (Tollywood) ನಟ ಜೂನಿಯರ್​ ಎನ್​ಟಿಆರ್​ ಮತ್ತು ಪುನೀತ್​ ರಾಜ್​ಕುಮಾರ್​ ಅವರು ಸ್ನೇಹಿತರಾಗಿದ್ದರು. ಅಪ್ಪು ನಟಿಸಿದ್ದ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯ.. ಗೆಳೆಯ..’ ಹಾಡಿಗೆ ಜೂನಿಯರ್​ ಎನ್​ಟಿಆರ್​ (Jr NTR) ಧ್ವನಿ ನೀಡಿದ್ದರು. ಆದರೆ ಇಂದು ಭೌತಿಕವಾಗಿ ಅಪ್ಪು ನಮ್ಮೊಂದಿಗೆ ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗುತ್ತಿವೆ.

ಜೂನಿಯರ್​ ಎನ್​ಟಿಆರ್​ ಅವರದ್ದು ಫಿಲ್ಮಿ ಕುಟುಂಬ. ಅವರ ತಾತ ನಂದಮೂರಿ ತಾರಕ ರಾಮ ರಾವ್​ ಅವರು ಸೂಪರ್​ ಸ್ಟಾರ್​ ಆಗಿದ್ದರು. ತಾತನ ಫೋಟೋವನ್ನು ಮನೆಯಲ್ಲಿ ಇಟ್ಟುಕೊಂಡಿರುವ ಜೂನಿಯರ್​ ಎನ್​ಟಿಆರ್​ ಅವರು ಪುನೀತ್​ ರಾಜ್​ಕುಮಾರ್​ ಅವರ ಭಾವಚಿತ್ರಕ್ಕೂ ಜಾಗ ನೀಡಿದ್ದಾರೆ. ಅವರ ಮನಸ್ಸಿನಲ್ಲಿ ಅಪ್ಪು ಬಗ್ಗೆ ಎಷ್ಟು ಗೌರವ ಇದೆ ಎಂಬುದಕ್ಕೆ ಈ ಫೋಟೋ ಸಾಕ್ಷಿ ಆಗಿದೆ.

‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಎನ್​ಟಿಆರ್​ ಅತಿಥಿ:

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

ನವೆಂಬರ್ 1ರಂದು ಪುನೀತ್​ ರಾಜ್​ಕುಮಾರ್​ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ವಿಧಾನಸೌಧದಲ್ಲಿ ಈ ಸಮಾರಂಭ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ದಿನವೇ ಅಪ್ಪುಗೆ ಈ ಗೌರವ ಸಲ್ಲಿಕೆ ಆಗುತ್ತಿದೆ. ಈ ಸಮಾರಂಭಕ್ಕೆ ಸಾಕ್ಷಿಯಾಗಲು ನಟ ಜೂನಿಯರ್​ ಎನ್​ಟಿಆರ್​ ಹಾಗೂ ರಜನಿಕಾಂತ್ ಅವರು ಆಗಮಿಸುವುದು ಖಚಿತ ಆಗಿದೆ. ಕರ್ನಾಟಕ ಸರ್ಕಾರದಿಂದ ಅವರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನ ಸ್ವೀಕರಿಸಿರುವ ಅವರು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬರಲು ಒಪ್ಪಿದ್ದಾರೆ.

ಅಪ್ಪು​ ಪರವಾಗಿ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್ ಅವರು ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು ಸಾಕ್ಷಿ ಆಗಲಿದ್ದಾರೆ. ಈ ಕ್ಷಣವನ್ನು ಸಂಭ್ರಮಿಸಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:56 pm, Sun, 30 October 22

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ