AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಪಠ್ಯಪುಸ್ತಕದಲ್ಲಿ ಇರಲಿದೆ ಪುನೀತ್ ರಾಜ್​ಕುಮಾರ್ ಜೀವನದ ಪಾಠ

ನಟನೆ, ನಿರ್ಮಾಣ ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳ ಮೂಲಕವೂ ಪುನೀತ್ ರಾಜ್​​ಕುಮಾರ್ ಜನಮನ ಗೆದ್ದಿದ್ದರು. ಅಪ್ಪು ಬದುಕಿನ ವಿವರಗಳನ್ನು ಶಾಲೆಯ ಪಠ್ಯಪುಸ್ತಕದಲ್ಲಿ ಸೇರಿಸಲು ತಯಾರಿ ನಡೆಯುತ್ತಿದೆ ಎಂಬುದು ವಿಶೇಷ. ಇದು ಪುನೀತ್ ರಾಜ್​ಕುಮಾರ್ ಅವರ ಅಭಿಮಾನಿಗಳಿಗೆ ಹಾಗೂ ಕುಟುಂಬದವರಿಗೆ ನಿಜಕ್ಕೂ ಹೆಮ್ಮೆಯ ಸಂಗತಿ.

ಶಾಲಾ ಪಠ್ಯಪುಸ್ತಕದಲ್ಲಿ ಇರಲಿದೆ ಪುನೀತ್ ರಾಜ್​ಕುಮಾರ್ ಜೀವನದ ಪಾಠ
Puneeth Rajkumar
ಮದನ್​ ಕುಮಾರ್​
|

Updated on:Jan 09, 2026 | 4:13 PM

Share

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲ. ಆದರೆ ಅವರು ಮಾಡಿದ ಸಾಧನೆ ಎಲ್ಲರಿಗೂ ಸ್ಫೂರ್ತಿ ಆಗಿದೆ. ಬಾಲನಟನಾಗಿ ಚಿತ್ರರಂಗದಲ್ಲಿ ಮಿಂಚಿ, ಹೀರೋ ಆಗಿಯೂ ಜನಮನ ಗೆದ್ದ ಪುನೀತ್ ಅವರು ಸಾಮಾಜಿಕ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿದ್ದರು. ಅವರ ಸಾಧನೆಯ ಕಥೆ ಅನೇಕರಿಗೆ ಸ್ಫೂರ್ತಿ ಆಗುತ್ತದೆ. ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ ಪುನೀತ್ ರಾಜ್​​ಕುಮಾರ್ ಅವರ ಜೀವನದ ಕಥೆ ಈಗ ಶಾಲಾ ಪಠ್ಯಪುಸ್ತಕದಲ್ಲಿ (Karnataka School Textbooks) ಸೇರ್ಪಡೆ ಆಗಲಿದೆ. ಆ ಬಗ್ಗೆ ತಯಾರಿ ನಡೆದಿದೆ. ಇದು ಪುನೀತ್ ರಾಜ್​ಕುಮಾರ್ ಅವರ ಅಭಿಮಾನಿಗಳಿಗೆ ಸಖತ್ ಸಂತಸ ತಂದಿದೆ.

ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ಈ ವಿಷಯವನ್ನು ಪರಿಗಣಿಸಲು ‘ಪಠ್ಯ ಪುಸ್ತಕ ಸಂಘ’ ತೀರ್ಮಾನಿಸಿದೆ. ಅಂದರೆ, ಮುಂದಿನ ದಿನಗಳಲ್ಲಿ ಕರ್ನಾಟಕದ ಶಾಲೆಗಳ ಪಠ್ಯಪುಸ್ತಕದಲ್ಲಿ ಪುನೀತ್ ರಾಜ್​ಕುಮಾರ್ ಅವರ ಸಾಧನೆಗಳನ್ನು ಸೇರಿಸಲಾಗುವುದು. ಆ ಮೂಲಕ ಮುಂದಿನ ಪೀಳಿಗೆಗೆ ಪುನೀತ್ ರಾಜ್​ಕುಮಾರ್ ಬಗ್ಗೆ ತಿಳಿಸಿಕೊಡಲಾಗುವುದು.

ಪುನೀತ್ ರಾಜ್​ಕುಮಾರ್ ಅವರು ಜನಿಸಿದ್ದು 1975ರ ಮಾರ್ಚ್ 17ರಂದು. ಬಾಲನಟನಾಗಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಹಲವು ಸಿನಿಮಾಗಳಿಗೆ ನಟಿಸಿ ಭೇಷ್ ಎನಿಸಿಕೊಂಡರು. ‘ಹೆಟ್ಟದ ಹೂವು’ ಸಿನಿಮಾಗಾಗಿ ‘ಅತ್ಯುತ್ತಮ ಬಾಲ ನಟ’ ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡರು. ‘ಅಪ್ಪು’ ಸಿನಿಮಾದ ಮೂಲಕ 2002ರಲ್ಲಿ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡಿದರು.

30ಕ್ಕೂ ಅಧಿಕ ಸಿನಿಮಾಗಳಲ್ಲಿ ಪುನೀತ್ ರಾಜ್​ಕುಮಾರ್ ಅವರು ಹೀರೋ ಆಗಿ ಅಭಿನಯಿಸಿದರು. ಹಲವು ಬಗೆಯ ಪಾತ್ರಗಳನ್ನು ಮಾಡಿ ಅಭಿಮಾನಿಗಳನ್ನು ರಂಜಿಸಿದರು. ಸಿನಿಮಾ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಮೂಲಕವೂ ಅವರು ಜನರಿಗೆ ಹತ್ತಿರ ಆಗಿದ್ದರು. ಈ ಎಲ್ಲ ಅಂಶಗಳನ್ನು ಪಠ್ಯಪುಸ್ತಕದ ಮೂಲಕ ಮುಂದಿನ ಪೀಳಿಗೆಗೆ ತಿಳಿಸಲಾಗುವುದು.

ಇದನ್ನೂ ಓದಿ: ಪುನೀತ್ ರಾಜ್​​ಕುಮಾರ್ ಸಮಾಧಿಗೆ ನಮಿಸಲು ಬಂದ ಜನಸಾಗರ; ಕಿಂಚಿತ್ತೂ ಕಡಿಮೆ ಆಗಿಲ್ಲ ಅಭಿಮಾನ

ಈ ಬಗ್ಗೆ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ‘ಟೈಮ್ಸ್ ಆಫ್ ಇಂಡಿಯಾ’ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ಬಹಳ ಖುಷಿಯಾಗಿದೆ. ಈ ಗೌರವಕ್ಕಾಗಿ ಕರ್ನಾಟಕ ಸರ್ಕಾರಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ. ತಂದೆಗೆ ಸಿಕ್ಕ ದೊಡ್ಡ ಗೌರವ ಇದು ಎಂದು ನಮ್ಮ ಮಕ್ಕಳಿಗೆ ತಿಳಿದಿದೆ. ಚಿತ್ರರಂಗದಲ್ಲಿ ಹಲವರು ಇದ್ದಾರೆ. ಆದರೆ ಈ ರೀತಿಯ ಗೌರವ ಎಲ್ಲರಿಗೂ ಸಿಗುವುದಿಲ್ಲ’ ಎಂದು ಅಶ್ವಿನಿ ಪುನೀತ್ ರಾಜ್​​ಕುಮಾರ್ ಹೇಳಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:13 pm, Fri, 9 January 26

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​