AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್ ರೀತಿ ಕರ್ನಾಟಕದಲ್ಲಿಯೂ ಚಿತ್ರಮಂದಿರಗಳ ಬಂದ್​ಗೆ ಚಿಂತನೆ

ಸ್ಟಾರ್ ನಟರ ಸಿನಿಮಾಗಳು ಬಿಡುಗಡೆ ಆಗದ ಕಾರಣ ನೆರೆಯ ತೆಲಂಗಾಣದಲ್ಲಿ ಎಲ್ಲ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಹತ್ತು ದಿನಗಳ ಕಾಲ ಬಂದ್ ಮಾಡುವ ನಿರ್ಧಾರ ಮಾಡಲಾಗಿದೆ. ಅದರಂತೆ ಕರ್ನಾಟಕದಲ್ಲಿಯೂ ಚಿತ್ರಮಂದಿರಗಳನ್ನು ಬಂದ್ ಮಾಡುವ ಬಗ್ಗೆ ಚರ್ಚೆ ಜಾರಿಯಲ್ಲಿದೆ.

ಟಾಲಿವುಡ್ ರೀತಿ ಕರ್ನಾಟಕದಲ್ಲಿಯೂ ಚಿತ್ರಮಂದಿರಗಳ ಬಂದ್​ಗೆ ಚಿಂತನೆ
ಸಿಂಗಲ್ ಸ್ಕ್ರೀನ್ ಚಿತ್ರಮಂದಿರ
ಮಂಜುನಾಥ ಸಿ.
|

Updated on: May 21, 2024 | 12:40 PM

Share

ಐಪಿಎಲ್ (IPL), ಲೋಕಸಭೆ ಚುನಾವಣೆ, ಸ್ಟಾರ್ ನಟರ ಸಿನಿಮಾಗಳ ಕೊರತೆಯಿಂದಾಗಿ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು (Theater) ತೀವ್ರ ಸಂಕಷ್ಟದಲ್ಲಿವೆ. ಕರ್ನಾಟಕದಲ್ಲಿ ಮಾತ್ರವಲ್ಲ, ನೆರೆಯ ಆಂಧ್ರ-ತೆಲಂಗಾಣದಲ್ಲಿಯೂ ಇದೇ ಸ್ಥಿತಿ ಇದೆ. ಇದೇ ಕಾರಣಕ್ಕೆ ಕೆಲವು ದಿನಗಳ ಹಿಂದೆ ಟಾಲಿವುಡ್​ನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡು, ಹೊಸ ಸಿನಿಮಾ ಬಿಡುಗಡೆ ಆಗುವವರೆಗೆ ಎಲ್ಲ ತೆಲಂಗಾಣದ ಎಲ್ಲ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಬಂದ್ ಮಾಡಲಾಗಿತ್ತು. ಇದೀಗ ಕರ್ನಾಟಕದಲ್ಲಿಯೂ ಇದೇ ರೀತಿ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಬಂದ್ ಮಾಡುವ ಆಲೋಚನೆ ಚಾಲ್ತಿಯಲ್ಲಿದೆ.

ನಿನ್ನೆ (ಮೇ 20) ಫಿಲಂ ಚೇಂಬರ್ ಹಾಗೂ ಅದರ ಅಂಗ ಸಂಸ್ಥೆಗಳ ಪ್ರಮುಖ ಸದಸ್ಯರು ಒಟ್ಟಾಗಿ ಸಭೆ ನಡೆಸಿದ್ದಾರೆ. ಚಿತ್ರೋದ್ಯಮದ ಚೇತರಿಕೆಗೆ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗಿದೆ. ಫಿಲಂ ಚೇಂಬರ್​ ವತಿಯಿಂದ ಸ್ಯಾಂಡಲ್​ವುಡ್​ನ ದೊಡ್ಡ-ದೊಡ್ಡ ನಿರ್ಮಾಣ ಸಂಸ್ಥೆಗಳಿಗೆ, ವಿತರಕರಿಗೆ ಹಾಗೂ ಕಲಾವಿದರಿಗೆ ಪತ್ರ ಬರೆಯಲಾಗುತ್ತಿದೆ. ಒಂದು ತಿಂಗಳ ಒಳಗೆ ಹಂತ ಹಂತವಾಗಿ ಚಿತ್ರರಂಗದ ಪ್ರಮುಖರೊಟ್ಟಿಗೆ ಸಭೆ ನಡೆಸುವ ನಿರ್ಧಾರ ಮಾಡಲಾಗಿದೆ. ಜೂನ್ ಅಥವಾ ಜುಲೈ ತಿಂಗಳ ತನಕ ಚಿತ್ರೋದ್ಯಮದ ಚೇತರಿಕೆಗಾಗಿ ಸಭೆಗಳನ್ನು ನಡೆಸಿ ಸಂಬಂಧಪಟ್ಟವರ ಜೊತೆ ಮಾತುಕತೆ ಮಾಡಲಾಗುತ್ತದೆ. ಜೊತೆಗೆ ಮಲ್ಟಿಪ್ಲೆಕ್ಸ್, ಸಿಂಗ್ ಸ್ಕ್ರೀನ್ ಥಿಯೇಟರ್​ನಲ್ಲಿ ಸಿನಿಮಾ ಪ್ರದರ್ಶನದ ಪರಿಸ್ಥಿತಿ ಬಗ್ಗೆ ಚರ್ಚೆ, ಚಿತ್ರೋದ್ಯಮದ ಚೇತರಿಕೆಗೆ ಉಪಾಯ ಫಲ ನೀಡದಿದ್ದಲ್ಲಿ ಕರ್ನಾಟಕದಲ್ಲಿಯೂ ಸಹ ಕೆಲ ದಿನ ಚಿತ್ರಮಂದಿರಗಳನ್ನು ಬಂದ್ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ.

ಇದನ್ನೂ ಓದಿ:ಟಾಲಿವುಡ್​ಗೂ ಬಂತು ಬರಗಾಲ, 400 ಚಿತ್ರಮಂದಿರಗಳು ಏಕಾ-ಏಕಿ ಬಂದ್

ಕೆಲ ದಿನಗಳ ಹಿಂದೆ ಟಿವಿ9 ಕನ್ನಡ ಜೊತೆ ಮಾತನಾಡಿದ್ದ ರಾಜ್ಯ ಪ್ರದರ್ಶಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ‘ಈ ವರ್ಷದಲ್ಲಿ ಐದು ತಿಂಗಳು ಪೂರ್ಣಗೊಳ್ಳುತ್ತಾ ಬಂದಿದೆ. ಈವರೆಗೆ ಒಂದೇ ಒಂದು ಸ್ಟಾರ್ ಸಿನಿಮಾ ರಿಲೀಸ್ ಆಗಿಲ್ಲ. ಜನರು ಥಿಯೇಟರ್ಗೆ ಬರದೆ ಇರಲು ಇದೇ ಕಾರಣವೇ ಎನ್ನುವ ಪ್ರಶ್ನೆ ಮೂಡೋದು ನಿಜ. ಆದರೆ, ಇದನ್ನು ಚಂದ್ರಶೇಖರ್ ಅವರು ಅಲ್ಲಗಳೆಯುತ್ತಾರೆ. ‘ಉದ್ಯಮ ನಡೆಯುತ್ತಿಲ್ಲ ಅನ್ನೋ ಕಾರಣಕ್ಕೆ ಥಿಯೇಟರ್ಗಳು ಮುಚ್ಚುತ್ತಿವೆ. ಸ್ಟಾರ್ ಹೀರೋಗಳ ಸಿನಿಮಾ ಬರುತ್ತಿಲ್ಲ ಅನ್ನೋ ಕಾರಣಕ್ಕೆ ಜನರು ಥಿಯೇಟರ್ಗೆ ಬರುತ್ತಿಲ್ಲ ಅನ್ನೋದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಒಳ್ಳೆಯ ಕಂಟೆಂಟ್ ಇರುವ ಸಿನಿಮಾ ಬರುತ್ತಿವೆ. ಆದಾಗ್ಯೂ ಪ್ರೇಕ್ಷಕ ಕೈ ಹಿಡಿಯುತ್ತಿಲ್ಲ’ ಎಂದು ಬೇಸರ ಹೊರಹಾಕಿದ್ದರು. ಅವರೂ ಸಹ ಚಿತ್ರಮಂದಿರಗಳನ್ನು ಬಂದ್ ಮಾಡಿ ಮಾಲೀಕರಿಗೆ ಆಗುತ್ತಿರುವ ನಷ್ಟವನ್ನು ಕಡಿಮೆಗೊಳಿಸುವ ಬಗ್ಗೆ ಮಾತನಾಡಿದ್ದರು.

ಐಪಿಎಲ್, ಲೋಕಸಭೆ ಚುನಾವಣೆ ಒಟ್ಟಿಗೆ ಬಂದಿದ್ದರಿಂದ ಯಾವುದೇ ದೊಡ್ಡ ನಿರ್ಮಾಣ ಸಂಸ್ಥೆಗಳು ಸಿನಿಮಾಗಳನ್ನು ಬಿಡುಗಡೆ ಮಾಡುತ್ತಿಲ್ಲ. ಐಪಿಎಲ್ ಹಾಗೂ ಚುನಾವಣೆ ಮುಗಿದ ಬಳಿಕ ಕೆಲವು ಸಿನಿಮಾಗಳು ಬಿಡುಗಡೆ ಆಗಬಹುದು. ದುನಿಯಾ ವಿಜಯ್ ನಟನೆಯ ‘ಭೀಮ’, ಶಿವಣ್ಣ ನಟನೆಯ ‘ಭೈರತಿ ರಣಗಲ್’, ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಇನ್ನೂ ಕೆಲವು ದೊಡ್ಡ ಬಜೆಟ್​ನ ಸ್ಟಾರ್ ನಟರ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಚುನಾವಣೆ ಮುಗಿದ ಬಳಿಕ ಕೆಲವು ಸಿನಿಮಾಗಳ ಬಿಡುಗಡೆಯ ಘೋಷಣೆ ಆಗಬಹು ಎಂಬ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್