AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕ ಕಲಾವಿದರ ಸಂಘದ ವಿವಾದ; ಡಿಂಗ್ರಿ ನಾಗರಾಜ್​ ವಿರುದ್ಧ ಪದ್ಮಿನಿ ನಂದಾ ಸರಣಿ ಆರೋಪ

‘ನಮ್ಮ ಸಂಘದ ಚುನಾವಣೆ ನಡೆದು 1 ವರ್ಷದ ಮೇಲೆ 1 ತಿಂಗಳು ಆಗಿದೆ. ನಾನು ಗೆದ್ದ ಮೇಲೆ ಡಿಂಗ್ರಿ ನಾಗರಾಜ್​, ಆಡುಗೋಡಿ ಶ್ರೀನಿವಾಸ್​ ಹಾಗೂ ದಾವಣಗೆರೆ ಸುರೇಶ್​ ಅವರು ನನಗೆ ಲೆಕ್ಕಾಚಾರ ನೀಡಬೇಕಿತ್ತು. ಆದರೆ ಅವರು ಲೆಕ್ಕಾಚಾರ ಕೊಟ್ಟಿಲ್ಲ. ಲೆಕ್ಕಾಚಾರ ಕೇಳಿದ್ದಕ್ಕಾಗಿ ಅಂದಿನಿಂದ ಇಂದಿನ ತನಕ ನಮ್ಮ ಮೇಲೆ ಹಗೆ ಸಾಧಿಸಿದ್ದಾರೆ. ತೊಂದರೆ ಕೊಡುತ್ತಿದ್ದಾರೆ’ ಎಂದು ಪದ್ಮಿನಿ ನಂದಾ ಹೇಳಿದ್ದಾರೆ.

ಪೋಷಕ ಕಲಾವಿದರ ಸಂಘದ ವಿವಾದ; ಡಿಂಗ್ರಿ ನಾಗರಾಜ್​ ವಿರುದ್ಧ ಪದ್ಮಿನಿ ನಂದಾ ಸರಣಿ ಆರೋಪ
ಡಿಂಗ್ರಿ ನಾಗರಾಜ್​
ಮಾಲತೇಶ ಜಗ್ಗೀನ್
| Edited By: |

Updated on: Apr 08, 2024 | 10:51 PM

Share

ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸದಸ್ಯರ ಕಿತ್ತಾಟ ಬೀದಿಗೆ ಬಂದಿದೆ. ಈ ಕುರಿತಂತೆ ಸಂಘದ ಅಧ್ಯಕ್ಷೆ ಪದ್ಮಿನಿ ನಂದಾ (Padmini Nanda) ಅವರ ವಿರುದ್ಧ ಕೆಲವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಒಟ್ಟಾರೆ ಘಟನೆಯ ಬಗ್ಗೆ ಪದ್ಮಿನಿ ನಂದಾ ಅವರು ‘ಟಿವಿ9 ಕನ್ನಡ’ಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಟ ಡಿಂಗ್ರಿ ನಾಗರಾಜ್​ (Dingri Nagaraj) ವಿರುದ್ಧ ಅವರು ಸರಣಿ ಆರೋಪಗಳನ್ನು ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಸಂಘದ ಚುನಾವಣೆ ನಡೆದು ಒಂದು ವರ್ಷದ ಮೇಲೆ ಒಂದು ತಿಂಗಳು ಆಗಿದೆ. ನಾನು ಗೆದ್ದ ಮೇಲೆ ಡಿಂಗ್ರಿ ನಾಗರಾಜ್​, ಆಡುಗೋಡಿ ಶ್ರೀನಿವಾಸ್​ ಹಾಗೂ ದಾವಣಗೆರೆ ಸುರೇಶ್​ ಅವರು ನನಗೆ ಲೆಕ್ಕಾಚಾರ ನೀಡಬೇಕಿತ್ತು. ಆದರೆ ಅವರು ಲೆಕ್ಕಾಚಾರ ಕೊಟ್ಟಿಲ್ಲ. ಲೆಕ್ಕಾಚಾರ ಕೇಳಿದ್ದಕ್ಕಾಗಿ ಅಂದಿನಿಂದ ಇಂದಿನ ತನಕ ನಮ್ಮ ಮೇಲೆ ಹಗೆ ಸಾಧಿಸಿದ್ದಾರೆ. ನಮಗೆ ಅಧಿಕಾರ ಮಾಡಲು ಬಿಡದೇ ತೊಂದರೆ ಕೊಡುತ್ತಿದ್ದಾರೆ’ ಎಂದು ಪದ್ಮಿನಿ ನಂದಾ ಹೇಳಿದ್ದಾರೆ.

‘ಉಮೇಶ್​ ಬಣಕಾರ್​ ಅವರು ನನಗೆ ಆಫೀಸ್​ಗೆ ಜಾಗ ನೀಡಿದ್ದರು. 8 ವರ್ಷಗಳಿಂದ ಉಚಿತವಾಗಿ ಕೊಟ್ಟಿದ್ದರು. ಖಾಲಿ ಮಾಡಬೇಕಾದ ಸಂದರ್ಭದಲ್ಲಿ ಕೆಲವರು ಸಾಮಾಗ್ರಿಗಳನ್ನು ಖಾಲಿ ಮಾಡಲು ಬಿಡಲಿಲ್ಲ. ಹೆಣ್ಣಿನ ಮುಂದೆ ಸೋತ ಕಾರಣಕ್ಕೆ ಡಿಂಗ್ರಿ ನಾಗರಾಜ್​ ಅವರು ಬ್ಯಾಂಕ್​ ಖಾತೆ ಹಸ್ತಾಂತರ ಮಾಡಿಲ್ಲ. ಕಲಾವಿದರಿಗೆ ಸಹಾಯ ಮಾಡಲು ಬಿಟ್ಟಿಲ್ಲ. ಮಾನಸಿಕವಾಗಿ ತುಂಬ ಹಿಂಸೆ ಕೊಡುತ್ತಿದ್ದಾರೆ. ನಮ್ಮ ಕುಟುಂಬದವರಿಗೆ ಬೈಯ್ಯುತ್ತಿದ್ದಾರೆ. ಆಫೀಸ್​ ಖಾಲಿ ಮಾಡಲು ಯಾವ ಪದಾಧಿಕಾರಿಗಳೂ ಬರಲಿಲ್ಲ’ ಎಂದಿದ್ದಾರೆ ಪದ್ಮಿನಿ ನಂದಾ.

ಇದನ್ನೂ ಓದಿ: ಬೀದಿಗೆ ಬಿತ್ತು ಪೋಷಕ ಕಲಾವಿದರ ಸಂಘದ ಗಲಾಟೆ; ನಟಿ ರಾಣಿ ಮಾಡಿದ ಆರೋಪಗಳು ಒಂದೆರಡಲ್ಲ

‘ಈಗ ಕಳೆದ 6 ತಿಂಗಳಿಂದ ಬಣಕಾರ್​ ಅವರು ಹೊಸ ಆಫೀಸ್​ ನೀಡಿದ್ದರು. ಅಲ್ಲಿ ನಾವು ಕಾರ್ಯ ಚಟುವಟಿಕೆ ಶುರು ಮಾಡಿದ್ದೆವು. ಬೈಲಾ ಪ್ರಕಾರ 3 ಮೀಟಿಂಗ್​ಗೆ ಬಾರದ ಪದಾಧಿಕಾರಿಗಳನ್ನು ತೆಗೆದುಹಾಕಿ, ಇನ್ನುಳಿದವರ ಜೊತೆ ಕೆಲಸ ಮಾಡಬೇಕು. ಇತ್ತೀಚೆಗೆ ನಾವು ವಿಶ್ವ ರಂಗಭೂಮಿ ದಿನ ಆಚರಣೆ ಮಾಡಿದೆವು. ಆ ಕಾರ್ಯಕ್ರಮಕ್ಕೆ ಗಣ್ಯರು ಆಗಮಿಸಿದ್ದರು. ಆ ಕಾರ್ಯಕ್ರಮ ಆದಾಗಿನಿಂದ ನವನೀತಾ ಹಾಗೂ ಇತರೆ ಪದಾಧಿಕಾರಿಗಳು ನನ್ನ ಮೇಲೆ ಕೇಸ್​ ಹಾಕಿದ್ದಾರೆ. ನಮ್ಮ ಕಚೇರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ’ ಎಂದು ಪದ್ಮಿನಿ ನಂದಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ