AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕ ಕಲಾವಿದರ ಸಂಘದ ವಿವಾದ; ಡಿಂಗ್ರಿ ನಾಗರಾಜ್​ ವಿರುದ್ಧ ಪದ್ಮಿನಿ ನಂದಾ ಸರಣಿ ಆರೋಪ

‘ನಮ್ಮ ಸಂಘದ ಚುನಾವಣೆ ನಡೆದು 1 ವರ್ಷದ ಮೇಲೆ 1 ತಿಂಗಳು ಆಗಿದೆ. ನಾನು ಗೆದ್ದ ಮೇಲೆ ಡಿಂಗ್ರಿ ನಾಗರಾಜ್​, ಆಡುಗೋಡಿ ಶ್ರೀನಿವಾಸ್​ ಹಾಗೂ ದಾವಣಗೆರೆ ಸುರೇಶ್​ ಅವರು ನನಗೆ ಲೆಕ್ಕಾಚಾರ ನೀಡಬೇಕಿತ್ತು. ಆದರೆ ಅವರು ಲೆಕ್ಕಾಚಾರ ಕೊಟ್ಟಿಲ್ಲ. ಲೆಕ್ಕಾಚಾರ ಕೇಳಿದ್ದಕ್ಕಾಗಿ ಅಂದಿನಿಂದ ಇಂದಿನ ತನಕ ನಮ್ಮ ಮೇಲೆ ಹಗೆ ಸಾಧಿಸಿದ್ದಾರೆ. ತೊಂದರೆ ಕೊಡುತ್ತಿದ್ದಾರೆ’ ಎಂದು ಪದ್ಮಿನಿ ನಂದಾ ಹೇಳಿದ್ದಾರೆ.

ಪೋಷಕ ಕಲಾವಿದರ ಸಂಘದ ವಿವಾದ; ಡಿಂಗ್ರಿ ನಾಗರಾಜ್​ ವಿರುದ್ಧ ಪದ್ಮಿನಿ ನಂದಾ ಸರಣಿ ಆರೋಪ
ಡಿಂಗ್ರಿ ನಾಗರಾಜ್​
Malatesh Jaggin
| Edited By: |

Updated on: Apr 08, 2024 | 10:51 PM

Share

ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸದಸ್ಯರ ಕಿತ್ತಾಟ ಬೀದಿಗೆ ಬಂದಿದೆ. ಈ ಕುರಿತಂತೆ ಸಂಘದ ಅಧ್ಯಕ್ಷೆ ಪದ್ಮಿನಿ ನಂದಾ (Padmini Nanda) ಅವರ ವಿರುದ್ಧ ಕೆಲವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಒಟ್ಟಾರೆ ಘಟನೆಯ ಬಗ್ಗೆ ಪದ್ಮಿನಿ ನಂದಾ ಅವರು ‘ಟಿವಿ9 ಕನ್ನಡ’ಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಟ ಡಿಂಗ್ರಿ ನಾಗರಾಜ್​ (Dingri Nagaraj) ವಿರುದ್ಧ ಅವರು ಸರಣಿ ಆರೋಪಗಳನ್ನು ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಸಂಘದ ಚುನಾವಣೆ ನಡೆದು ಒಂದು ವರ್ಷದ ಮೇಲೆ ಒಂದು ತಿಂಗಳು ಆಗಿದೆ. ನಾನು ಗೆದ್ದ ಮೇಲೆ ಡಿಂಗ್ರಿ ನಾಗರಾಜ್​, ಆಡುಗೋಡಿ ಶ್ರೀನಿವಾಸ್​ ಹಾಗೂ ದಾವಣಗೆರೆ ಸುರೇಶ್​ ಅವರು ನನಗೆ ಲೆಕ್ಕಾಚಾರ ನೀಡಬೇಕಿತ್ತು. ಆದರೆ ಅವರು ಲೆಕ್ಕಾಚಾರ ಕೊಟ್ಟಿಲ್ಲ. ಲೆಕ್ಕಾಚಾರ ಕೇಳಿದ್ದಕ್ಕಾಗಿ ಅಂದಿನಿಂದ ಇಂದಿನ ತನಕ ನಮ್ಮ ಮೇಲೆ ಹಗೆ ಸಾಧಿಸಿದ್ದಾರೆ. ನಮಗೆ ಅಧಿಕಾರ ಮಾಡಲು ಬಿಡದೇ ತೊಂದರೆ ಕೊಡುತ್ತಿದ್ದಾರೆ’ ಎಂದು ಪದ್ಮಿನಿ ನಂದಾ ಹೇಳಿದ್ದಾರೆ.

‘ಉಮೇಶ್​ ಬಣಕಾರ್​ ಅವರು ನನಗೆ ಆಫೀಸ್​ಗೆ ಜಾಗ ನೀಡಿದ್ದರು. 8 ವರ್ಷಗಳಿಂದ ಉಚಿತವಾಗಿ ಕೊಟ್ಟಿದ್ದರು. ಖಾಲಿ ಮಾಡಬೇಕಾದ ಸಂದರ್ಭದಲ್ಲಿ ಕೆಲವರು ಸಾಮಾಗ್ರಿಗಳನ್ನು ಖಾಲಿ ಮಾಡಲು ಬಿಡಲಿಲ್ಲ. ಹೆಣ್ಣಿನ ಮುಂದೆ ಸೋತ ಕಾರಣಕ್ಕೆ ಡಿಂಗ್ರಿ ನಾಗರಾಜ್​ ಅವರು ಬ್ಯಾಂಕ್​ ಖಾತೆ ಹಸ್ತಾಂತರ ಮಾಡಿಲ್ಲ. ಕಲಾವಿದರಿಗೆ ಸಹಾಯ ಮಾಡಲು ಬಿಟ್ಟಿಲ್ಲ. ಮಾನಸಿಕವಾಗಿ ತುಂಬ ಹಿಂಸೆ ಕೊಡುತ್ತಿದ್ದಾರೆ. ನಮ್ಮ ಕುಟುಂಬದವರಿಗೆ ಬೈಯ್ಯುತ್ತಿದ್ದಾರೆ. ಆಫೀಸ್​ ಖಾಲಿ ಮಾಡಲು ಯಾವ ಪದಾಧಿಕಾರಿಗಳೂ ಬರಲಿಲ್ಲ’ ಎಂದಿದ್ದಾರೆ ಪದ್ಮಿನಿ ನಂದಾ.

ಇದನ್ನೂ ಓದಿ: ಬೀದಿಗೆ ಬಿತ್ತು ಪೋಷಕ ಕಲಾವಿದರ ಸಂಘದ ಗಲಾಟೆ; ನಟಿ ರಾಣಿ ಮಾಡಿದ ಆರೋಪಗಳು ಒಂದೆರಡಲ್ಲ

‘ಈಗ ಕಳೆದ 6 ತಿಂಗಳಿಂದ ಬಣಕಾರ್​ ಅವರು ಹೊಸ ಆಫೀಸ್​ ನೀಡಿದ್ದರು. ಅಲ್ಲಿ ನಾವು ಕಾರ್ಯ ಚಟುವಟಿಕೆ ಶುರು ಮಾಡಿದ್ದೆವು. ಬೈಲಾ ಪ್ರಕಾರ 3 ಮೀಟಿಂಗ್​ಗೆ ಬಾರದ ಪದಾಧಿಕಾರಿಗಳನ್ನು ತೆಗೆದುಹಾಕಿ, ಇನ್ನುಳಿದವರ ಜೊತೆ ಕೆಲಸ ಮಾಡಬೇಕು. ಇತ್ತೀಚೆಗೆ ನಾವು ವಿಶ್ವ ರಂಗಭೂಮಿ ದಿನ ಆಚರಣೆ ಮಾಡಿದೆವು. ಆ ಕಾರ್ಯಕ್ರಮಕ್ಕೆ ಗಣ್ಯರು ಆಗಮಿಸಿದ್ದರು. ಆ ಕಾರ್ಯಕ್ರಮ ಆದಾಗಿನಿಂದ ನವನೀತಾ ಹಾಗೂ ಇತರೆ ಪದಾಧಿಕಾರಿಗಳು ನನ್ನ ಮೇಲೆ ಕೇಸ್​ ಹಾಕಿದ್ದಾರೆ. ನಮ್ಮ ಕಚೇರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ’ ಎಂದು ಪದ್ಮಿನಿ ನಂದಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ