AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಕಳಪೆ, ಉತ್ತಮ ಯಾರು? ಮನೆಯ ಕ್ಯಾಪ್ಟನ್ ಆಗಿದ್ಯಾರು?

Bigg Boss: ಕಾರ್ತಿಕ್ ರನ್ನು ಮನೆಯ ಮಂದಿ ಕಳಪೆ ಎಂದು ಘೋಷಿಸಿದ್ದಾರೆ. ಸಂಗೀತಾ ಗಾಯಗೊಂಡು ಹೊರಗಿದ್ದಿದ್ದರಿಂದ ಕಾರ್ತಿಕ್ ಕಳಪೆ ಆದರು. ಉತ್ತಮ ಯಾರು? ಮನೆಯ ಕ್ಯಾಪ್ಟನ್ ಯಾರಾದರು?

ಕಾರ್ತಿಕ್ ಕಳಪೆ, ಉತ್ತಮ ಯಾರು? ಮನೆಯ ಕ್ಯಾಪ್ಟನ್ ಆಗಿದ್ಯಾರು?
ಕಾರ್ತಿಕ್ ಗೌಡ
ಮಂಜುನಾಥ ಸಿ.
|

Updated on: Dec 09, 2023 | 12:03 AM

Share

ಈ ವಾರದ ಟಾಸ್ಕ್​ಗಳಲ್ಲಿ ಮನೆಯ ಹಲವು ಮಂದಿ ಕೆಟ್ಟದಾಗಿಯೇ ಆಡಿದ್ದರು, ಒಬ್ಬರು ರಾಕ್ಷಸತನ ತೋರಿದರೆ ಅದಕ್ಕೆ ಬದಲಾಗಿ ದುಪ್ಪಟ್ಟು ರಾಕ್ಷಸತನ ಪ್ರದರ್ಶಿಸಿದರು. ಆದರೆ ವಾರಾಂತ್ಯಕ್ಕೆ ಮುನ್ನ ಒಬ್ಬ ಕಳಪೆ ಹಾಗೂ ಒಬ್ಬ ಉತ್ತಮನ್ನು ಮಾತ್ರ ಆರಿಸುವ ಅವಕಾಶ ಮನೆಯ ಸದಸ್ಯರಿಗಿರುವುದು ನಿಯಮ. ಅಂತೆಯೇ ಮನೆಯ ಸದಸ್ಯರ ಬಹುಮತದಂತೆ ಕಾರ್ತಿಕ್ (Karthik Gowda) ಈ ವಾರದ ಕಳಪೆ ಸ್ಪರ್ಧಿಯಾದರು. ವಿನಯ್ ಜೊತೆ ಜಗಳ, ಅವಾಚ್ಯ ಶಬ್ದದ ಬಳಕೆ ಇನ್ನಿತರೆ ಕಾರಣಗಳನ್ನು ಸ್ಪರ್ಧಿಗಳು ನೀಡಿದರು. ಸಂಗೀತಾ ಗಾಯಗೊಂಡು ಹೊರಗೆ ಹೋಗಿದ್ದ ಕಾರಣ ಎಲ್ಲರ ಗುರಿ ಕಾರ್ತಿಕ್ ಆದರು ಎಂಬುದು ಸಹ ನಿಜವೇ.

ಈ ವಾರದ ಉತ್ತಮ ಇಬ್ಬರಾದರು ಎಂಬುದು ವಿಶೇಷ. ಅದರಲ್ಲಿಯೂ ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದ ಅವಿನಾಶ್ ಹಾಗೂ ಪವಿ ಇಬ್ಬರೂ ಸಮಾನ ಮತಗಳನ್ನು ಪಡೆದ ಕಾರಣ ಇಬ್ಬರಿಗೂ ಉತ್ತಮ ನೀಡಲಾಯ್ತು. ಅವಿನಾಶ್, ಟಾಸ್ಕ್ ಆಡುವ ಸಂದರ್ಭದಲ್ಲಿ ಯಾವುದೇ ದೂರು ಹೇಳದೆ, ಟಾಸ್ಕ್​ನ ನಿಯಮಗಳಿಗೆ ಬದ್ಧವಾಗಿದ್ದ ಕಾರಣ ಅವರು ಉತ್ತಮ ಎನ್ನಿಸಿಕೊಂಡರು. ಟಾಸ್ಕ್​ಗಳಲ್ಲಿ ಅಗ್ರೆಶನ್ ತೋರಿಸಿದ್ದಕ್ಕೆ ಹಾಗೂ ಚೇರ್ ಟಾಸ್ಕ್​ನಲ್ಲಿ ಏಳದೆ ಕೂತೇ ಇದ್ದು ತಂಡವನ್ನು ಗೆಲ್ಲಿಸಿದ್ದಕ್ಕೆ ಪವಿಗೆ ಉತ್ತಮ ನೀಡಲಾಯ್ತು.

ಇನ್ನು ಮನೆಯ ಕ್ಯಾಪ್ಟನ್ಸಿ ಟಾಸ್ಕ್​ಗೆ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಈ ಬಾರಿ ಸ್ನೇಹಿತ್​ಗೆ ನೀಡಲಾಗಿತ್ತು, ಕಳೆದ ವಾರದ ಕ್ಯಾಪ್ಟನ್ ಆಗಿದ್ದ ಸ್ನೇಹಿತ್ ಮನೆಯ ಯಾವ ಸದಸ್ಯರು ಕ್ಯಾಪ್ಟೆನ್ಸಿ ಟಾಸ್ಕ್ ಆಡಬಹುದು ಎಂದು ನಿರ್ಧರಿಸುವ ಅಧಿಕಾರವನ್ನು ಬಿಗ್​ಬಾಸ್​ನಿಂದ ಪಡೆದಿದ್ದರು.

ಇದನ್ನೂ ಓದಿ:‘ವಿನಯ್, ನಮ್ರತಾ ನಿಯಮ ಪಾಲಿಸಿಲ್ಲ’; ಇಬ್ಬರನ್ನೂ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟ ಸ್ನೇಹಿತ್

ಮೊದಲಿಗೆ ಸಂಗೀತಾ ಹಾಗೂ ಕಾರ್ತಿಕ್​ರನ್ನು ಕ್ಯಾಪ್ಟೆನ್ಸಿ ಟಾಸ್ಕ್​ನಿಂದ ಆಚೆ ಇಟ್ಟರು, ಬಳಿಕ ತಮ್ಮದೇ ಗೆಳೆಯರಾದ ವಿನಯ್ ಹಾಗೂ ನಮ್ರತಾರನ್ನು ತೆಗೆದರು. ಇದು ನಮ್ರತಾಗೆ ತೀವ್ರ ಬೇಸರ ಮೂಡಿಸಿತು. ಬಳಿಕ ತನಿಷಾ, ಡ್ರೋಪ್ ಪ್ರತಾಕ್, ತುಕಾಲಿ ಸಂತು, ಪವಿ ಅವರುಗಳನ್ನು ಕ್ಯಾಪ್ಟೆನ್ಸಿ ಟಾಸ್ಕ್​ನಿಂದ ಹೊರತೆಗೆದರು.

ಉಳಿದ ಸಿರಿ, ಅವಿನಾಶ್, ಮೈಖಲ್, ವರ್ತೂರು ಸಂತೋಷ್​ ನಡುವೆ ಟಾಸ್ಕ್​ ನಡೆಯಿತು. ತಿರುಗುವ ಕುರ್ಚಿಯ ಮೇಲೆ ಕೂತು, ಮನೆಯ ಸದಸ್ಯರೆಲ್ಲ ಮಾಡುತ್ತಿರುವ ಗಲಾಟೆಯ ನಡುವೆ 13 ನಿಮಿಷಗಳನ್ನು ಮನಸ್ಸಿನಲ್ಲಿಯೇ ಎಣಿಸಿ ಸರಿಯಾಗಿ ಗಂಟೆ ಹೊಡೆಯುವವರು ಟಾಸ್ಕ್ ಗೆಲ್ಲುತ್ತಾರೆ ಎಂಬುದು ನಿಯಮವಾಗಿತ್ತು. 13 ನಿಮಿಷಕ್ಕೆ 45 ಸೆಕೆಂಡ್​ಗಳಷ್ಟೆ ಕಡಿಮೆ ಲೆಕ್ಕಹಾಕಿ ಗಂಟೆ ಹೊಡೆದ ವರ್ತೂರು ಸಂತೋಷ್​ ಕ್ಯಾಪ್ಟನ್ ಆದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್