AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬಕ್ಕೆ ಬಿಡುಗಡೆ ಆಯ್ತು ‘ದಿ ವೀರ್​’ ಫಸ್ಟ್​ ಲುಕ್​ ಪೋಸ್ಟರ್​

ಅಭಿಮಾನಿಗಳು ಕಾರ್ತಿಕ್​ ಜಯರಾಮ್​ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಅವರ ಹೊಸ ಸಿನಿಮಾದ ಮೋಷನ್​ ಪೋಸ್ಟರ್​ ಗಮನ ಸೆಳೆಯುತ್ತಿದೆ. ‘ದಿ ವೀರ್​’ ಚಿತ್ರದಲ್ಲಿ ಜೆಕೆ ಅವರಿಗೆ ಬಾರ್​ಟೆಂಡರ್​ ಪಾತ್ರವಿದೆ. ಸಸ್ಪೆನ್ಸ್​ ಥ್ರಿಲ್ಲರ್​ ಕಥಾಹಂದರದ ಈ ಚಿತ್ರಕ್ಕೆ ಆರ್​. ಲೋಹಿತ್​ ನಾಯಕ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ..

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬಕ್ಕೆ ಬಿಡುಗಡೆ ಆಯ್ತು ‘ದಿ ವೀರ್​’ ಫಸ್ಟ್​ ಲುಕ್​ ಪೋಸ್ಟರ್​
ಕಾರ್ತಿಕ್​ ಜಯರಾಮ್​
ಮದನ್​ ಕುಮಾರ್​
|

Updated on: May 01, 2024 | 10:07 PM

Share

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್ (Karthik Jayaram)​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬಣ್ಣದ ಲೋಕದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿರುವ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಅವರು ಹೆಸರು ಮಾಡಿದ್ದಾರೆ. ಇಂದು ಅವರ ಜನ್ಮದಿನದ ಪ್ರಯುಕ್ತ ‘ದಿ ವೀರ್​’ (The Veer) ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಆ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲಾಗಿದೆ. ಅಭಿಮಾನಿಗಳು ‘ದಿ ವೀರ್’ ಸಿನಿಮಾದ ಮೋಷನ್​ ಪೋಸ್ಟರ್ ಹಂಚಿಕೊಂಡು ಜೆಕೆ (JK) ಅವರಿಗೆ ವಿಶ್​ ಮಾಡುತ್ತಿದ್ದಾರೆ.

‘ದಿ ವೀರ್​’ ಸಿನಿಮಾದಲ್ಲಿ ಕಾರ್ತಿಕ್​ ಜಯರಾಮ್​ ಅವರು ಬಾರ್​ಟೆಂಡರ್​ ಪಾತ್ರವನ್ನು ಮಾಡುತ್ತಿದ್ದಾರೆ. ಅದಕ್ಕಾಗಿ ಅವರು ಒಂದಷ್ಟು ತಯಾರಿ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರಿಗೆ ಈ ರೀತಿಯ ಪಾತ್ರ ಸಿಕ್ಕಿದೆ. ಆ ಕಾರಣದಿಂದ ಅವರ ಅಭಿಮಾನಿಗಳಲ್ಲಿ ಈ ಸಿನಿಮಾ ಮೇಲೆ ಕೌತುಕ ಮೂಡಿದೆ. ಪೋಸ್ಟರ್​ ನೋಡಿದ ಸಿನಿಪ್ರಿಯರು ಕಮೆಂಟ್​ ಮೂಲಕ ತಮ್ಮ ಅನಿಸಿಕೆ ತಿಳಿಸಿದ್ದಾರೆ.

ಹೊಸ ನಿರ್ದೇಶಕ ಆರ್​. ಲೋಹಿತ್​ ನಾಯಕ್​ ಅವರು ‘ದಿ ವೀರ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವ ಅವರಿಗೆ ಇದೆ. ಜೆಕೆ ನಟಿಸಿದ್ದ ‘ಐರಾವನ್​’ ಸಿನಿಮಾದ ತಂಡದಲ್ಲೂ ಲೋಹಿತ್​ ಕೆಲಸ ಮಾಡಿದ್ದರು. ಈಗ ಅವರು ‘ದಿ ವೀರ್​’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ರೋಚಿತ್​ ಅವರು ಈ ಚಿತ್ರದಲ್ಲಿ ವಿಲನ್​ ಆಗಿದ್ದಾರೆ. ಮಂಜು ಪಾವಗಡ ಕೂಡ ನಟಿಸುತ್ತಿದ್ದಾರೆ. ಹೊಸ ನಟಿ ಪ್ರಣಿತಾ ಅವರು ಈ ಸಿನಿಮಾದ ಮೂಲಕ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: ‘ರುದ್ರ ಗರುಡ ಪುರಾಣ’ ಫಸ್ಟ್ ಲುಕ್ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಮಾರ್ಚ್​ 29ರಂದು ‘ದಿ ವೀರ್​’ ಸಿನಿಮಾ ಸೆಟ್ಟೇರಿತ್ತು. ಸಸ್ಪೆನ್ಸ್​ ಥ್ರಿಲ್ಲರ್​ ಕಹಾನಿ ಈ ಸಿನಿಮಾದಲ್ಲಿ ಇರಲಿದೆ. ಸಮಾಜಕ್ಕೆ ಸಂದೇಶ ಕೂಡ ನೀಡಲಿದೆ ಎಂದು ‘ಟೌಮ್ಸ್​ ನೌ’ಗೆ ನೀಡಿದ ಸಂದರ್ಶನದಲ್ಲಿ ಕಾರ್ತಿಕ್​ ಜಯರಾಮ್​ ಅವರು ಹೇಳಿಕೊಂಡಿದ್ದಾರೆ. ಈ ಚಿತ್ರಕ್ಕೆ ಧ್ರುವ ಎಂ.ಬಿ. ಅವರು ಸಂಗೀತ ನೀಡುತ್ತಿದ್ದಾರೆ. ಮೋಷನ್​ ಪೋಸ್ಟರ್​ನಲ್ಲಿ ಅವರ ಕೆಲಸಕ್ಕೆ ಮೆಚ್ಚುಗೆ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!