AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬಕ್ಕೆ ಬಿಡುಗಡೆ ಆಯ್ತು ‘ದಿ ವೀರ್​’ ಫಸ್ಟ್​ ಲುಕ್​ ಪೋಸ್ಟರ್​

ಅಭಿಮಾನಿಗಳು ಕಾರ್ತಿಕ್​ ಜಯರಾಮ್​ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಅವರ ಹೊಸ ಸಿನಿಮಾದ ಮೋಷನ್​ ಪೋಸ್ಟರ್​ ಗಮನ ಸೆಳೆಯುತ್ತಿದೆ. ‘ದಿ ವೀರ್​’ ಚಿತ್ರದಲ್ಲಿ ಜೆಕೆ ಅವರಿಗೆ ಬಾರ್​ಟೆಂಡರ್​ ಪಾತ್ರವಿದೆ. ಸಸ್ಪೆನ್ಸ್​ ಥ್ರಿಲ್ಲರ್​ ಕಥಾಹಂದರದ ಈ ಚಿತ್ರಕ್ಕೆ ಆರ್​. ಲೋಹಿತ್​ ನಾಯಕ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ..

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬಕ್ಕೆ ಬಿಡುಗಡೆ ಆಯ್ತು ‘ದಿ ವೀರ್​’ ಫಸ್ಟ್​ ಲುಕ್​ ಪೋಸ್ಟರ್​
ಕಾರ್ತಿಕ್​ ಜಯರಾಮ್​
ಮದನ್​ ಕುಮಾರ್​
|

Updated on: May 01, 2024 | 10:07 PM

Share

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್ (Karthik Jayaram)​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬಣ್ಣದ ಲೋಕದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿರುವ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಅವರು ಹೆಸರು ಮಾಡಿದ್ದಾರೆ. ಇಂದು ಅವರ ಜನ್ಮದಿನದ ಪ್ರಯುಕ್ತ ‘ದಿ ವೀರ್​’ (The Veer) ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಆ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲಾಗಿದೆ. ಅಭಿಮಾನಿಗಳು ‘ದಿ ವೀರ್’ ಸಿನಿಮಾದ ಮೋಷನ್​ ಪೋಸ್ಟರ್ ಹಂಚಿಕೊಂಡು ಜೆಕೆ (JK) ಅವರಿಗೆ ವಿಶ್​ ಮಾಡುತ್ತಿದ್ದಾರೆ.

‘ದಿ ವೀರ್​’ ಸಿನಿಮಾದಲ್ಲಿ ಕಾರ್ತಿಕ್​ ಜಯರಾಮ್​ ಅವರು ಬಾರ್​ಟೆಂಡರ್​ ಪಾತ್ರವನ್ನು ಮಾಡುತ್ತಿದ್ದಾರೆ. ಅದಕ್ಕಾಗಿ ಅವರು ಒಂದಷ್ಟು ತಯಾರಿ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರಿಗೆ ಈ ರೀತಿಯ ಪಾತ್ರ ಸಿಕ್ಕಿದೆ. ಆ ಕಾರಣದಿಂದ ಅವರ ಅಭಿಮಾನಿಗಳಲ್ಲಿ ಈ ಸಿನಿಮಾ ಮೇಲೆ ಕೌತುಕ ಮೂಡಿದೆ. ಪೋಸ್ಟರ್​ ನೋಡಿದ ಸಿನಿಪ್ರಿಯರು ಕಮೆಂಟ್​ ಮೂಲಕ ತಮ್ಮ ಅನಿಸಿಕೆ ತಿಳಿಸಿದ್ದಾರೆ.

ಹೊಸ ನಿರ್ದೇಶಕ ಆರ್​. ಲೋಹಿತ್​ ನಾಯಕ್​ ಅವರು ‘ದಿ ವೀರ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವ ಅವರಿಗೆ ಇದೆ. ಜೆಕೆ ನಟಿಸಿದ್ದ ‘ಐರಾವನ್​’ ಸಿನಿಮಾದ ತಂಡದಲ್ಲೂ ಲೋಹಿತ್​ ಕೆಲಸ ಮಾಡಿದ್ದರು. ಈಗ ಅವರು ‘ದಿ ವೀರ್​’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ರೋಚಿತ್​ ಅವರು ಈ ಚಿತ್ರದಲ್ಲಿ ವಿಲನ್​ ಆಗಿದ್ದಾರೆ. ಮಂಜು ಪಾವಗಡ ಕೂಡ ನಟಿಸುತ್ತಿದ್ದಾರೆ. ಹೊಸ ನಟಿ ಪ್ರಣಿತಾ ಅವರು ಈ ಸಿನಿಮಾದ ಮೂಲಕ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: ‘ರುದ್ರ ಗರುಡ ಪುರಾಣ’ ಫಸ್ಟ್ ಲುಕ್ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಮಾರ್ಚ್​ 29ರಂದು ‘ದಿ ವೀರ್​’ ಸಿನಿಮಾ ಸೆಟ್ಟೇರಿತ್ತು. ಸಸ್ಪೆನ್ಸ್​ ಥ್ರಿಲ್ಲರ್​ ಕಹಾನಿ ಈ ಸಿನಿಮಾದಲ್ಲಿ ಇರಲಿದೆ. ಸಮಾಜಕ್ಕೆ ಸಂದೇಶ ಕೂಡ ನೀಡಲಿದೆ ಎಂದು ‘ಟೌಮ್ಸ್​ ನೌ’ಗೆ ನೀಡಿದ ಸಂದರ್ಶನದಲ್ಲಿ ಕಾರ್ತಿಕ್​ ಜಯರಾಮ್​ ಅವರು ಹೇಳಿಕೊಂಡಿದ್ದಾರೆ. ಈ ಚಿತ್ರಕ್ಕೆ ಧ್ರುವ ಎಂ.ಬಿ. ಅವರು ಸಂಗೀತ ನೀಡುತ್ತಿದ್ದಾರೆ. ಮೋಷನ್​ ಪೋಸ್ಟರ್​ನಲ್ಲಿ ಅವರ ಕೆಲಸಕ್ಕೆ ಮೆಚ್ಚುಗೆ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?