AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಬಳಿಕ ಕಾರ್ತಿಕ್​ ಮಹೇಶ್ ಕೇಳಿದ ಸಿನಿಮಾ ಕಥೆಗಳೆಷ್ಟು? ಲೆಕ್ಕ ಕೊಟ್ಟ ನಟ

karthik Mahesh: ಈ ಬಾರಿಯ ಬಿಗ್ ಬಾಸ್ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದರಿಂದ ಸ್ಪರ್ಧಿಗಳಿಗೆ, ವಿನ್ನರ್​ಗೆ ಸಾಕಷ್ಟು ಫೇಮ್ ಸಿಕ್ಕಿದೆ. ಕಾರ್ತಿಕ್ ಮಹೇಶ್ ಅವರು ತಮಗೆ ಬಂದ ಸಿನಿಮಾ ಆಫರ್ ಬಗ್ಗೆ ಮಾತನಾಡಿದ್ದಾರೆ. ‘ಸುಮಾರು ಸಿನಿಮಾ ಆಫರ್​ಗಳು ಬರುತ್ತಿವೆ. ನಾನು ಯಾವುದೂ ಓಕೆ ಮಾಡಿಲ್ಲ’ ಎಂದಿದ್ದಾರೆ.

ಬಿಗ್ ಬಾಸ್ ಬಳಿಕ ಕಾರ್ತಿಕ್​ ಮಹೇಶ್ ಕೇಳಿದ ಸಿನಿಮಾ ಕಥೆಗಳೆಷ್ಟು? ಲೆಕ್ಕ ಕೊಟ್ಟ ನಟ
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on:Apr 20, 2024 | 10:34 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ವಿನ್ನರ್ ಕಾರ್ತಿಕ್ ಮಹೇಶ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಅವರ ಖ್ಯಾತಿ ಹೆಚ್ಚುತ್ತಿದೆ. ಸಿನಿಮಾಗಳಲ್ಲಿ, ಕಿರುತೆರೆಯಲ್ಲಿ ನಟಿಸಿ ಕಾರ್ತಿಕ್ ಜನಪ್ರಿಯತೆ ಪಡೆದಿದ್ದಾರೆ. ಆ ಬಳಿಕ ಬಿಗ್ ಬಾಸ್ ಮನೆಗೆ ಹೋಗಿ ಅವರು ಕಪ್ ಗೆದ್ದರು. ಇದರಿಂದ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಬಿಗ್ ಬಾಸ್ ಮುಗಿದ ಬಳಿಕ ಸಿನಿಮಾ ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಆದರೆ, ಯಾವುದನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಯಾವ ರೀತಿಯ ಕಥೆಗಳು ಅವರನ್ನು ಹುಡುಕಿ ಬರುತ್ತಿವೆ ಎನ್ನುವ ಬಗ್ಗೆ ಅವರು ‘ಟಿವಿ9 ಕನ್ನಡ ಡಿಜಿಟಲ್’ ಜೊತೆ ಮಾತನಾಡಿದ್ದಾರೆ.

ಈ ಬಾರಿಯ ಬಿಗ್ ಬಾಸ್ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದರಿಂದ ಸ್ಪರ್ಧಿಗಳಿಗೆ, ವಿನ್ನರ್​ಗೆ ಸಾಕಷ್ಟು ಫೇಮ್ ಸಿಕ್ಕಿದೆ. ಕಾರ್ತಿಕ್ ಮಹೇಶ್ ಅವರು ತಮಗೆ ಬಂದ ಸಿನಿಮಾ ಆಫರ್ ಬಗ್ಗೆ ಮಾತನಾಡಿದ್ದಾರೆ. ‘ಸುಮಾರು ಸಿನಿಮಾ ಆಫರ್​ಗಳು ಬರುತ್ತಿವೆ. ನಾನು ಯಾವುದೂ ಓಕೆ ಮಾಡಿಲ್ಲ’ ಎಂದಿದ್ದಾರೆ.

ಕಾರ್ತಿಕ್ ಅವರು ಯಾವ ರೀತಿಯ ಸಿನಿಮಾ ಫೈನಲ್ ಮಾಡಲಿದ್ದಾರೆ? ಯಾವ ರೀತಿಯ ಆಫರ್ ಒಪ್ಪಿಕೊಳ್ಳುತ್ತಾರೆ ಅನ್ನೋ ಪ್ರಶ್ನೆ ಅಭಿಮಾನಿಗಳಲ್ಲಿ ಇರುತ್ತದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಯಾವ ರೀತಿಯ ಪಾತ್ರ ಒಪ್ಪಿಕೊಳ್ಳುತ್ತೇನೆ ಎಂಬುದನ್ನು ಹೇಳೋಕೆ ಸಾಧ್ಯವಿಲ್ಲ. ಯಾರ ಸಿನಿಮಾ, ಪಾತ್ರಕ್ಕೆ ಎಷ್ಟು ತೂಕ ಇದೆ ಅನ್ನೋದು ಮುಖ್ಯವಾಗುತ್ತದೆ. ನನಗೆ ಪಾತ್ರ ಮುಖ್ಯ. ಹೀರೋ ಓರಿಯೆಂಟೆಡ್ ಸಿನಿಮಾಗಳನ್ನು ಮುಖ್ಯವಾಗಿ ಹುಡುಕುತ್ತಿದ್ದೇನೆ. ಕಳೆದ ತಿಂಗಳವರೆಗೆ 15ಕ್ಕಿಂತ ಜಾಸ್ತಿ ಕಥೆ ಕೇಳಿದ್ದೇನೆ. ಆ ಬಳಿಕ ಲೆಕ್ಕ ಇಟ್ಟುಕೊಳ್ಳೋದನ್ನು ಬಿಟ್ಟಿದ್ದೇನೆ’ ಎಂದಿದ್ದಾರೆ ಕಾರ್ತಿಕ್.

ಲವರ್ ಬಾಯ್​ ಆಗಿ, ಹೀರೋ ಆಗಿ, ಅಗ್ರೆಸ್ಸಿವ್ ವ್ಯಕ್ತಿಯಾಗಿ ಕಾರ್ತಿಕ್ ಮಹೇಶ್ ಅವರು ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಎಲ್ಲಾ ರೀತಿಯ ಕಥೆಗಳು ಅವರನ್ನು ಹುಡುಕಿ ಬರುತ್ತಿವೆ. ‘ಲವ್​ ಸ್ಟೋರಿ, ರೋಘ್ ರೀತಿಯ ಪಾತ್ರ, ಅರ್ಜುನ್ ರೆಡ್ಡಿ ಸಿನಿಮಾ ರೀತಿಯ ಕಥೆ, ಹ್ಯೂಮರ್ ಸೇರಿ ಎಲ್ಲಾ ಜಾನರ್​ನ ಕಥೆ ಬರುತ್ತಿದೆ. ಬಿಗ್ ಬಾಸ್​ನಲ್ಲಿ ಎಲ್ಲಾ ರೀತಿಯಲ್ಲೂ ಜನರು ನನ್ನನ್ನು ನೋಡಿದ್ದಾರೆ. ಹೀಗಾಗಿ, ಅದೇ ರೀತಿಯ ಪಾತ್ರಗಳು ಬರುತ್ತಿವೆ’ ಎಂದಿದ್ದಾರೆ ಕಾರ್ತಿಕ್.

ಇದನ್ನೂ ಓದಿ: ಕಾರ್ತಿಕ್ ಮಹೇಶ್​ಗೆ ಇದು ಮರೆಯಲಾಗದ ಕ್ಷಣ; ವಿಡಿಯೋ ಹಂಚಿಕೊಂಡ ಬಿಗ್ ಬಾಸ್ ವಿನ್ನರ್

ಬಿಗ್ ಬಾಸ್​ಗೆ ಹೋದ ಬಳಿಕ ಕಾರ್ತಿಕ್ ಮಹೇಶ್ ಅವರ ಇನ್​ಸ್ಟಾಗ್ರಾಮ್ ಹಿಂಬಾಲಕರ ಸಂಖ್ಯೆ ಹೆಚ್ಚಿದೆ. ಇದು ಕೇವಲ ನಂಬರ್ ಅನ್ನೋದು ಕಾರ್ತಿಕ್ ಮಹೇಶ್ ಅಭಿಪ್ರಾಯ. ‘ಅನೇಕರು ಇನ್​ಸ್ಟಾಗ್ರಾಮ್​ನಲ್ಲಿ ಇಲ್ಲ. ವಯಸ್ಸಾದವರೆಲ್ಲ ಎದುರು ಸಿಕ್ಕಾಗ ಪ್ರೀತಿ ತೋರಿಸುತ್ತಾರೆ. ಹೀಗಾಗಿ, ಇನ್​ಸ್ಟಾಗ್ರಾಮ್ ಹಿಂಬಾಲಕರ ಸಂಖ್ಯೆ ಅನ್ನೋದು ಕೇವಲ ನಂಬರ್’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:34 am, Sat, 20 April 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!