AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಮಹೇಶ್​​ಗೆ ಇನ್ನೂ ಸಿಕ್ಕಿಲ್ಲ ‘ಬಿಗ್ ಬಾಸ್’ ಕಾರ್; ಕಾರಣ ವಿವರಿಸಿದ ನಟ

‘ಬಿಗ್ ಬಾಸ್’ ವಿನ್ ಆದವರಿಗೆ ಈ ಬಾರಿ 50 ಲಕ್ಷ ರೂಪಾಯಿ, ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬ್ರೇಜಾ ಕಾರು  ಸಿಕ್ಕಿತ್ತು. ಆದರೆ, ಇನ್ನೂ ಕಾರು ಅವರ ಕೈ ಸೇರಿಲ್ಲವಂತೆ. ಈ ಬಗ್ಗೆ ಅವರು ಸಂದರ್ಶನ ಒಂದರಲ್ಲಿ ಈ ವಿಚಾರ ಹೇಳಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕ್ಲಿಪ್ ವೈರಲ್ ಆಗಿದೆ.

ಕಾರ್ತಿಕ್ ಮಹೇಶ್​​ಗೆ ಇನ್ನೂ ಸಿಕ್ಕಿಲ್ಲ ‘ಬಿಗ್ ಬಾಸ್’ ಕಾರ್; ಕಾರಣ ವಿವರಿಸಿದ ನಟ
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Mar 23, 2024 | 11:02 AM

Share

ನಟ ಕಾರ್ತಿಕ್ ಮಹೇಶ್ (Karthik Mahesh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಆಗಿ ಹೊರ ಹೊಮ್ಮಿದರು. ಅವರ ಖ್ಯಾತಿ ಹೆಚ್ಚಿದೆ. ಅವರ ಹಿಂಬಾಲಕರ ಸಂಖ್ಯೆ ದೊಡ್ಡದಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಲಕ್ಷಾಂತರ ಫಾಲೋವರ್ಸ್ ಸಿಕ್ಕಿದ್ದಾರೆ. ಹಲವು ಸಿನಿಮಾ ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಯಾವುದೂ ಇನ್ನೂ ಫೈನಲ್ ಆಗಿಲ್ಲ. ಈ ಮಧ್ಯೆ ಕಾರ್ತಿಕ್ ಅಚ್ಚರಿಯ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

‘ಬಿಗ್ ಬಾಸ್’ ವಿನ್ ಆದವರಿಗೆ ಈ ಬಾರಿ 50 ಲಕ್ಷ ರೂಪಾಯಿ, ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬ್ರೇಜಾ ಕಾರು  ಸಿಕ್ಕಿತ್ತು. ಆದರೆ, ಇನ್ನೂ ಕಾರು ಅವರ ಕೈ ಸೇರಿಲ್ಲವಂತೆ. ಈ ಬಗ್ಗೆ ಅವರು ಸಂದರ್ಶನ ಒಂದರಲ್ಲಿ ಈ ವಿಚಾರ ಹೇಳಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕ್ಲಿಪ್ ವೈರಲ್ ಆಗಿದೆ. ‘ಸ್ಪೀಡ್ ಪ್ಲಸ್ ಕರ್ನಾಟಕ’ಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಸಿಎಂನ ಭೇಟಿ ಮಾಡಿದ ಕಾರ್ತಿಕ್ ಮಹೇಶ್; ‘ಒಳ್ಳೆಯದಾಗಲಿ’ ಎಂದು ಹಾರೈಸಿದ ಸಿದ್ದರಾಮಯ್ಯ

ಕಾರ್ತಿಕ್ ಮಹೇಶ್ ಅವರು ಕಿರುತೆರೆ ನಟನಾಗಿ, ಸಿನಿಮಾ ರಂಗದ ನಾಯಕನಾಗಿ ಗಮನ ಸೆಳೆದವರು. ರಾಷ್ಟ್ರ ಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾದಲ್ಲಿ ಕಾರ್ತಿಕ್ ನಟಿಸಿದ್ದರು. ಈ ಚಿತ್ರ ಗಮನ ಸೆಳೆಯಿತು. ಈ ಚಿತ್ರದಿಂದ ಕಾರ್ತಿಕ್ ಖ್ಯಾತಿ ಹೆಚ್ಚಿತು. ಬಿಗ್ ಬಾಸ್​ಗೆ ಬಂದ ಬಳಿಕ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ. ಈಗ ಅವರು ಅಚ್ಚರಿಯ ವಿಚಾರ ಹೇಳಿಕೊಂಡಿದ್ದಾರೆ.

View this post on Instagram

A post shared by @chumu_chumu__

‘ಬಿಗ್ ಬಾಸ್​ನಿಂದ ಗೆದ್ದ ಹಣ ಹಂತಹಂತವಾಗಿ ಬರುತ್ತಿದೆ. ಗೆದ್ದ ಕಾರು ಇನ್ನೂ ಬಂದಿಲ್ಲ. ನಾಲ್ಕೈದು ತಿಂಗಳು ಬೇಕು ಎಂದು ಹೇಳಿದ್ದಾರೆ. ದೆಹಲಿಯಿಂದ ಒಪ್ಪಿಗೆ ಸಿಕ್ಕಿ ಬರಬೇಕು’ ಎಂದು ಅವರು ಹೇಳಿಕೊಂಡಿದ್ದರು. ಈ ವಿಡಿಯೋಗೆ ಅನೇಕರು ಬೇಸರ ಹೊರಹಾಕಿದ್ದಾರೆ. ಕಾರ್ತಿಕ್​ಗೆ ಬೇಗ ಕಾರು ಸಿಗಲಿ ಎಂದು ಅನೇಕರು ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ