AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಮಹೇಶ್​​ಗೆ ಇನ್ನೂ ಸಿಕ್ಕಿಲ್ಲ ‘ಬಿಗ್ ಬಾಸ್’ ಕಾರ್; ಕಾರಣ ವಿವರಿಸಿದ ನಟ

‘ಬಿಗ್ ಬಾಸ್’ ವಿನ್ ಆದವರಿಗೆ ಈ ಬಾರಿ 50 ಲಕ್ಷ ರೂಪಾಯಿ, ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬ್ರೇಜಾ ಕಾರು  ಸಿಕ್ಕಿತ್ತು. ಆದರೆ, ಇನ್ನೂ ಕಾರು ಅವರ ಕೈ ಸೇರಿಲ್ಲವಂತೆ. ಈ ಬಗ್ಗೆ ಅವರು ಸಂದರ್ಶನ ಒಂದರಲ್ಲಿ ಈ ವಿಚಾರ ಹೇಳಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕ್ಲಿಪ್ ವೈರಲ್ ಆಗಿದೆ.

ಕಾರ್ತಿಕ್ ಮಹೇಶ್​​ಗೆ ಇನ್ನೂ ಸಿಕ್ಕಿಲ್ಲ ‘ಬಿಗ್ ಬಾಸ್’ ಕಾರ್; ಕಾರಣ ವಿವರಿಸಿದ ನಟ
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Mar 23, 2024 | 11:02 AM

Share

ನಟ ಕಾರ್ತಿಕ್ ಮಹೇಶ್ (Karthik Mahesh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಆಗಿ ಹೊರ ಹೊಮ್ಮಿದರು. ಅವರ ಖ್ಯಾತಿ ಹೆಚ್ಚಿದೆ. ಅವರ ಹಿಂಬಾಲಕರ ಸಂಖ್ಯೆ ದೊಡ್ಡದಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಲಕ್ಷಾಂತರ ಫಾಲೋವರ್ಸ್ ಸಿಕ್ಕಿದ್ದಾರೆ. ಹಲವು ಸಿನಿಮಾ ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಯಾವುದೂ ಇನ್ನೂ ಫೈನಲ್ ಆಗಿಲ್ಲ. ಈ ಮಧ್ಯೆ ಕಾರ್ತಿಕ್ ಅಚ್ಚರಿಯ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

‘ಬಿಗ್ ಬಾಸ್’ ವಿನ್ ಆದವರಿಗೆ ಈ ಬಾರಿ 50 ಲಕ್ಷ ರೂಪಾಯಿ, ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬ್ರೇಜಾ ಕಾರು  ಸಿಕ್ಕಿತ್ತು. ಆದರೆ, ಇನ್ನೂ ಕಾರು ಅವರ ಕೈ ಸೇರಿಲ್ಲವಂತೆ. ಈ ಬಗ್ಗೆ ಅವರು ಸಂದರ್ಶನ ಒಂದರಲ್ಲಿ ಈ ವಿಚಾರ ಹೇಳಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕ್ಲಿಪ್ ವೈರಲ್ ಆಗಿದೆ. ‘ಸ್ಪೀಡ್ ಪ್ಲಸ್ ಕರ್ನಾಟಕ’ಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಸಿಎಂನ ಭೇಟಿ ಮಾಡಿದ ಕಾರ್ತಿಕ್ ಮಹೇಶ್; ‘ಒಳ್ಳೆಯದಾಗಲಿ’ ಎಂದು ಹಾರೈಸಿದ ಸಿದ್ದರಾಮಯ್ಯ

ಕಾರ್ತಿಕ್ ಮಹೇಶ್ ಅವರು ಕಿರುತೆರೆ ನಟನಾಗಿ, ಸಿನಿಮಾ ರಂಗದ ನಾಯಕನಾಗಿ ಗಮನ ಸೆಳೆದವರು. ರಾಷ್ಟ್ರ ಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾದಲ್ಲಿ ಕಾರ್ತಿಕ್ ನಟಿಸಿದ್ದರು. ಈ ಚಿತ್ರ ಗಮನ ಸೆಳೆಯಿತು. ಈ ಚಿತ್ರದಿಂದ ಕಾರ್ತಿಕ್ ಖ್ಯಾತಿ ಹೆಚ್ಚಿತು. ಬಿಗ್ ಬಾಸ್​ಗೆ ಬಂದ ಬಳಿಕ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ. ಈಗ ಅವರು ಅಚ್ಚರಿಯ ವಿಚಾರ ಹೇಳಿಕೊಂಡಿದ್ದಾರೆ.

View this post on Instagram

A post shared by @chumu_chumu__

‘ಬಿಗ್ ಬಾಸ್​ನಿಂದ ಗೆದ್ದ ಹಣ ಹಂತಹಂತವಾಗಿ ಬರುತ್ತಿದೆ. ಗೆದ್ದ ಕಾರು ಇನ್ನೂ ಬಂದಿಲ್ಲ. ನಾಲ್ಕೈದು ತಿಂಗಳು ಬೇಕು ಎಂದು ಹೇಳಿದ್ದಾರೆ. ದೆಹಲಿಯಿಂದ ಒಪ್ಪಿಗೆ ಸಿಕ್ಕಿ ಬರಬೇಕು’ ಎಂದು ಅವರು ಹೇಳಿಕೊಂಡಿದ್ದರು. ಈ ವಿಡಿಯೋಗೆ ಅನೇಕರು ಬೇಸರ ಹೊರಹಾಕಿದ್ದಾರೆ. ಕಾರ್ತಿಕ್​ಗೆ ಬೇಗ ಕಾರು ಸಿಗಲಿ ಎಂದು ಅನೇಕರು ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು