AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಮಹೇಶ್​​ಗೆ ಇನ್ನೂ ಸಿಕ್ಕಿಲ್ಲ ‘ಬಿಗ್ ಬಾಸ್’ ಕಾರ್; ಕಾರಣ ವಿವರಿಸಿದ ನಟ

‘ಬಿಗ್ ಬಾಸ್’ ವಿನ್ ಆದವರಿಗೆ ಈ ಬಾರಿ 50 ಲಕ್ಷ ರೂಪಾಯಿ, ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬ್ರೇಜಾ ಕಾರು  ಸಿಕ್ಕಿತ್ತು. ಆದರೆ, ಇನ್ನೂ ಕಾರು ಅವರ ಕೈ ಸೇರಿಲ್ಲವಂತೆ. ಈ ಬಗ್ಗೆ ಅವರು ಸಂದರ್ಶನ ಒಂದರಲ್ಲಿ ಈ ವಿಚಾರ ಹೇಳಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕ್ಲಿಪ್ ವೈರಲ್ ಆಗಿದೆ.

ಕಾರ್ತಿಕ್ ಮಹೇಶ್​​ಗೆ ಇನ್ನೂ ಸಿಕ್ಕಿಲ್ಲ ‘ಬಿಗ್ ಬಾಸ್’ ಕಾರ್; ಕಾರಣ ವಿವರಿಸಿದ ನಟ
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Mar 23, 2024 | 11:02 AM

Share

ನಟ ಕಾರ್ತಿಕ್ ಮಹೇಶ್ (Karthik Mahesh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಆಗಿ ಹೊರ ಹೊಮ್ಮಿದರು. ಅವರ ಖ್ಯಾತಿ ಹೆಚ್ಚಿದೆ. ಅವರ ಹಿಂಬಾಲಕರ ಸಂಖ್ಯೆ ದೊಡ್ಡದಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಲಕ್ಷಾಂತರ ಫಾಲೋವರ್ಸ್ ಸಿಕ್ಕಿದ್ದಾರೆ. ಹಲವು ಸಿನಿಮಾ ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಯಾವುದೂ ಇನ್ನೂ ಫೈನಲ್ ಆಗಿಲ್ಲ. ಈ ಮಧ್ಯೆ ಕಾರ್ತಿಕ್ ಅಚ್ಚರಿಯ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

‘ಬಿಗ್ ಬಾಸ್’ ವಿನ್ ಆದವರಿಗೆ ಈ ಬಾರಿ 50 ಲಕ್ಷ ರೂಪಾಯಿ, ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬ್ರೇಜಾ ಕಾರು  ಸಿಕ್ಕಿತ್ತು. ಆದರೆ, ಇನ್ನೂ ಕಾರು ಅವರ ಕೈ ಸೇರಿಲ್ಲವಂತೆ. ಈ ಬಗ್ಗೆ ಅವರು ಸಂದರ್ಶನ ಒಂದರಲ್ಲಿ ಈ ವಿಚಾರ ಹೇಳಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕ್ಲಿಪ್ ವೈರಲ್ ಆಗಿದೆ. ‘ಸ್ಪೀಡ್ ಪ್ಲಸ್ ಕರ್ನಾಟಕ’ಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಸಿಎಂನ ಭೇಟಿ ಮಾಡಿದ ಕಾರ್ತಿಕ್ ಮಹೇಶ್; ‘ಒಳ್ಳೆಯದಾಗಲಿ’ ಎಂದು ಹಾರೈಸಿದ ಸಿದ್ದರಾಮಯ್ಯ

ಕಾರ್ತಿಕ್ ಮಹೇಶ್ ಅವರು ಕಿರುತೆರೆ ನಟನಾಗಿ, ಸಿನಿಮಾ ರಂಗದ ನಾಯಕನಾಗಿ ಗಮನ ಸೆಳೆದವರು. ರಾಷ್ಟ್ರ ಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾದಲ್ಲಿ ಕಾರ್ತಿಕ್ ನಟಿಸಿದ್ದರು. ಈ ಚಿತ್ರ ಗಮನ ಸೆಳೆಯಿತು. ಈ ಚಿತ್ರದಿಂದ ಕಾರ್ತಿಕ್ ಖ್ಯಾತಿ ಹೆಚ್ಚಿತು. ಬಿಗ್ ಬಾಸ್​ಗೆ ಬಂದ ಬಳಿಕ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ. ಈಗ ಅವರು ಅಚ್ಚರಿಯ ವಿಚಾರ ಹೇಳಿಕೊಂಡಿದ್ದಾರೆ.

View this post on Instagram

A post shared by @chumu_chumu__

‘ಬಿಗ್ ಬಾಸ್​ನಿಂದ ಗೆದ್ದ ಹಣ ಹಂತಹಂತವಾಗಿ ಬರುತ್ತಿದೆ. ಗೆದ್ದ ಕಾರು ಇನ್ನೂ ಬಂದಿಲ್ಲ. ನಾಲ್ಕೈದು ತಿಂಗಳು ಬೇಕು ಎಂದು ಹೇಳಿದ್ದಾರೆ. ದೆಹಲಿಯಿಂದ ಒಪ್ಪಿಗೆ ಸಿಕ್ಕಿ ಬರಬೇಕು’ ಎಂದು ಅವರು ಹೇಳಿಕೊಂಡಿದ್ದರು. ಈ ವಿಡಿಯೋಗೆ ಅನೇಕರು ಬೇಸರ ಹೊರಹಾಕಿದ್ದಾರೆ. ಕಾರ್ತಿಕ್​ಗೆ ಬೇಗ ಕಾರು ಸಿಗಲಿ ಎಂದು ಅನೇಕರು ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ