AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮರಸ’ ಕುಡಿದ ಕಾರ್ತಿಕ್ ಮಹೇಶ್ ಸ್ಥಿತಿ ನೋಡಿ; ಮತ್ತೆ ಮತ್ತೆ ಅದೇ ಬೇಕು ಅಂತಿದ್ದಾರೆ ಬಿಗ್ ಬಾಸ್ ವಿನ್ನರ್

‘ರಾಮರಸ’ ಚಿತ್ರದ ಹೀರೋ ಇಂಟ್ರೋಡಕ್ಷನ್ ವಿಡಿಯೋನ ಕಿಚ್ಚ ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಜಿ ಸಿನಿಮಾಸ್ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ರಿಲೀಸ್ ಆಗಿದೆ. ಕಾರ್ತಿಕ್ ಮಹೇಶ್ ಮೊದಲ ಚಿತ್ರಕ್ಕೆ ಸುದೀಪ್ ಬೆಂಬಲ ಸಿಕ್ಕಿರುವುದರಿಂದ ಸಹಜವಾಗಿಯೇ ಅವರು ಖುಷಿ ಪಟ್ಟಿದ್ದಾರೆ.

‘ರಾಮರಸ’ ಕುಡಿದ ಕಾರ್ತಿಕ್ ಮಹೇಶ್ ಸ್ಥಿತಿ ನೋಡಿ; ಮತ್ತೆ ಮತ್ತೆ ಅದೇ ಬೇಕು ಅಂತಿದ್ದಾರೆ ಬಿಗ್ ಬಾಸ್ ವಿನ್ನರ್
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Jun 17, 2024 | 9:55 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ವಿನ್ನರ್ ಕಾರ್ತಿಕ್ ಮಹೇಶ್ ಅವರು ಯಾವುದೇ ಹೊಸ ಸಿನಿಮಾ ಘೋಷಿಸಿರಲಿಲ್ಲ. ಹೀಗೆಕೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಇತ್ತು. ಈ ಬಗ್ಗೆ ಟಿವಿ9 ಕನ್ನಡದ ಜೊತೆ ಮಾತನಾಡಿದ್ದ ಅವರು ಒಳ್ಳೆಯ ಕಥೆ ಸಿಗುತ್ತಿಲ್ಲ ಎಂದಿದ್ದರು. ಕೊನೆಗೂ ಅವರ ಸಿನಿಮಾ ಘೋಷಣೆ ಆಗಿದೆ. ಹಿರೋ ಆಗಿ ನಟಿಸುತ್ತಿರುವ ಅವರ ಚಿತ್ರಕ್ಕೆ ‘ರಾಮರಸ’ ಎನ್ನುವ ಟೈಟಲ್ ಇಡಲಾಗಿದೆ. ಗುರುದೇಶಪಾಂಡೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದರೆ, ಬಿಎಂ ಗಿರಿರಾಜ್ ಅವರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

‘ರಾಮರಸ’ ಚಿತ್ರದ ಹೀರೋ ಇಂಟ್ರೋಡಕ್ಷನ್ ವಿಡಿಯೋನ ಕಿಚ್ಚ ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಜಿ ಸಿನಿಮಾಸ್ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ರಿಲೀಸ್ ಆಗಿದೆ. ಕಾರ್ತಿಕ್ ಮಹೇಶ್ ಮೊದಲ ಚಿತ್ರಕ್ಕೆ ಸುದೀಪ್ ಬೆಂಬಲ ಸಿಕ್ಕಿರುವುದರಿಂದ ಸಹಜವಾಗಿಯೇ ಅವರು ಖುಷಿ ಪಟ್ಟಿದ್ದಾರೆ. ಚಿತ್ರಕ್ಕೆ ದೊಡ್ಡ ಬೂಸ್ಟ್ ಕೂಡ ಸಿಕ್ಕಿದೆ.

ಹೀರೋ ಇಂಟ್ರೊಡಕ್ಷನ್ ವಿಡಿಯೋ ಎಂದರೆ ಸಾಮಾನ್ಯವಾಗಿ ಒಂದೆರಡು ನಿಮಿಷ ಮಾತ್ರ ಇರುತ್ತದೆ. ಆದರೆ, ಈ ವಿಡಿಯೋ ಬರೋಬ್ಬರಿ 15 ನಿಮಿಷ ಇದೆ. ಇದರಲ್ಲಿ ಕಾರ್ತಿಕ್ ಮಹೇಶ್ ಅವರ ಕಥೆ ಕೇಳೋ ಒದ್ದಾಟ ಇದೆ. ಕಾರ್ತಿಕ್ ಅವರಿಗೆ ಯಾವುದೂ ಹೊಂದಾಣಿಕೆ ಆಗೋ ಕಥೆ ಸಿಗಲ್ಲ. ಆ ಬಳಿಕ ಅವರು ಗುರು ದೇಶಪಾಂಡೆ ಬಳಿ ಬರುತ್ತಾರೆ. ಅವರು ರಾಮರಸ ಕುಡಿಸಿ ಕಥೆ ಹೇಳುತ್ತಾರೆ. ಆಗ ಬೇರೆಯದೇ ಲೋಕ ತೆರೆದುಕೊಳ್ಳುತ್ತದೆ. ಈ ರೀತಿಯಲ್ಲಿ ಹೀರೋ ಪರಿಚಯಿಸುವ ಟೀಸರ್ ಮೂಡಿ ಬಂದಿದೆ. ಕೊನೆಯಲ್ಲಿ ಮತ್ತೆ ಅದೇ ರಾಮರಸ ಬೇಕು ಎನ್ನುವ ಬೇಡಿಕೆ ಇಡುತ್ತಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?

ಕಾರ್ತಿಕ್ ಅವರು ಹೊಸ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಸದ್ಯ ರಿಲೀಸ್ ಆಗಿರೋ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಕಾರ್ತಿಕ್ ಅವರು ಈ ಮೊದಲು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿದ್ದಾರೆ. ಅವರ ನಟನೆಯ ‘ಡೊಳ್ಳು’ ಸಿನಿಮಾ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!