AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮರಸ’ ಕುಡಿದ ಕಾರ್ತಿಕ್ ಮಹೇಶ್ ಸ್ಥಿತಿ ನೋಡಿ; ಮತ್ತೆ ಮತ್ತೆ ಅದೇ ಬೇಕು ಅಂತಿದ್ದಾರೆ ಬಿಗ್ ಬಾಸ್ ವಿನ್ನರ್

‘ರಾಮರಸ’ ಚಿತ್ರದ ಹೀರೋ ಇಂಟ್ರೋಡಕ್ಷನ್ ವಿಡಿಯೋನ ಕಿಚ್ಚ ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಜಿ ಸಿನಿಮಾಸ್ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ರಿಲೀಸ್ ಆಗಿದೆ. ಕಾರ್ತಿಕ್ ಮಹೇಶ್ ಮೊದಲ ಚಿತ್ರಕ್ಕೆ ಸುದೀಪ್ ಬೆಂಬಲ ಸಿಕ್ಕಿರುವುದರಿಂದ ಸಹಜವಾಗಿಯೇ ಅವರು ಖುಷಿ ಪಟ್ಟಿದ್ದಾರೆ.

‘ರಾಮರಸ’ ಕುಡಿದ ಕಾರ್ತಿಕ್ ಮಹೇಶ್ ಸ್ಥಿತಿ ನೋಡಿ; ಮತ್ತೆ ಮತ್ತೆ ಅದೇ ಬೇಕು ಅಂತಿದ್ದಾರೆ ಬಿಗ್ ಬಾಸ್ ವಿನ್ನರ್
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Jun 17, 2024 | 9:55 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ವಿನ್ನರ್ ಕಾರ್ತಿಕ್ ಮಹೇಶ್ ಅವರು ಯಾವುದೇ ಹೊಸ ಸಿನಿಮಾ ಘೋಷಿಸಿರಲಿಲ್ಲ. ಹೀಗೆಕೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಇತ್ತು. ಈ ಬಗ್ಗೆ ಟಿವಿ9 ಕನ್ನಡದ ಜೊತೆ ಮಾತನಾಡಿದ್ದ ಅವರು ಒಳ್ಳೆಯ ಕಥೆ ಸಿಗುತ್ತಿಲ್ಲ ಎಂದಿದ್ದರು. ಕೊನೆಗೂ ಅವರ ಸಿನಿಮಾ ಘೋಷಣೆ ಆಗಿದೆ. ಹಿರೋ ಆಗಿ ನಟಿಸುತ್ತಿರುವ ಅವರ ಚಿತ್ರಕ್ಕೆ ‘ರಾಮರಸ’ ಎನ್ನುವ ಟೈಟಲ್ ಇಡಲಾಗಿದೆ. ಗುರುದೇಶಪಾಂಡೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದರೆ, ಬಿಎಂ ಗಿರಿರಾಜ್ ಅವರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

‘ರಾಮರಸ’ ಚಿತ್ರದ ಹೀರೋ ಇಂಟ್ರೋಡಕ್ಷನ್ ವಿಡಿಯೋನ ಕಿಚ್ಚ ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಜಿ ಸಿನಿಮಾಸ್ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ರಿಲೀಸ್ ಆಗಿದೆ. ಕಾರ್ತಿಕ್ ಮಹೇಶ್ ಮೊದಲ ಚಿತ್ರಕ್ಕೆ ಸುದೀಪ್ ಬೆಂಬಲ ಸಿಕ್ಕಿರುವುದರಿಂದ ಸಹಜವಾಗಿಯೇ ಅವರು ಖುಷಿ ಪಟ್ಟಿದ್ದಾರೆ. ಚಿತ್ರಕ್ಕೆ ದೊಡ್ಡ ಬೂಸ್ಟ್ ಕೂಡ ಸಿಕ್ಕಿದೆ.

ಹೀರೋ ಇಂಟ್ರೊಡಕ್ಷನ್ ವಿಡಿಯೋ ಎಂದರೆ ಸಾಮಾನ್ಯವಾಗಿ ಒಂದೆರಡು ನಿಮಿಷ ಮಾತ್ರ ಇರುತ್ತದೆ. ಆದರೆ, ಈ ವಿಡಿಯೋ ಬರೋಬ್ಬರಿ 15 ನಿಮಿಷ ಇದೆ. ಇದರಲ್ಲಿ ಕಾರ್ತಿಕ್ ಮಹೇಶ್ ಅವರ ಕಥೆ ಕೇಳೋ ಒದ್ದಾಟ ಇದೆ. ಕಾರ್ತಿಕ್ ಅವರಿಗೆ ಯಾವುದೂ ಹೊಂದಾಣಿಕೆ ಆಗೋ ಕಥೆ ಸಿಗಲ್ಲ. ಆ ಬಳಿಕ ಅವರು ಗುರು ದೇಶಪಾಂಡೆ ಬಳಿ ಬರುತ್ತಾರೆ. ಅವರು ರಾಮರಸ ಕುಡಿಸಿ ಕಥೆ ಹೇಳುತ್ತಾರೆ. ಆಗ ಬೇರೆಯದೇ ಲೋಕ ತೆರೆದುಕೊಳ್ಳುತ್ತದೆ. ಈ ರೀತಿಯಲ್ಲಿ ಹೀರೋ ಪರಿಚಯಿಸುವ ಟೀಸರ್ ಮೂಡಿ ಬಂದಿದೆ. ಕೊನೆಯಲ್ಲಿ ಮತ್ತೆ ಅದೇ ರಾಮರಸ ಬೇಕು ಎನ್ನುವ ಬೇಡಿಕೆ ಇಡುತ್ತಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?

ಕಾರ್ತಿಕ್ ಅವರು ಹೊಸ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಸದ್ಯ ರಿಲೀಸ್ ಆಗಿರೋ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಕಾರ್ತಿಕ್ ಅವರು ಈ ಮೊದಲು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿದ್ದಾರೆ. ಅವರ ನಟನೆಯ ‘ಡೊಳ್ಳು’ ಸಿನಿಮಾ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್