AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮರಸ’ ಕುಡಿದ ಕಾರ್ತಿಕ್ ಮಹೇಶ್ ಸ್ಥಿತಿ ನೋಡಿ; ಮತ್ತೆ ಮತ್ತೆ ಅದೇ ಬೇಕು ಅಂತಿದ್ದಾರೆ ಬಿಗ್ ಬಾಸ್ ವಿನ್ನರ್

‘ರಾಮರಸ’ ಚಿತ್ರದ ಹೀರೋ ಇಂಟ್ರೋಡಕ್ಷನ್ ವಿಡಿಯೋನ ಕಿಚ್ಚ ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಜಿ ಸಿನಿಮಾಸ್ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ರಿಲೀಸ್ ಆಗಿದೆ. ಕಾರ್ತಿಕ್ ಮಹೇಶ್ ಮೊದಲ ಚಿತ್ರಕ್ಕೆ ಸುದೀಪ್ ಬೆಂಬಲ ಸಿಕ್ಕಿರುವುದರಿಂದ ಸಹಜವಾಗಿಯೇ ಅವರು ಖುಷಿ ಪಟ್ಟಿದ್ದಾರೆ.

‘ರಾಮರಸ’ ಕುಡಿದ ಕಾರ್ತಿಕ್ ಮಹೇಶ್ ಸ್ಥಿತಿ ನೋಡಿ; ಮತ್ತೆ ಮತ್ತೆ ಅದೇ ಬೇಕು ಅಂತಿದ್ದಾರೆ ಬಿಗ್ ಬಾಸ್ ವಿನ್ನರ್
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Jun 17, 2024 | 9:55 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ವಿನ್ನರ್ ಕಾರ್ತಿಕ್ ಮಹೇಶ್ ಅವರು ಯಾವುದೇ ಹೊಸ ಸಿನಿಮಾ ಘೋಷಿಸಿರಲಿಲ್ಲ. ಹೀಗೆಕೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಇತ್ತು. ಈ ಬಗ್ಗೆ ಟಿವಿ9 ಕನ್ನಡದ ಜೊತೆ ಮಾತನಾಡಿದ್ದ ಅವರು ಒಳ್ಳೆಯ ಕಥೆ ಸಿಗುತ್ತಿಲ್ಲ ಎಂದಿದ್ದರು. ಕೊನೆಗೂ ಅವರ ಸಿನಿಮಾ ಘೋಷಣೆ ಆಗಿದೆ. ಹಿರೋ ಆಗಿ ನಟಿಸುತ್ತಿರುವ ಅವರ ಚಿತ್ರಕ್ಕೆ ‘ರಾಮರಸ’ ಎನ್ನುವ ಟೈಟಲ್ ಇಡಲಾಗಿದೆ. ಗುರುದೇಶಪಾಂಡೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದರೆ, ಬಿಎಂ ಗಿರಿರಾಜ್ ಅವರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

‘ರಾಮರಸ’ ಚಿತ್ರದ ಹೀರೋ ಇಂಟ್ರೋಡಕ್ಷನ್ ವಿಡಿಯೋನ ಕಿಚ್ಚ ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಜಿ ಸಿನಿಮಾಸ್ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ರಿಲೀಸ್ ಆಗಿದೆ. ಕಾರ್ತಿಕ್ ಮಹೇಶ್ ಮೊದಲ ಚಿತ್ರಕ್ಕೆ ಸುದೀಪ್ ಬೆಂಬಲ ಸಿಕ್ಕಿರುವುದರಿಂದ ಸಹಜವಾಗಿಯೇ ಅವರು ಖುಷಿ ಪಟ್ಟಿದ್ದಾರೆ. ಚಿತ್ರಕ್ಕೆ ದೊಡ್ಡ ಬೂಸ್ಟ್ ಕೂಡ ಸಿಕ್ಕಿದೆ.

ಹೀರೋ ಇಂಟ್ರೊಡಕ್ಷನ್ ವಿಡಿಯೋ ಎಂದರೆ ಸಾಮಾನ್ಯವಾಗಿ ಒಂದೆರಡು ನಿಮಿಷ ಮಾತ್ರ ಇರುತ್ತದೆ. ಆದರೆ, ಈ ವಿಡಿಯೋ ಬರೋಬ್ಬರಿ 15 ನಿಮಿಷ ಇದೆ. ಇದರಲ್ಲಿ ಕಾರ್ತಿಕ್ ಮಹೇಶ್ ಅವರ ಕಥೆ ಕೇಳೋ ಒದ್ದಾಟ ಇದೆ. ಕಾರ್ತಿಕ್ ಅವರಿಗೆ ಯಾವುದೂ ಹೊಂದಾಣಿಕೆ ಆಗೋ ಕಥೆ ಸಿಗಲ್ಲ. ಆ ಬಳಿಕ ಅವರು ಗುರು ದೇಶಪಾಂಡೆ ಬಳಿ ಬರುತ್ತಾರೆ. ಅವರು ರಾಮರಸ ಕುಡಿಸಿ ಕಥೆ ಹೇಳುತ್ತಾರೆ. ಆಗ ಬೇರೆಯದೇ ಲೋಕ ತೆರೆದುಕೊಳ್ಳುತ್ತದೆ. ಈ ರೀತಿಯಲ್ಲಿ ಹೀರೋ ಪರಿಚಯಿಸುವ ಟೀಸರ್ ಮೂಡಿ ಬಂದಿದೆ. ಕೊನೆಯಲ್ಲಿ ಮತ್ತೆ ಅದೇ ರಾಮರಸ ಬೇಕು ಎನ್ನುವ ಬೇಡಿಕೆ ಇಡುತ್ತಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?

ಕಾರ್ತಿಕ್ ಅವರು ಹೊಸ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಸದ್ಯ ರಿಲೀಸ್ ಆಗಿರೋ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಕಾರ್ತಿಕ್ ಅವರು ಈ ಮೊದಲು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿದ್ದಾರೆ. ಅವರ ನಟನೆಯ ‘ಡೊಳ್ಳು’ ಸಿನಿಮಾ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್