AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮರಸ’ ಕುಡಿದ ಕಾರ್ತಿಕ್ ಮಹೇಶ್ ಸ್ಥಿತಿ ನೋಡಿ; ಮತ್ತೆ ಮತ್ತೆ ಅದೇ ಬೇಕು ಅಂತಿದ್ದಾರೆ ಬಿಗ್ ಬಾಸ್ ವಿನ್ನರ್

‘ರಾಮರಸ’ ಚಿತ್ರದ ಹೀರೋ ಇಂಟ್ರೋಡಕ್ಷನ್ ವಿಡಿಯೋನ ಕಿಚ್ಚ ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಜಿ ಸಿನಿಮಾಸ್ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ರಿಲೀಸ್ ಆಗಿದೆ. ಕಾರ್ತಿಕ್ ಮಹೇಶ್ ಮೊದಲ ಚಿತ್ರಕ್ಕೆ ಸುದೀಪ್ ಬೆಂಬಲ ಸಿಕ್ಕಿರುವುದರಿಂದ ಸಹಜವಾಗಿಯೇ ಅವರು ಖುಷಿ ಪಟ್ಟಿದ್ದಾರೆ.

‘ರಾಮರಸ’ ಕುಡಿದ ಕಾರ್ತಿಕ್ ಮಹೇಶ್ ಸ್ಥಿತಿ ನೋಡಿ; ಮತ್ತೆ ಮತ್ತೆ ಅದೇ ಬೇಕು ಅಂತಿದ್ದಾರೆ ಬಿಗ್ ಬಾಸ್ ವಿನ್ನರ್
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Jun 17, 2024 | 9:55 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ವಿನ್ನರ್ ಕಾರ್ತಿಕ್ ಮಹೇಶ್ ಅವರು ಯಾವುದೇ ಹೊಸ ಸಿನಿಮಾ ಘೋಷಿಸಿರಲಿಲ್ಲ. ಹೀಗೆಕೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಇತ್ತು. ಈ ಬಗ್ಗೆ ಟಿವಿ9 ಕನ್ನಡದ ಜೊತೆ ಮಾತನಾಡಿದ್ದ ಅವರು ಒಳ್ಳೆಯ ಕಥೆ ಸಿಗುತ್ತಿಲ್ಲ ಎಂದಿದ್ದರು. ಕೊನೆಗೂ ಅವರ ಸಿನಿಮಾ ಘೋಷಣೆ ಆಗಿದೆ. ಹಿರೋ ಆಗಿ ನಟಿಸುತ್ತಿರುವ ಅವರ ಚಿತ್ರಕ್ಕೆ ‘ರಾಮರಸ’ ಎನ್ನುವ ಟೈಟಲ್ ಇಡಲಾಗಿದೆ. ಗುರುದೇಶಪಾಂಡೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದರೆ, ಬಿಎಂ ಗಿರಿರಾಜ್ ಅವರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

‘ರಾಮರಸ’ ಚಿತ್ರದ ಹೀರೋ ಇಂಟ್ರೋಡಕ್ಷನ್ ವಿಡಿಯೋನ ಕಿಚ್ಚ ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಜಿ ಸಿನಿಮಾಸ್ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ರಿಲೀಸ್ ಆಗಿದೆ. ಕಾರ್ತಿಕ್ ಮಹೇಶ್ ಮೊದಲ ಚಿತ್ರಕ್ಕೆ ಸುದೀಪ್ ಬೆಂಬಲ ಸಿಕ್ಕಿರುವುದರಿಂದ ಸಹಜವಾಗಿಯೇ ಅವರು ಖುಷಿ ಪಟ್ಟಿದ್ದಾರೆ. ಚಿತ್ರಕ್ಕೆ ದೊಡ್ಡ ಬೂಸ್ಟ್ ಕೂಡ ಸಿಕ್ಕಿದೆ.

ಹೀರೋ ಇಂಟ್ರೊಡಕ್ಷನ್ ವಿಡಿಯೋ ಎಂದರೆ ಸಾಮಾನ್ಯವಾಗಿ ಒಂದೆರಡು ನಿಮಿಷ ಮಾತ್ರ ಇರುತ್ತದೆ. ಆದರೆ, ಈ ವಿಡಿಯೋ ಬರೋಬ್ಬರಿ 15 ನಿಮಿಷ ಇದೆ. ಇದರಲ್ಲಿ ಕಾರ್ತಿಕ್ ಮಹೇಶ್ ಅವರ ಕಥೆ ಕೇಳೋ ಒದ್ದಾಟ ಇದೆ. ಕಾರ್ತಿಕ್ ಅವರಿಗೆ ಯಾವುದೂ ಹೊಂದಾಣಿಕೆ ಆಗೋ ಕಥೆ ಸಿಗಲ್ಲ. ಆ ಬಳಿಕ ಅವರು ಗುರು ದೇಶಪಾಂಡೆ ಬಳಿ ಬರುತ್ತಾರೆ. ಅವರು ರಾಮರಸ ಕುಡಿಸಿ ಕಥೆ ಹೇಳುತ್ತಾರೆ. ಆಗ ಬೇರೆಯದೇ ಲೋಕ ತೆರೆದುಕೊಳ್ಳುತ್ತದೆ. ಈ ರೀತಿಯಲ್ಲಿ ಹೀರೋ ಪರಿಚಯಿಸುವ ಟೀಸರ್ ಮೂಡಿ ಬಂದಿದೆ. ಕೊನೆಯಲ್ಲಿ ಮತ್ತೆ ಅದೇ ರಾಮರಸ ಬೇಕು ಎನ್ನುವ ಬೇಡಿಕೆ ಇಡುತ್ತಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?

ಕಾರ್ತಿಕ್ ಅವರು ಹೊಸ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಸದ್ಯ ರಿಲೀಸ್ ಆಗಿರೋ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಕಾರ್ತಿಕ್ ಅವರು ಈ ಮೊದಲು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿದ್ದಾರೆ. ಅವರ ನಟನೆಯ ‘ಡೊಳ್ಳು’ ಸಿನಿಮಾ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!