‘ರಾಮರಸ’ ಕುಡಿದ ಕಾರ್ತಿಕ್ ಮಹೇಶ್ ಸ್ಥಿತಿ ನೋಡಿ; ಮತ್ತೆ ಮತ್ತೆ ಅದೇ ಬೇಕು ಅಂತಿದ್ದಾರೆ ಬಿಗ್ ಬಾಸ್ ವಿನ್ನರ್

|

Updated on: Jun 17, 2024 | 9:55 AM

‘ರಾಮರಸ’ ಚಿತ್ರದ ಹೀರೋ ಇಂಟ್ರೋಡಕ್ಷನ್ ವಿಡಿಯೋನ ಕಿಚ್ಚ ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಜಿ ಸಿನಿಮಾಸ್ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ರಿಲೀಸ್ ಆಗಿದೆ. ಕಾರ್ತಿಕ್ ಮಹೇಶ್ ಮೊದಲ ಚಿತ್ರಕ್ಕೆ ಸುದೀಪ್ ಬೆಂಬಲ ಸಿಕ್ಕಿರುವುದರಿಂದ ಸಹಜವಾಗಿಯೇ ಅವರು ಖುಷಿ ಪಟ್ಟಿದ್ದಾರೆ.

‘ರಾಮರಸ’ ಕುಡಿದ ಕಾರ್ತಿಕ್ ಮಹೇಶ್ ಸ್ಥಿತಿ ನೋಡಿ; ಮತ್ತೆ ಮತ್ತೆ ಅದೇ ಬೇಕು ಅಂತಿದ್ದಾರೆ ಬಿಗ್ ಬಾಸ್ ವಿನ್ನರ್
ಕಾರ್ತಿಕ್ ಮಹೇಶ್
Follow us on

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ವಿನ್ನರ್ ಕಾರ್ತಿಕ್ ಮಹೇಶ್ ಅವರು ಯಾವುದೇ ಹೊಸ ಸಿನಿಮಾ ಘೋಷಿಸಿರಲಿಲ್ಲ. ಹೀಗೆಕೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಇತ್ತು. ಈ ಬಗ್ಗೆ ಟಿವಿ9 ಕನ್ನಡದ ಜೊತೆ ಮಾತನಾಡಿದ್ದ ಅವರು ಒಳ್ಳೆಯ ಕಥೆ ಸಿಗುತ್ತಿಲ್ಲ ಎಂದಿದ್ದರು. ಕೊನೆಗೂ ಅವರ ಸಿನಿಮಾ ಘೋಷಣೆ ಆಗಿದೆ. ಹಿರೋ ಆಗಿ ನಟಿಸುತ್ತಿರುವ ಅವರ ಚಿತ್ರಕ್ಕೆ ‘ರಾಮರಸ’ ಎನ್ನುವ ಟೈಟಲ್ ಇಡಲಾಗಿದೆ. ಗುರುದೇಶಪಾಂಡೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದರೆ, ಬಿಎಂ ಗಿರಿರಾಜ್ ಅವರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

‘ರಾಮರಸ’ ಚಿತ್ರದ ಹೀರೋ ಇಂಟ್ರೋಡಕ್ಷನ್ ವಿಡಿಯೋನ ಕಿಚ್ಚ ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಜಿ ಸಿನಿಮಾಸ್ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ರಿಲೀಸ್ ಆಗಿದೆ. ಕಾರ್ತಿಕ್ ಮಹೇಶ್ ಮೊದಲ ಚಿತ್ರಕ್ಕೆ ಸುದೀಪ್ ಬೆಂಬಲ ಸಿಕ್ಕಿರುವುದರಿಂದ ಸಹಜವಾಗಿಯೇ ಅವರು ಖುಷಿ ಪಟ್ಟಿದ್ದಾರೆ. ಚಿತ್ರಕ್ಕೆ ದೊಡ್ಡ ಬೂಸ್ಟ್ ಕೂಡ ಸಿಕ್ಕಿದೆ.

ಹೀರೋ ಇಂಟ್ರೊಡಕ್ಷನ್ ವಿಡಿಯೋ ಎಂದರೆ ಸಾಮಾನ್ಯವಾಗಿ ಒಂದೆರಡು ನಿಮಿಷ ಮಾತ್ರ ಇರುತ್ತದೆ. ಆದರೆ, ಈ ವಿಡಿಯೋ ಬರೋಬ್ಬರಿ 15 ನಿಮಿಷ ಇದೆ. ಇದರಲ್ಲಿ ಕಾರ್ತಿಕ್ ಮಹೇಶ್ ಅವರ ಕಥೆ ಕೇಳೋ ಒದ್ದಾಟ ಇದೆ. ಕಾರ್ತಿಕ್ ಅವರಿಗೆ ಯಾವುದೂ ಹೊಂದಾಣಿಕೆ ಆಗೋ ಕಥೆ ಸಿಗಲ್ಲ. ಆ ಬಳಿಕ ಅವರು ಗುರು ದೇಶಪಾಂಡೆ ಬಳಿ ಬರುತ್ತಾರೆ. ಅವರು ರಾಮರಸ ಕುಡಿಸಿ ಕಥೆ ಹೇಳುತ್ತಾರೆ. ಆಗ ಬೇರೆಯದೇ ಲೋಕ ತೆರೆದುಕೊಳ್ಳುತ್ತದೆ. ಈ ರೀತಿಯಲ್ಲಿ ಹೀರೋ ಪರಿಚಯಿಸುವ ಟೀಸರ್ ಮೂಡಿ ಬಂದಿದೆ. ಕೊನೆಯಲ್ಲಿ ಮತ್ತೆ ಅದೇ ರಾಮರಸ ಬೇಕು ಎನ್ನುವ ಬೇಡಿಕೆ ಇಡುತ್ತಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?

ಕಾರ್ತಿಕ್ ಅವರು ಹೊಸ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಸದ್ಯ ರಿಲೀಸ್ ಆಗಿರೋ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಕಾರ್ತಿಕ್ ಅವರು ಈ ಮೊದಲು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿದ್ದಾರೆ. ಅವರ ನಟನೆಯ ‘ಡೊಳ್ಳು’ ಸಿನಿಮಾ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.