karthik Mahesh: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ಗೆದ್ದು ಬೀಗಿದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ತಮಗೆ ಸಿಗಬೇಕಿರೋ ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು ಎಂದು ಅವರು ಹೇಳಿಕೊಂಡಿದ್ದಾರೆ.

karthik Mahesh: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?
ಕಾರ್ತಿಕ್ ಮಹೇಶ್
Follow us
|

Updated on: Apr 20, 2024 | 2:39 PM

‘ಬಿಗ್ ಬಾಸ್ ಕನ್ನಡ ಸೀಸನ್ 10’ರ  (BBK 10) ವಿನ್ನರ್ ಕಾರ್ತಿಕ್ ಮಹೇಶ್​ಗೆ 50 ಲಕ್ಷ ರೂಪಾಯಿ ಜೊತೆಗೆ ಒಂದು ಎಲೆಕ್ಟ್ರಿಕ್ ಬೈಕ್, ಕಾರು ಕೊಡುವುದಾಗಿ ಬಿಗ್ ಬಾಸ್ ಕಡೆಯಿಂದ ಘೋಷಣೆ ಆಗಿತ್ತು. ಈಗಾಗಲೇ ಬೈಕ್ ಅವರ ಮನೆ ಸೇರಿದೆ. ಮಾರುತಿ ಸುಜುಕಿ ಬ್ರೇಜಾ ಕಾರು ಅವರಿಗೆ ಸಿಗಬೇಕಿತ್ತು. ಆದರೆ, ಇದಕ್ಕೆ ಮತ್ತಷ್ಟು ಸಮಯ ಹಿಡಿಯಲಿದೆಯಂತೆ. ಈ ಬಗ್ಗೆ ಕಾರ್ತಿಕ್ ಮಹೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಎಷ್ಟು ಹಣ ಸಿಕ್ಕಿದೆ ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ಗೆದ್ದು ಬೀಗಿದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ತಮಗೆ ಸಿಗಬೇಕಿರೋ ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು ಎಂದು ಅವರು ಹೇಳಿಕೊಂಡಿದ್ದಾರೆ. ಈ ಪ್ರಕ್ರಿಯೆ ಸ್ವಲ್ಪ ದೀರ್ಘವಾಗಿದೆ ಎಂದಿದ್ದಾರೆ.

‘ಬಿಗ್ ಬಾಸ್​’ನಿಂದ ಬಂದ ಹಣದಲ್ಲಿ ಮನೆ ಕಟ್ಟೋ ಆಸೆಯನ್ನು ಕಾರ್ತಿಕ್ ಮಹೇಶ್ ಹೊಂದಿದ್ದಾರೆ. ‘ಮನೆ ನೋಡ್ತಾ ಇದೀನಿ. ಬೆಂಗಳೂರಲ್ಲಿ ಮನೆ ಕಟ್ಟಬೇಕು ಎಂದರೆ ಬಿಗ್ ಬಾಸ್​ನ ಹಣ ಎಲ್ಲಿಯೂ ಸಾಕಾಗಲ್ಲ. ನಾನು ದುಡಿಯಬೇಕು’  ಎಂದು ಕಾರ್ತಿಕ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಬಳಿಕ ಕಾರ್ತಿಕ್​ ಮಹೇಶ್ ಕೇಳಿದ ಸಿನಿಮಾ ಕಥೆಗಳೆಷ್ಟು? ಲೆಕ್ಕ ಕೊಟ್ಟ ನಟ

ಈ ಮೊದಲು ‘ಮರಾಠಿ ಬಿಗ್ ಬಾಸ್ ಸೀಸನ್ 2’ರ ವಿನ್ನರ್ ಶಿವ ಠಾಕ್ರೆ ಬಿಗ್ ಬಾಸ್ ಬಹುಮಾನದ ಮೊತ್ತದ ಬಗ್ಗೆ ಮಾತನಾಡಿದ್ದರು. ಅವರು ಪ್ರಾಮಿಸ್ ಮಾಡಿದಷ್ಟು ಹಣ ನೀಡಿಲ್ಲ ಎಂದಿದ್ದರು. 25ರಲ್ಲಿ 11 ಲಕ್ಷ ರೂಪಾಯಿ ಮಾತ್ರ ಸಿಕ್ಕಿದೆ ಎಂದಿದ್ದರು. ಕಾರ್ತಿಕ್ ಈ ಬಗ್ಗೆ ಮಾತನಾಡಿದ್ದಾರೆ. ‘ಐವತ್ತರಲ್ಲಿ 35 ಲಕ್ಷ ರೂಪಾಯಿ ಬರುತ್ತದೆ. 15 ಲಕ್ಷ ರೂಪಾಯಿ ಟ್ಯಾಕ್ಸ್​ ಕಟ್ ಆಗುತ್ತದೆ. ಹಂತ ಹಂತವಾಗಿ ಹಣ ಬರುತ್ತಿದೆ’ ಎಂದಿದ್ದಾರೆ ಕಾರ್ತಿಕ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ