AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

karthik Mahesh: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ಗೆದ್ದು ಬೀಗಿದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ತಮಗೆ ಸಿಗಬೇಕಿರೋ ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು ಎಂದು ಅವರು ಹೇಳಿಕೊಂಡಿದ್ದಾರೆ.

karthik Mahesh: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Apr 20, 2024 | 2:39 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ  (BBK 10) ವಿನ್ನರ್ ಕಾರ್ತಿಕ್ ಮಹೇಶ್​ಗೆ 50 ಲಕ್ಷ ರೂಪಾಯಿ ಜೊತೆಗೆ ಒಂದು ಎಲೆಕ್ಟ್ರಿಕ್ ಬೈಕ್, ಕಾರು ಕೊಡುವುದಾಗಿ ಬಿಗ್ ಬಾಸ್ ಕಡೆಯಿಂದ ಘೋಷಣೆ ಆಗಿತ್ತು. ಈಗಾಗಲೇ ಬೈಕ್ ಅವರ ಮನೆ ಸೇರಿದೆ. ಮಾರುತಿ ಸುಜುಕಿ ಬ್ರೇಜಾ ಕಾರು ಅವರಿಗೆ ಸಿಗಬೇಕಿತ್ತು. ಆದರೆ, ಇದಕ್ಕೆ ಮತ್ತಷ್ಟು ಸಮಯ ಹಿಡಿಯಲಿದೆಯಂತೆ. ಈ ಬಗ್ಗೆ ಕಾರ್ತಿಕ್ ಮಹೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಎಷ್ಟು ಹಣ ಸಿಕ್ಕಿದೆ ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ಗೆದ್ದು ಬೀಗಿದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ತಮಗೆ ಸಿಗಬೇಕಿರೋ ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು ಎಂದು ಅವರು ಹೇಳಿಕೊಂಡಿದ್ದಾರೆ. ಈ ಪ್ರಕ್ರಿಯೆ ಸ್ವಲ್ಪ ದೀರ್ಘವಾಗಿದೆ ಎಂದಿದ್ದಾರೆ.

‘ಬಿಗ್ ಬಾಸ್​’ನಿಂದ ಬಂದ ಹಣದಲ್ಲಿ ಮನೆ ಕಟ್ಟೋ ಆಸೆಯನ್ನು ಕಾರ್ತಿಕ್ ಮಹೇಶ್ ಹೊಂದಿದ್ದಾರೆ. ‘ಮನೆ ನೋಡ್ತಾ ಇದೀನಿ. ಬೆಂಗಳೂರಲ್ಲಿ ಮನೆ ಕಟ್ಟಬೇಕು ಎಂದರೆ ಬಿಗ್ ಬಾಸ್​ನ ಹಣ ಎಲ್ಲಿಯೂ ಸಾಕಾಗಲ್ಲ. ನಾನು ದುಡಿಯಬೇಕು’  ಎಂದು ಕಾರ್ತಿಕ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಬಳಿಕ ಕಾರ್ತಿಕ್​ ಮಹೇಶ್ ಕೇಳಿದ ಸಿನಿಮಾ ಕಥೆಗಳೆಷ್ಟು? ಲೆಕ್ಕ ಕೊಟ್ಟ ನಟ

ಈ ಮೊದಲು ‘ಮರಾಠಿ ಬಿಗ್ ಬಾಸ್ ಸೀಸನ್ 2’ರ ವಿನ್ನರ್ ಶಿವ ಠಾಕ್ರೆ ಬಿಗ್ ಬಾಸ್ ಬಹುಮಾನದ ಮೊತ್ತದ ಬಗ್ಗೆ ಮಾತನಾಡಿದ್ದರು. ಅವರು ಪ್ರಾಮಿಸ್ ಮಾಡಿದಷ್ಟು ಹಣ ನೀಡಿಲ್ಲ ಎಂದಿದ್ದರು. 25ರಲ್ಲಿ 11 ಲಕ್ಷ ರೂಪಾಯಿ ಮಾತ್ರ ಸಿಕ್ಕಿದೆ ಎಂದಿದ್ದರು. ಕಾರ್ತಿಕ್ ಈ ಬಗ್ಗೆ ಮಾತನಾಡಿದ್ದಾರೆ. ‘ಐವತ್ತರಲ್ಲಿ 35 ಲಕ್ಷ ರೂಪಾಯಿ ಬರುತ್ತದೆ. 15 ಲಕ್ಷ ರೂಪಾಯಿ ಟ್ಯಾಕ್ಸ್​ ಕಟ್ ಆಗುತ್ತದೆ. ಹಂತ ಹಂತವಾಗಿ ಹಣ ಬರುತ್ತಿದೆ’ ಎಂದಿದ್ದಾರೆ ಕಾರ್ತಿಕ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!