AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

karthik Mahesh: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ಗೆದ್ದು ಬೀಗಿದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ತಮಗೆ ಸಿಗಬೇಕಿರೋ ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು ಎಂದು ಅವರು ಹೇಳಿಕೊಂಡಿದ್ದಾರೆ.

karthik Mahesh: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Apr 20, 2024 | 2:39 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ  (BBK 10) ವಿನ್ನರ್ ಕಾರ್ತಿಕ್ ಮಹೇಶ್​ಗೆ 50 ಲಕ್ಷ ರೂಪಾಯಿ ಜೊತೆಗೆ ಒಂದು ಎಲೆಕ್ಟ್ರಿಕ್ ಬೈಕ್, ಕಾರು ಕೊಡುವುದಾಗಿ ಬಿಗ್ ಬಾಸ್ ಕಡೆಯಿಂದ ಘೋಷಣೆ ಆಗಿತ್ತು. ಈಗಾಗಲೇ ಬೈಕ್ ಅವರ ಮನೆ ಸೇರಿದೆ. ಮಾರುತಿ ಸುಜುಕಿ ಬ್ರೇಜಾ ಕಾರು ಅವರಿಗೆ ಸಿಗಬೇಕಿತ್ತು. ಆದರೆ, ಇದಕ್ಕೆ ಮತ್ತಷ್ಟು ಸಮಯ ಹಿಡಿಯಲಿದೆಯಂತೆ. ಈ ಬಗ್ಗೆ ಕಾರ್ತಿಕ್ ಮಹೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಎಷ್ಟು ಹಣ ಸಿಕ್ಕಿದೆ ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ಗೆದ್ದು ಬೀಗಿದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ತಮಗೆ ಸಿಗಬೇಕಿರೋ ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು ಎಂದು ಅವರು ಹೇಳಿಕೊಂಡಿದ್ದಾರೆ. ಈ ಪ್ರಕ್ರಿಯೆ ಸ್ವಲ್ಪ ದೀರ್ಘವಾಗಿದೆ ಎಂದಿದ್ದಾರೆ.

‘ಬಿಗ್ ಬಾಸ್​’ನಿಂದ ಬಂದ ಹಣದಲ್ಲಿ ಮನೆ ಕಟ್ಟೋ ಆಸೆಯನ್ನು ಕಾರ್ತಿಕ್ ಮಹೇಶ್ ಹೊಂದಿದ್ದಾರೆ. ‘ಮನೆ ನೋಡ್ತಾ ಇದೀನಿ. ಬೆಂಗಳೂರಲ್ಲಿ ಮನೆ ಕಟ್ಟಬೇಕು ಎಂದರೆ ಬಿಗ್ ಬಾಸ್​ನ ಹಣ ಎಲ್ಲಿಯೂ ಸಾಕಾಗಲ್ಲ. ನಾನು ದುಡಿಯಬೇಕು’  ಎಂದು ಕಾರ್ತಿಕ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಬಳಿಕ ಕಾರ್ತಿಕ್​ ಮಹೇಶ್ ಕೇಳಿದ ಸಿನಿಮಾ ಕಥೆಗಳೆಷ್ಟು? ಲೆಕ್ಕ ಕೊಟ್ಟ ನಟ

ಈ ಮೊದಲು ‘ಮರಾಠಿ ಬಿಗ್ ಬಾಸ್ ಸೀಸನ್ 2’ರ ವಿನ್ನರ್ ಶಿವ ಠಾಕ್ರೆ ಬಿಗ್ ಬಾಸ್ ಬಹುಮಾನದ ಮೊತ್ತದ ಬಗ್ಗೆ ಮಾತನಾಡಿದ್ದರು. ಅವರು ಪ್ರಾಮಿಸ್ ಮಾಡಿದಷ್ಟು ಹಣ ನೀಡಿಲ್ಲ ಎಂದಿದ್ದರು. 25ರಲ್ಲಿ 11 ಲಕ್ಷ ರೂಪಾಯಿ ಮಾತ್ರ ಸಿಕ್ಕಿದೆ ಎಂದಿದ್ದರು. ಕಾರ್ತಿಕ್ ಈ ಬಗ್ಗೆ ಮಾತನಾಡಿದ್ದಾರೆ. ‘ಐವತ್ತರಲ್ಲಿ 35 ಲಕ್ಷ ರೂಪಾಯಿ ಬರುತ್ತದೆ. 15 ಲಕ್ಷ ರೂಪಾಯಿ ಟ್ಯಾಕ್ಸ್​ ಕಟ್ ಆಗುತ್ತದೆ. ಹಂತ ಹಂತವಾಗಿ ಹಣ ಬರುತ್ತಿದೆ’ ಎಂದಿದ್ದಾರೆ ಕಾರ್ತಿಕ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ