AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಮಹೇಶ್​ಗೆ ಇದು ಮರೆಯಲಾಗದ ಕ್ಷಣ; ವಿಡಿಯೋ ಹಂಚಿಕೊಂಡ ಬಿಗ್ ಬಾಸ್ ವಿನ್ನರ್

ನಾವೇ ಕಲಿತ ಶಾಲೆಗೆ ಭೇಟಿ ನೀಡಿದರೆ ಆಗ ಸಿಗುವ ಖುಷಿಯೇ ಬೇರೆ. ಅದೇ ರೀತಿ ತಾವು ಕಲಿತ ಶಾಲೆಗೆ ಅತಿಥಿಗಾಗಿ ತೆರಳೋದು, ಅಲ್ಲಿ ಗೌರವಿಸಿಕೊಳ್ಳೋದು ಎಂದರೆ ಇನ್ನಷ್ಟು ವಿಶೇಷ ಎನಿಸಿಕೊಳ್ಳಲಿದೆ. ಈಗ ಕಾರ್ತಿಕ್ ಅವರು ಮೈಸೂರಿನ ಎಸ್​ಬಿಆರ್​ಆರ್ ಮಹಾಜ ಫಸ್ಟ್​ ಗ್ರೇಡ್ ಕಾಲೇಜಿಗೆ ಭೇಟಿ ನೀಡಿದ್ದಾರೆ.

ಕಾರ್ತಿಕ್ ಮಹೇಶ್​ಗೆ ಇದು ಮರೆಯಲಾಗದ ಕ್ಷಣ; ವಿಡಿಯೋ ಹಂಚಿಕೊಂಡ ಬಿಗ್ ಬಾಸ್ ವಿನ್ನರ್
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Apr 03, 2024 | 8:30 AM

Share

ಕಾರ್ತಿಕ್ ಮಹೇಶ್ (Karthik Mahesh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ವಿನ್ ಆಗುವ ಮೂಲಕ ಎಲ್ಲರ ಮೆಚ್ಚುಗೆ ಪಡೆದರು. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರಿಗೆ ಹೋದಲ್ಲಿ ಬಂದಲ್ಲಿ ಫ್ಯಾನ್ಸ್ ಸೆಲ್ಫಿಗೆ ಮುಗಿ ಬೀಳುತ್ತಿದ್ದಾರೆ. ಈಗ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ವಿಶೇಷ ಕ್ಷಣದ ಬಗ್ಗೆ ಮಾಹಿತಿ ನೀಡಿದ್ದಾರೆ. ತಾವು ಕಲಿತ ಕಾಲೇಜಿನಲ್ಲಿ ಕಾರ್ತಿಕ್ ಗೌರವ ಪಡೆದಿದ್ದಾರೆ. ಇದನ್ನು ಮರೆಯಲಾಗದ ಕ್ಷಣ ಎಂದು ಅವರು ಬಣ್ಣಿಸಿದ್ದಾರೆ.

ನಾವೇ ಕಲಿತ ಶಾಲೆಗೆ ಭೇಟಿ ನೀಡಿದರೆ ಆಗ ಸಿಗುವ ಖುಷಿಯೇ ಬೇರೆ. ಅದೇ ರೀತಿ ತಾವು ಕಲಿತ ಶಾಲೆಗೆ ಅತಿಥಿಗಾಗಿ ತೆರಳೋದು, ಅಲ್ಲಿ ಗೌರವಿಸಿಕೊಳ್ಳೋದು ಎಂದರೆ ಇನ್ನಷ್ಟು ವಿಶೇಷ ಎನಿಸಿಕೊಳ್ಳಲಿದೆ. ಈಗ ಕಾರ್ತಿಕ್ ಅವರು ಮೈಸೂರಿನ ಎಸ್​ಬಿಆರ್​ಆರ್ ಮಹಾಜ ಫಸ್ಟ್​ ಗ್ರೇಡ್ ಕಾಲೇಜಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ವಿಶೇಷ ಗೌರವ ಪಡೆದಿದ್ದಾರೆ. ಇದನ್ನೂ ಓದಿ: ಕಾರ್ತಿಕ್ ಮಹೇಶ್​​ಗೆ ಇನ್ನೂ ಸಿಕ್ಕಿಲ್ಲ ‘ಬಿಗ್ ಬಾಸ್’ ಕಾರ್; ಕಾರಣ ವಿವರಿಸಿದ ನಟ

ಕಾರ್ತಿಕ್ ಬಿಗ್ ಬಾಸ್​ನಲ್ಲಿ ಇದ್ದಾಗ ಈ ಕಾಲೇಜಿನ ವಿದ್ಯಾರ್ಥಿಗಳು ಅವರ ಪರವಾಗಿ ಪ್ರಚಾರ ಮಾಡಿದ್ದರಂತೆ. ಕಾರ್ತಿಕ್ ಅವರು ‘ಡೊಳ್ಳು’ ಸಿನಿಮಾದಲ್ಲಿ ನಟಿಸಿದ್ದರು. ಹೀಗಾಗಿ, ಡೊಳ್ಳು ಬಾರಿಸಿ ಅವರನ್ನು ಸ್ವಾಗತಿಸಲಾಯಿತು. ಅವರು ಕೂಡ ಡೊಳ್ಳು ಬಾರಿಸಿ ಸಂಭ್ರಮಿಸಿದರು. ಈ ವಿಡಿಯೋದಲ್ಲಿ ಅವರು ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.

ಈ ವಿಡಿಯೋ ಹಂಚಿಕೊಂಡು ಕಾರ್ತಿಕ್ ಅವರು ತಮ್ಮ ಮನಸಿನ ಮಾತನ್ನು ಬರೆದುಕೊಂಡಿದ್ದಾರೆ. ‘ನನ್ನ ಕಾಲೇಜು, ನನಗಾಗಿ ನನ್ನ ಗೆಲುವಿಗಾಗಿ ವಿದ್ಯಾರ್ಥಿಗಳಲ್ಲಿ ಶಿಕ್ಷಕರೆಲ್ಲ ನನ್ನ ಪರವಾಗಿ ಪ್ರಚಾರ ಮಾಡಿದ್ದರು. ಇಂದು ನನಗಾಗಿಯೇ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ವಿಶೇಷವಾಗಿ ನನಗೋಸ್ಕರ ವಿದ್ಯಾರ್ಥಿಗಳು ಡೊಳ್ಳು ಕುಣಿತವನ್ನು ಕಲಿತು ಬಾರಿಸಿದ್ದು ಅತ್ಯಂತ ಖುಷಿ ಕೊಟ್ಟ ವಿಷಯ. ನನ್ನ ಎಲ್ಲಾ ಶಿಕ್ಷಕರಿಗೆ, ಕಿರಿಯ ವಿದ್ಯಾರ್ಥಿಗಳಿಗೆ, ಸಂಸ್ಥಾಪಕರಿಗೆ ತುಂಬು ಹೃದಯದ ಧನ್ಯವಾದ’ ಎಂದು ಕಾರ್ತಿಕ್ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?