AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಮಹೇಶ್​ಗೆ ಇದು ಮರೆಯಲಾಗದ ಕ್ಷಣ; ವಿಡಿಯೋ ಹಂಚಿಕೊಂಡ ಬಿಗ್ ಬಾಸ್ ವಿನ್ನರ್

ನಾವೇ ಕಲಿತ ಶಾಲೆಗೆ ಭೇಟಿ ನೀಡಿದರೆ ಆಗ ಸಿಗುವ ಖುಷಿಯೇ ಬೇರೆ. ಅದೇ ರೀತಿ ತಾವು ಕಲಿತ ಶಾಲೆಗೆ ಅತಿಥಿಗಾಗಿ ತೆರಳೋದು, ಅಲ್ಲಿ ಗೌರವಿಸಿಕೊಳ್ಳೋದು ಎಂದರೆ ಇನ್ನಷ್ಟು ವಿಶೇಷ ಎನಿಸಿಕೊಳ್ಳಲಿದೆ. ಈಗ ಕಾರ್ತಿಕ್ ಅವರು ಮೈಸೂರಿನ ಎಸ್​ಬಿಆರ್​ಆರ್ ಮಹಾಜ ಫಸ್ಟ್​ ಗ್ರೇಡ್ ಕಾಲೇಜಿಗೆ ಭೇಟಿ ನೀಡಿದ್ದಾರೆ.

ಕಾರ್ತಿಕ್ ಮಹೇಶ್​ಗೆ ಇದು ಮರೆಯಲಾಗದ ಕ್ಷಣ; ವಿಡಿಯೋ ಹಂಚಿಕೊಂಡ ಬಿಗ್ ಬಾಸ್ ವಿನ್ನರ್
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Apr 03, 2024 | 8:30 AM

Share

ಕಾರ್ತಿಕ್ ಮಹೇಶ್ (Karthik Mahesh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ವಿನ್ ಆಗುವ ಮೂಲಕ ಎಲ್ಲರ ಮೆಚ್ಚುಗೆ ಪಡೆದರು. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರಿಗೆ ಹೋದಲ್ಲಿ ಬಂದಲ್ಲಿ ಫ್ಯಾನ್ಸ್ ಸೆಲ್ಫಿಗೆ ಮುಗಿ ಬೀಳುತ್ತಿದ್ದಾರೆ. ಈಗ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ವಿಶೇಷ ಕ್ಷಣದ ಬಗ್ಗೆ ಮಾಹಿತಿ ನೀಡಿದ್ದಾರೆ. ತಾವು ಕಲಿತ ಕಾಲೇಜಿನಲ್ಲಿ ಕಾರ್ತಿಕ್ ಗೌರವ ಪಡೆದಿದ್ದಾರೆ. ಇದನ್ನು ಮರೆಯಲಾಗದ ಕ್ಷಣ ಎಂದು ಅವರು ಬಣ್ಣಿಸಿದ್ದಾರೆ.

ನಾವೇ ಕಲಿತ ಶಾಲೆಗೆ ಭೇಟಿ ನೀಡಿದರೆ ಆಗ ಸಿಗುವ ಖುಷಿಯೇ ಬೇರೆ. ಅದೇ ರೀತಿ ತಾವು ಕಲಿತ ಶಾಲೆಗೆ ಅತಿಥಿಗಾಗಿ ತೆರಳೋದು, ಅಲ್ಲಿ ಗೌರವಿಸಿಕೊಳ್ಳೋದು ಎಂದರೆ ಇನ್ನಷ್ಟು ವಿಶೇಷ ಎನಿಸಿಕೊಳ್ಳಲಿದೆ. ಈಗ ಕಾರ್ತಿಕ್ ಅವರು ಮೈಸೂರಿನ ಎಸ್​ಬಿಆರ್​ಆರ್ ಮಹಾಜ ಫಸ್ಟ್​ ಗ್ರೇಡ್ ಕಾಲೇಜಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ವಿಶೇಷ ಗೌರವ ಪಡೆದಿದ್ದಾರೆ. ಇದನ್ನೂ ಓದಿ: ಕಾರ್ತಿಕ್ ಮಹೇಶ್​​ಗೆ ಇನ್ನೂ ಸಿಕ್ಕಿಲ್ಲ ‘ಬಿಗ್ ಬಾಸ್’ ಕಾರ್; ಕಾರಣ ವಿವರಿಸಿದ ನಟ

ಕಾರ್ತಿಕ್ ಬಿಗ್ ಬಾಸ್​ನಲ್ಲಿ ಇದ್ದಾಗ ಈ ಕಾಲೇಜಿನ ವಿದ್ಯಾರ್ಥಿಗಳು ಅವರ ಪರವಾಗಿ ಪ್ರಚಾರ ಮಾಡಿದ್ದರಂತೆ. ಕಾರ್ತಿಕ್ ಅವರು ‘ಡೊಳ್ಳು’ ಸಿನಿಮಾದಲ್ಲಿ ನಟಿಸಿದ್ದರು. ಹೀಗಾಗಿ, ಡೊಳ್ಳು ಬಾರಿಸಿ ಅವರನ್ನು ಸ್ವಾಗತಿಸಲಾಯಿತು. ಅವರು ಕೂಡ ಡೊಳ್ಳು ಬಾರಿಸಿ ಸಂಭ್ರಮಿಸಿದರು. ಈ ವಿಡಿಯೋದಲ್ಲಿ ಅವರು ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.

ಈ ವಿಡಿಯೋ ಹಂಚಿಕೊಂಡು ಕಾರ್ತಿಕ್ ಅವರು ತಮ್ಮ ಮನಸಿನ ಮಾತನ್ನು ಬರೆದುಕೊಂಡಿದ್ದಾರೆ. ‘ನನ್ನ ಕಾಲೇಜು, ನನಗಾಗಿ ನನ್ನ ಗೆಲುವಿಗಾಗಿ ವಿದ್ಯಾರ್ಥಿಗಳಲ್ಲಿ ಶಿಕ್ಷಕರೆಲ್ಲ ನನ್ನ ಪರವಾಗಿ ಪ್ರಚಾರ ಮಾಡಿದ್ದರು. ಇಂದು ನನಗಾಗಿಯೇ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ವಿಶೇಷವಾಗಿ ನನಗೋಸ್ಕರ ವಿದ್ಯಾರ್ಥಿಗಳು ಡೊಳ್ಳು ಕುಣಿತವನ್ನು ಕಲಿತು ಬಾರಿಸಿದ್ದು ಅತ್ಯಂತ ಖುಷಿ ಕೊಟ್ಟ ವಿಷಯ. ನನ್ನ ಎಲ್ಲಾ ಶಿಕ್ಷಕರಿಗೆ, ಕಿರಿಯ ವಿದ್ಯಾರ್ಥಿಗಳಿಗೆ, ಸಂಸ್ಥಾಪಕರಿಗೆ ತುಂಬು ಹೃದಯದ ಧನ್ಯವಾದ’ ಎಂದು ಕಾರ್ತಿಕ್ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ