AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಷ್ಟೂ ಅಂತ ತಡ್ಕೋತಾರೆ?’; ಕೊಲೆ ಕೇಸ್​ನಲ್ಲಿ ದರ್ಶನ್​ನ ಬೆಂಬಲಿಸಿ ಮಾತನಾಡಿದ ಪರಭಾಷಾ ನಟಿ

‘ಸೆಲೆಬ್ರಿಟಿಗಳಿಗೆ ಅಶ್ಲೀಲ ಮೆಸೇಜ್ ಕಳುಹಿಸುವ ಹಕ್ಕನ್ನು ಸಾರ್ವಜನಿಕರಿಗೆ ನೀಡಿದ್ಯಾರು? ದರ್ಶನ್ ಶಾರ್ಟ್ ಟೆಂಪರ್ ವ್ಯಕ್ತಿ. ಆ ವ್ಯಕ್ತಿಗೆ ದರ್ಶನ್ ಹಾಗೂ ಅವರ ಅಭಿಮಾನಿಗಳು ಹೊಡೆದು ಪಾಠ ಕಲಿಸಬೇಕು ಎಂದುಕೊಂಡಿದ್ದರೇನೋ. ಈ ವೇಳೆ ಮೃತಪಟ್ಟಿದ್ದಾನೆ’ ಎಂದಿದ್ದಾರೆ ಕಸ್ತೂರಿ ಶಂಕರ್.

‘ಎಷ್ಟೂ ಅಂತ ತಡ್ಕೋತಾರೆ?’; ಕೊಲೆ ಕೇಸ್​ನಲ್ಲಿ ದರ್ಶನ್​ನ ಬೆಂಬಲಿಸಿ ಮಾತನಾಡಿದ ಪರಭಾಷಾ ನಟಿ
‘ಎಷ್ಟೂ ಅಂತ ತಡ್ಕೋತಾರೆ?’; ಕೊಲೆ ಕೇಸ್​ನಲ್ಲಿ ದರ್ಶನ್​ನ ಬೆಂಬಲಿಸಿ ಮಾತನಾಡಿದ ಪರಭಾಷಾ ನಟಿ
ರಾಜೇಶ್ ದುಗ್ಗುಮನೆ
|

Updated on: Jun 17, 2024 | 7:43 AM

Share

ರೇಣುಕಾ ಸ್ವಾಮಿ (Renuka Swami) ಕೊಲೆ ಕೇಸ್ ದಕ್ಷಿಣ ಭಾರತಾದ್ಯಂತ ಸೆನ್ಸೇಷನ್ ಸೃಷ್ಟಿ ಮಾಡಿದೆ. ಇದಕ್ಕೆ ಕಾರಣ ಆಗಿರೋದು ಚಾಲೆಂಜಿಂಗ್ ಸ್ಟಾರ್ ದರ್ಶನ್. ಈ ಕೊಲೆ ಕೇಸ್​ನಲ್ಲಿ ಅವರು ಎರಡನೇ ಆರೋಪಿ ಆಗಿದ್ದಾರೆ. ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಒಬ್ಬರು ಒಂದೊಂದು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ದರ್ಶನ್ ಮಾಡಿದ್ದು ತಪ್ಪು ಎಂದು ಕೆಲವರು ಹೇಳಿದರೆ, ಅಭಿಮಾನಿಗಳು ದರ್ಶನ್ ಮಾಡಿದ್ದು ಸರಿ ಎನ್ನುತ್ತಿದ್ದಾರೆ. ಕನ್ನಡದಲ್ಲೂ ನಟಿಸಿರುವ ತೆಲುಗು ನಟಿ ಕಸ್ತೂರಿ ಶಂಕರ್ ಅವರು ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ.

ಐ ಡ್ರೀಮ್ ಮೀಡಿಯಾಗೆ ನೀಡಿದ ಸಂದರ್ಶನದಲ್ಲಿ ಕಸ್ತೂರಿ ಮಾತನಾಡಿದ್ದಾರೆ. ‘ಆತ (ರೇಣುಕಾ ಸ್ವಾಮಿ) ನಟಿಗೆ ಕಿರುಕುಳ ನೀಡುತ್ತಿದ್ದ. ಆತನಿಗೆ ಇದರ ಅಗತ್ಯ ಏನಿತ್ತು? ದರ್ಶನ್ ಮಾಡಿದ್ದು ತಪ್ಪೇ. ಆದರೆ, ಈ ರೀತಿ ಆದಾಗ ಇದನ್ನು ಹ್ಯಾಂಡಲ್​ ಮಾಡಬೇಕು? ಸೋಶಿಯಲ್ ಮೀಡಿಯಾದಲ್ಲಿ ಈಗಾಗಲೇ ಅಶ್ಲೀಲ ಕಮೆಂಟ್ ಹಾಕುತ್ತಿದ್ದಾರೆ. ಹೀಗಿರುವಾಗ ಮೆಸೇಜ್ ಮಾಡೋದೇಕೆ? ದರ್ಶನ್ ವೈಯಕ್ತಿಕ ಬದುಕಲ್ಲಿ ಏನಾದರೂ ತೊಂದರೆ ಇದ್ದರೆ ಅದನ್ನು ನೋಡಿಕೊಳ್ಳೋಕೆ ಮೊದಲ ಪತ್ನಿ ಇದ್ದಾರೆ. ಇದು ಅವರ ವೈಕ್ತಿಕ ವಿಚಾರ’ ಎಂದಿದ್ದಾರೆ ಕಸ್ತೂರಿ. ದರ್ಶನ್ ಹಾಗೂ ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದರು ಎನ್ನುವ ಕೋಪ ರೇಣುಕಾಸ್ವಾಮಿಗೆ ಇತ್ತು ಎನ್ನಲಾಗಿದೆ. ಹೀಗಾಗಿ, ಕಸ್ತೂರಿ ಈ ಮಾತನ್ನು ಹೇಳಿದ್ದಾರೆ.

‘ಸೆಲೆಬ್ರಿಟಿಗಳಿಗೆ ಅಶ್ಲೀಲ ಮೆಸೇಜ್ ಕಳುಹಿಸುವ ಹಕ್ಕನ್ನು ಸಾರ್ವಜನಿಕರಿಗೆ ನೀಡಿದ್ಯಾರು? ದರ್ಶನ್ ಶಾರ್ಟ್ ಟೆಂಪರ್ ವ್ಯಕ್ತಿ. ಆ ವ್ಯಕ್ತಿಗೆ ದರ್ಶನ್ ಹಾಗೂ ಅವರ ಅಭಿಮಾನಿಗಳು ಹೊಡೆದು ಪಾಠ ಕಲಿಸಬೇಕು ಎಂದುಕೊಂಡಿದ್ದರೇನೋ. ಈ ವೇಳೆ ಮೃತಪಟ್ಟಿದ್ದಾನೆ. ರಶ್ಮಿಕಾ ಮಂದಣ್ಣ ಅವರ ಮುಖವನ್ನು ಎಡಿಟ್ ಮಾಡಿ ಅವರಿಗೆ ಸಾಕಷ್ಟು ತೊಂದರೆ ಕೊಡಲಾಗಿದೆ. ಎಲ್ಲರೂ ಈ ರೀತಿ ಮಾಡುತ್ತಿದ್ದಾರೆ ಎಂದರೆ ಯಾರಿಗೂ ತಡೆದುಕೊಳ್ಳೋಕೆ ಆಗಲ್ಲ’ ಎಂದು ಕೋಪ ಹೊರ ಹಾಕಿದ್ದಾರೆ ಅವರು.

ಇದನ್ನೂ ಓದಿ: ‘ಮರ್ಡರ್​ನ ಆತುರದಲ್ಲಿ ಮಾಡಿರ್ತಾನೆ, ಆಮೇಲೆ ಕೊರಗುತ್ತಾನೆ’; ದರ್ಶನ್ ಹಳೆಯ ಸಂದರ್ಶನ ವೈರಲ್

‘ಉದ್ಯಮಿ, ರಾಜಕಾರಣಿಗಳಿಗೆ ಈ ರೀತಿ ಆದರೆ ಅದನ್ನು ಮಾಡಿದವನು ಕಾಣೆಯಾಗಿಬಿಡುತ್ತಾನೆ. ಆದರೆ, ಫಿಲ್ಮ್​ಸ್ಟಾರ್ಸ್​ಗೆ ಈ ರೀತಿ ಆದರೆ ಅವರು ಇದನ್ನು ತಡೆದುಕೊಳ್ಳಬೇಕು. ಎಷ್ಟು ಎಂದು ತಡೆದುಕೊಳ್ಳೋಕೆ ಆಗುತ್ತದೆ? ಒಮ್ಮೆ ಸಿಡಿಯುತ್ತಾರೆ. ಜನರು ಕೊಂಚ ಕರುಣೆ ತೋರಿಸಬೇಕು’ ಎಂದು ಅವರು ಕೋರಿದ್ದಾರೆ. ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣದಿಂದಲೇ ದರ್ಶನ್ ಅವರು ಸಿಡಿದೆದ್ದರು. ಅವರು ತಮ್ಮ ಗ್ಯಾಂಗ್ ಜೊತೆ ಸೇರಿ ರೇಣುಕಾ ಸ್ವಾಮಿಯನ್ನು ಹತ್ತೆ ಮಾಡಿದ್ದಾರೆ ಎನ್ನುವ ಆರೋಪ ಹೊತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು