AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಷ್ಟೂ ಅಂತ ತಡ್ಕೋತಾರೆ?’; ಕೊಲೆ ಕೇಸ್​ನಲ್ಲಿ ದರ್ಶನ್​ನ ಬೆಂಬಲಿಸಿ ಮಾತನಾಡಿದ ಪರಭಾಷಾ ನಟಿ

‘ಸೆಲೆಬ್ರಿಟಿಗಳಿಗೆ ಅಶ್ಲೀಲ ಮೆಸೇಜ್ ಕಳುಹಿಸುವ ಹಕ್ಕನ್ನು ಸಾರ್ವಜನಿಕರಿಗೆ ನೀಡಿದ್ಯಾರು? ದರ್ಶನ್ ಶಾರ್ಟ್ ಟೆಂಪರ್ ವ್ಯಕ್ತಿ. ಆ ವ್ಯಕ್ತಿಗೆ ದರ್ಶನ್ ಹಾಗೂ ಅವರ ಅಭಿಮಾನಿಗಳು ಹೊಡೆದು ಪಾಠ ಕಲಿಸಬೇಕು ಎಂದುಕೊಂಡಿದ್ದರೇನೋ. ಈ ವೇಳೆ ಮೃತಪಟ್ಟಿದ್ದಾನೆ’ ಎಂದಿದ್ದಾರೆ ಕಸ್ತೂರಿ ಶಂಕರ್.

‘ಎಷ್ಟೂ ಅಂತ ತಡ್ಕೋತಾರೆ?’; ಕೊಲೆ ಕೇಸ್​ನಲ್ಲಿ ದರ್ಶನ್​ನ ಬೆಂಬಲಿಸಿ ಮಾತನಾಡಿದ ಪರಭಾಷಾ ನಟಿ
‘ಎಷ್ಟೂ ಅಂತ ತಡ್ಕೋತಾರೆ?’; ಕೊಲೆ ಕೇಸ್​ನಲ್ಲಿ ದರ್ಶನ್​ನ ಬೆಂಬಲಿಸಿ ಮಾತನಾಡಿದ ಪರಭಾಷಾ ನಟಿ
ರಾಜೇಶ್ ದುಗ್ಗುಮನೆ
|

Updated on: Jun 17, 2024 | 7:43 AM

Share

ರೇಣುಕಾ ಸ್ವಾಮಿ (Renuka Swami) ಕೊಲೆ ಕೇಸ್ ದಕ್ಷಿಣ ಭಾರತಾದ್ಯಂತ ಸೆನ್ಸೇಷನ್ ಸೃಷ್ಟಿ ಮಾಡಿದೆ. ಇದಕ್ಕೆ ಕಾರಣ ಆಗಿರೋದು ಚಾಲೆಂಜಿಂಗ್ ಸ್ಟಾರ್ ದರ್ಶನ್. ಈ ಕೊಲೆ ಕೇಸ್​ನಲ್ಲಿ ಅವರು ಎರಡನೇ ಆರೋಪಿ ಆಗಿದ್ದಾರೆ. ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಒಬ್ಬರು ಒಂದೊಂದು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ದರ್ಶನ್ ಮಾಡಿದ್ದು ತಪ್ಪು ಎಂದು ಕೆಲವರು ಹೇಳಿದರೆ, ಅಭಿಮಾನಿಗಳು ದರ್ಶನ್ ಮಾಡಿದ್ದು ಸರಿ ಎನ್ನುತ್ತಿದ್ದಾರೆ. ಕನ್ನಡದಲ್ಲೂ ನಟಿಸಿರುವ ತೆಲುಗು ನಟಿ ಕಸ್ತೂರಿ ಶಂಕರ್ ಅವರು ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ.

ಐ ಡ್ರೀಮ್ ಮೀಡಿಯಾಗೆ ನೀಡಿದ ಸಂದರ್ಶನದಲ್ಲಿ ಕಸ್ತೂರಿ ಮಾತನಾಡಿದ್ದಾರೆ. ‘ಆತ (ರೇಣುಕಾ ಸ್ವಾಮಿ) ನಟಿಗೆ ಕಿರುಕುಳ ನೀಡುತ್ತಿದ್ದ. ಆತನಿಗೆ ಇದರ ಅಗತ್ಯ ಏನಿತ್ತು? ದರ್ಶನ್ ಮಾಡಿದ್ದು ತಪ್ಪೇ. ಆದರೆ, ಈ ರೀತಿ ಆದಾಗ ಇದನ್ನು ಹ್ಯಾಂಡಲ್​ ಮಾಡಬೇಕು? ಸೋಶಿಯಲ್ ಮೀಡಿಯಾದಲ್ಲಿ ಈಗಾಗಲೇ ಅಶ್ಲೀಲ ಕಮೆಂಟ್ ಹಾಕುತ್ತಿದ್ದಾರೆ. ಹೀಗಿರುವಾಗ ಮೆಸೇಜ್ ಮಾಡೋದೇಕೆ? ದರ್ಶನ್ ವೈಯಕ್ತಿಕ ಬದುಕಲ್ಲಿ ಏನಾದರೂ ತೊಂದರೆ ಇದ್ದರೆ ಅದನ್ನು ನೋಡಿಕೊಳ್ಳೋಕೆ ಮೊದಲ ಪತ್ನಿ ಇದ್ದಾರೆ. ಇದು ಅವರ ವೈಕ್ತಿಕ ವಿಚಾರ’ ಎಂದಿದ್ದಾರೆ ಕಸ್ತೂರಿ. ದರ್ಶನ್ ಹಾಗೂ ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದರು ಎನ್ನುವ ಕೋಪ ರೇಣುಕಾಸ್ವಾಮಿಗೆ ಇತ್ತು ಎನ್ನಲಾಗಿದೆ. ಹೀಗಾಗಿ, ಕಸ್ತೂರಿ ಈ ಮಾತನ್ನು ಹೇಳಿದ್ದಾರೆ.

‘ಸೆಲೆಬ್ರಿಟಿಗಳಿಗೆ ಅಶ್ಲೀಲ ಮೆಸೇಜ್ ಕಳುಹಿಸುವ ಹಕ್ಕನ್ನು ಸಾರ್ವಜನಿಕರಿಗೆ ನೀಡಿದ್ಯಾರು? ದರ್ಶನ್ ಶಾರ್ಟ್ ಟೆಂಪರ್ ವ್ಯಕ್ತಿ. ಆ ವ್ಯಕ್ತಿಗೆ ದರ್ಶನ್ ಹಾಗೂ ಅವರ ಅಭಿಮಾನಿಗಳು ಹೊಡೆದು ಪಾಠ ಕಲಿಸಬೇಕು ಎಂದುಕೊಂಡಿದ್ದರೇನೋ. ಈ ವೇಳೆ ಮೃತಪಟ್ಟಿದ್ದಾನೆ. ರಶ್ಮಿಕಾ ಮಂದಣ್ಣ ಅವರ ಮುಖವನ್ನು ಎಡಿಟ್ ಮಾಡಿ ಅವರಿಗೆ ಸಾಕಷ್ಟು ತೊಂದರೆ ಕೊಡಲಾಗಿದೆ. ಎಲ್ಲರೂ ಈ ರೀತಿ ಮಾಡುತ್ತಿದ್ದಾರೆ ಎಂದರೆ ಯಾರಿಗೂ ತಡೆದುಕೊಳ್ಳೋಕೆ ಆಗಲ್ಲ’ ಎಂದು ಕೋಪ ಹೊರ ಹಾಕಿದ್ದಾರೆ ಅವರು.

ಇದನ್ನೂ ಓದಿ: ‘ಮರ್ಡರ್​ನ ಆತುರದಲ್ಲಿ ಮಾಡಿರ್ತಾನೆ, ಆಮೇಲೆ ಕೊರಗುತ್ತಾನೆ’; ದರ್ಶನ್ ಹಳೆಯ ಸಂದರ್ಶನ ವೈರಲ್

‘ಉದ್ಯಮಿ, ರಾಜಕಾರಣಿಗಳಿಗೆ ಈ ರೀತಿ ಆದರೆ ಅದನ್ನು ಮಾಡಿದವನು ಕಾಣೆಯಾಗಿಬಿಡುತ್ತಾನೆ. ಆದರೆ, ಫಿಲ್ಮ್​ಸ್ಟಾರ್ಸ್​ಗೆ ಈ ರೀತಿ ಆದರೆ ಅವರು ಇದನ್ನು ತಡೆದುಕೊಳ್ಳಬೇಕು. ಎಷ್ಟು ಎಂದು ತಡೆದುಕೊಳ್ಳೋಕೆ ಆಗುತ್ತದೆ? ಒಮ್ಮೆ ಸಿಡಿಯುತ್ತಾರೆ. ಜನರು ಕೊಂಚ ಕರುಣೆ ತೋರಿಸಬೇಕು’ ಎಂದು ಅವರು ಕೋರಿದ್ದಾರೆ. ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣದಿಂದಲೇ ದರ್ಶನ್ ಅವರು ಸಿಡಿದೆದ್ದರು. ಅವರು ತಮ್ಮ ಗ್ಯಾಂಗ್ ಜೊತೆ ಸೇರಿ ರೇಣುಕಾ ಸ್ವಾಮಿಯನ್ನು ಹತ್ತೆ ಮಾಡಿದ್ದಾರೆ ಎನ್ನುವ ಆರೋಪ ಹೊತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ