‘ಎಷ್ಟೂ ಅಂತ ತಡ್ಕೋತಾರೆ?’; ಕೊಲೆ ಕೇಸ್​ನಲ್ಲಿ ದರ್ಶನ್​ನ ಬೆಂಬಲಿಸಿ ಮಾತನಾಡಿದ ಪರಭಾಷಾ ನಟಿ

‘ಸೆಲೆಬ್ರಿಟಿಗಳಿಗೆ ಅಶ್ಲೀಲ ಮೆಸೇಜ್ ಕಳುಹಿಸುವ ಹಕ್ಕನ್ನು ಸಾರ್ವಜನಿಕರಿಗೆ ನೀಡಿದ್ಯಾರು? ದರ್ಶನ್ ಶಾರ್ಟ್ ಟೆಂಪರ್ ವ್ಯಕ್ತಿ. ಆ ವ್ಯಕ್ತಿಗೆ ದರ್ಶನ್ ಹಾಗೂ ಅವರ ಅಭಿಮಾನಿಗಳು ಹೊಡೆದು ಪಾಠ ಕಲಿಸಬೇಕು ಎಂದುಕೊಂಡಿದ್ದರೇನೋ. ಈ ವೇಳೆ ಮೃತಪಟ್ಟಿದ್ದಾನೆ’ ಎಂದಿದ್ದಾರೆ ಕಸ್ತೂರಿ ಶಂಕರ್.

‘ಎಷ್ಟೂ ಅಂತ ತಡ್ಕೋತಾರೆ?’; ಕೊಲೆ ಕೇಸ್​ನಲ್ಲಿ ದರ್ಶನ್​ನ ಬೆಂಬಲಿಸಿ ಮಾತನಾಡಿದ ಪರಭಾಷಾ ನಟಿ
‘ಎಷ್ಟೂ ಅಂತ ತಡ್ಕೋತಾರೆ?’; ಕೊಲೆ ಕೇಸ್​ನಲ್ಲಿ ದರ್ಶನ್​ನ ಬೆಂಬಲಿಸಿ ಮಾತನಾಡಿದ ಪರಭಾಷಾ ನಟಿ
Follow us
|

Updated on: Jun 17, 2024 | 7:43 AM

ರೇಣುಕಾ ಸ್ವಾಮಿ (Renuka Swami) ಕೊಲೆ ಕೇಸ್ ದಕ್ಷಿಣ ಭಾರತಾದ್ಯಂತ ಸೆನ್ಸೇಷನ್ ಸೃಷ್ಟಿ ಮಾಡಿದೆ. ಇದಕ್ಕೆ ಕಾರಣ ಆಗಿರೋದು ಚಾಲೆಂಜಿಂಗ್ ಸ್ಟಾರ್ ದರ್ಶನ್. ಈ ಕೊಲೆ ಕೇಸ್​ನಲ್ಲಿ ಅವರು ಎರಡನೇ ಆರೋಪಿ ಆಗಿದ್ದಾರೆ. ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಒಬ್ಬರು ಒಂದೊಂದು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ದರ್ಶನ್ ಮಾಡಿದ್ದು ತಪ್ಪು ಎಂದು ಕೆಲವರು ಹೇಳಿದರೆ, ಅಭಿಮಾನಿಗಳು ದರ್ಶನ್ ಮಾಡಿದ್ದು ಸರಿ ಎನ್ನುತ್ತಿದ್ದಾರೆ. ಕನ್ನಡದಲ್ಲೂ ನಟಿಸಿರುವ ತೆಲುಗು ನಟಿ ಕಸ್ತೂರಿ ಶಂಕರ್ ಅವರು ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ.

ಐ ಡ್ರೀಮ್ ಮೀಡಿಯಾಗೆ ನೀಡಿದ ಸಂದರ್ಶನದಲ್ಲಿ ಕಸ್ತೂರಿ ಮಾತನಾಡಿದ್ದಾರೆ. ‘ಆತ (ರೇಣುಕಾ ಸ್ವಾಮಿ) ನಟಿಗೆ ಕಿರುಕುಳ ನೀಡುತ್ತಿದ್ದ. ಆತನಿಗೆ ಇದರ ಅಗತ್ಯ ಏನಿತ್ತು? ದರ್ಶನ್ ಮಾಡಿದ್ದು ತಪ್ಪೇ. ಆದರೆ, ಈ ರೀತಿ ಆದಾಗ ಇದನ್ನು ಹ್ಯಾಂಡಲ್​ ಮಾಡಬೇಕು? ಸೋಶಿಯಲ್ ಮೀಡಿಯಾದಲ್ಲಿ ಈಗಾಗಲೇ ಅಶ್ಲೀಲ ಕಮೆಂಟ್ ಹಾಕುತ್ತಿದ್ದಾರೆ. ಹೀಗಿರುವಾಗ ಮೆಸೇಜ್ ಮಾಡೋದೇಕೆ? ದರ್ಶನ್ ವೈಯಕ್ತಿಕ ಬದುಕಲ್ಲಿ ಏನಾದರೂ ತೊಂದರೆ ಇದ್ದರೆ ಅದನ್ನು ನೋಡಿಕೊಳ್ಳೋಕೆ ಮೊದಲ ಪತ್ನಿ ಇದ್ದಾರೆ. ಇದು ಅವರ ವೈಕ್ತಿಕ ವಿಚಾರ’ ಎಂದಿದ್ದಾರೆ ಕಸ್ತೂರಿ. ದರ್ಶನ್ ಹಾಗೂ ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದರು ಎನ್ನುವ ಕೋಪ ರೇಣುಕಾಸ್ವಾಮಿಗೆ ಇತ್ತು ಎನ್ನಲಾಗಿದೆ. ಹೀಗಾಗಿ, ಕಸ್ತೂರಿ ಈ ಮಾತನ್ನು ಹೇಳಿದ್ದಾರೆ.

‘ಸೆಲೆಬ್ರಿಟಿಗಳಿಗೆ ಅಶ್ಲೀಲ ಮೆಸೇಜ್ ಕಳುಹಿಸುವ ಹಕ್ಕನ್ನು ಸಾರ್ವಜನಿಕರಿಗೆ ನೀಡಿದ್ಯಾರು? ದರ್ಶನ್ ಶಾರ್ಟ್ ಟೆಂಪರ್ ವ್ಯಕ್ತಿ. ಆ ವ್ಯಕ್ತಿಗೆ ದರ್ಶನ್ ಹಾಗೂ ಅವರ ಅಭಿಮಾನಿಗಳು ಹೊಡೆದು ಪಾಠ ಕಲಿಸಬೇಕು ಎಂದುಕೊಂಡಿದ್ದರೇನೋ. ಈ ವೇಳೆ ಮೃತಪಟ್ಟಿದ್ದಾನೆ. ರಶ್ಮಿಕಾ ಮಂದಣ್ಣ ಅವರ ಮುಖವನ್ನು ಎಡಿಟ್ ಮಾಡಿ ಅವರಿಗೆ ಸಾಕಷ್ಟು ತೊಂದರೆ ಕೊಡಲಾಗಿದೆ. ಎಲ್ಲರೂ ಈ ರೀತಿ ಮಾಡುತ್ತಿದ್ದಾರೆ ಎಂದರೆ ಯಾರಿಗೂ ತಡೆದುಕೊಳ್ಳೋಕೆ ಆಗಲ್ಲ’ ಎಂದು ಕೋಪ ಹೊರ ಹಾಕಿದ್ದಾರೆ ಅವರು.

ಇದನ್ನೂ ಓದಿ: ‘ಮರ್ಡರ್​ನ ಆತುರದಲ್ಲಿ ಮಾಡಿರ್ತಾನೆ, ಆಮೇಲೆ ಕೊರಗುತ್ತಾನೆ’; ದರ್ಶನ್ ಹಳೆಯ ಸಂದರ್ಶನ ವೈರಲ್

‘ಉದ್ಯಮಿ, ರಾಜಕಾರಣಿಗಳಿಗೆ ಈ ರೀತಿ ಆದರೆ ಅದನ್ನು ಮಾಡಿದವನು ಕಾಣೆಯಾಗಿಬಿಡುತ್ತಾನೆ. ಆದರೆ, ಫಿಲ್ಮ್​ಸ್ಟಾರ್ಸ್​ಗೆ ಈ ರೀತಿ ಆದರೆ ಅವರು ಇದನ್ನು ತಡೆದುಕೊಳ್ಳಬೇಕು. ಎಷ್ಟು ಎಂದು ತಡೆದುಕೊಳ್ಳೋಕೆ ಆಗುತ್ತದೆ? ಒಮ್ಮೆ ಸಿಡಿಯುತ್ತಾರೆ. ಜನರು ಕೊಂಚ ಕರುಣೆ ತೋರಿಸಬೇಕು’ ಎಂದು ಅವರು ಕೋರಿದ್ದಾರೆ. ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣದಿಂದಲೇ ದರ್ಶನ್ ಅವರು ಸಿಡಿದೆದ್ದರು. ಅವರು ತಮ್ಮ ಗ್ಯಾಂಗ್ ಜೊತೆ ಸೇರಿ ರೇಣುಕಾ ಸ್ವಾಮಿಯನ್ನು ಹತ್ತೆ ಮಾಡಿದ್ದಾರೆ ಎನ್ನುವ ಆರೋಪ ಹೊತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್