AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಜನ್ಯ-ಶಿವಣ್ಣ ಸಿನಿಮಾಗೆ ಹೀರೋಯಿನ್ ಸಿಕ್ಕಿದ್ರು? ಕನ್ನಡದ ಕಿರುತೆರೆ ನಟಿಗೆ ಅವಕಾಶ

ಎಡಿಟ್ ಮಾಡದ ಫೋಟೋ ಹಾಗೂ ಪರ್ಫಾರ್ಮೆನ್ಸ್​ನ ಚಿಕ್ಕ ವಿಡಿಯೋ ತುಣುಕನ್ನು ಕಳುಹಿಸಬೇಕು ಎಂದು ಕೋರಲಾಗಿತ್ತು. ಈಗ ಧಾರಾವಾಹಿ ನಟಿಗೆ ಈ ಅದೃಷ್ಟ ಒಲಿದಿದೆ ಎನ್ನಲಾಗುತ್ತಿದೆ.

ಅರ್ಜುನ್ ಜನ್ಯ-ಶಿವಣ್ಣ ಸಿನಿಮಾಗೆ ಹೀರೋಯಿನ್ ಸಿಕ್ಕಿದ್ರು? ಕನ್ನಡದ ಕಿರುತೆರೆ ನಟಿಗೆ ಅವಕಾಶ
ರಾಜೇಶ್ ದುಗ್ಗುಮನೆ
|

Updated on: Mar 31, 2023 | 7:59 AM

Share

ಸಂಗೀತ ಸಂಯೋಜಕ ಅರ್ಜುನ್ ಜನ್ಯ (Arjun Janya) ಹಾಗೂ ಖ್ಯಾತ ಹೀರೋ ಶಿವರಾಜ್​ಕುಮಾರ್ ಒಟ್ಟಾಗಿ ಸಿನಿಮಾ ಮಾಡುತ್ತಿರುವ ವಿಚಾರ ಗೊತ್ತೇ ಇದೆ. ಉಪೇಂದ್ರ, ರಾಜ್​ ಬಿ. ಶೆಟ್ಟಿ (Raj B Shetty) ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ಇತ್ತೀಚೆಗಷ್ಟೇ ಹೀರೋಯಿನ್ ಆಯ್ಕೆಗೆ ಆಡಿಷನ್​ಗೆ ಕರೆಯಲಾಗಿತ್ತು. ಮೂಲಗಳ ಪ್ರಕಾರ ಈ ಚಿತ್ರಕ್ಕೆ ನಾಯಕಿಯ ಹೆಸರು ಫೈನಲ್ ಆಗಿದೆ. ಕನ್ನಡ ಧಾರಾವಾಹಿ ನಟಿಯೊಬ್ಬರನ್ನು ಈ ಚಿತ್ರಕ್ಕೆ ಹೀರೋಯಿನ್ ಆಗಿ ಸೆಲೆಕ್ಟ್ ಮಾಡಲಾಗಿದೆ ಎಂದು ವರದಿ ಆಗಿದೆ.

‘ನನ್ನರಸಿ ರಾಧೆ’ ಧಾರಾವಾಹಿ ಖ್ಯಾತಿಯ ಕೌಸ್ತುಭ ಮಣಿ ಅವರು ‘45’ ಚಿತ್ರಕ್ಕೆ ನಾಯಕಿ ಆಗುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಚಿತ್ರತಂಡದವರು ನಾಯಕಿಯ ಆಯ್ಕೆಗೆ ಹುಡುಕಾಟ ನಡೆಸಿದ್ದರು. ಈ ಸಿನಿಮಾದ ನಾಯಕಿ ಕನ್ನಡದವರೇ ಆಗಿದ್ದರೆ ಉತ್ತಮ ಎನ್ನುವ ಅಭಿಪ್ರಾಯ ಚಿತ್ರತಂಡದವರಿಗೆ ಇತ್ತು. ಎಡಿಟ್ ಮಾಡದ ಫೋಟೋ ಹಾಗೂ ಪರ್ಫಾರ್ಮೆನ್ಸ್​ನ ಚಿಕ್ಕ ವಿಡಿಯೋ ತುಣುಕನ್ನು 45kannadamovie@gmail.comಗೆ ಕಳುಹಿಸಬೇಕು ಎಂದು ಕೋರಲಾಗಿತ್ತು. ಈಗ ಕೌಸ್ತುಭಗೆ ಈ ಅದೃಷ್ಟ ಒಲಿದಿದೆ ಎನ್ನಲಾಗುತ್ತಿದೆ.

‘ಕೋಡಲ್ಲು ಮೀಕು ಜೋಹರ್ಲು’ ಹೆಸರಿನ ತೆಲುಗು ಧಾರಾವಾಹಿಯಲ್ಲಿ ನಟಿ ಕೌಸ್ತುಭ ಮಣಿ ನಟಿಸುತ್ತಿದ್ದಾರೆ.  ‘ರಾಮಾಚಾರಿ 2.0’ ಚಿತ್ರದಲ್ಲೂ ನಾಯಕಿಯಾಗಿ ಕೌಸ್ತುಭ ಮಣಿ ನಟಿಸಿದ್ದಾರೆ. ಈಗ ಅವರಿಗೆ ಸ್ಟಾರ್ ನಟರ ಜೊತೆ ನಟಿಸೋ ಅವಕಾಶ ಸಿಕ್ಕಿದೆ.

ಇದನ್ನೂ ಓದಿ: Shiva Rajkumar: ಬರ್ತಿದ್ದಾನೆ ಭೈರತಿ ರಣಗಲ್, ಶಿವಣ್ಣನ ಪ್ಯಾನ್ ಇಂಡಿಯಾ ಸಿನಿಮಾ ಪೋಸ್ಟರ್ ರಿಲೀಸ್

ಶಿವರಾಜ್​ಕುಮಾರ್​ ನಟನೆಯ ‘45’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಸಿನಿಮಾಗೆ ರಮೇಶ್​ ರೆಡ್ಡಿ ಬಂಡವಾಳ ಹೂಡುತ್ತಿದ್ದು, ಅರ್ಜುನ್​ ಜನ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ನಾತಿಚರಾಮಿ’, ‘ಗಾಳಿಪಟ 2’ ಮೊದಲಾದ ಸಿನಿಮಾಗಳನ್ನು ರಮೇಶ್‌ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಈಗ ಅವರು ಶಿವಣ್ಣ-ಅರ್ಜುನ್ ಜನ್ಯಾ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: Shiva Rajkumar: ಪತ್ನಿ ಗೀತಾ ಎದುರೇ ಶಿವಣ್ಣನಿಗೆ ಕಿಸ್ ಕೊಟ್ಟ ಮಹಿಳಾ ಅಭಿಮಾನಿ

ದೊಡ್ಡ ಬಜೆಟ್​ನಲ್ಲಿ ‘45’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭ ಆಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಕಾಣಿಸಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ