AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಜನ್ಯ-ಶಿವಣ್ಣ ಸಿನಿಮಾಗೆ ಹೀರೋಯಿನ್ ಸಿಕ್ಕಿದ್ರು? ಕನ್ನಡದ ಕಿರುತೆರೆ ನಟಿಗೆ ಅವಕಾಶ

ಎಡಿಟ್ ಮಾಡದ ಫೋಟೋ ಹಾಗೂ ಪರ್ಫಾರ್ಮೆನ್ಸ್​ನ ಚಿಕ್ಕ ವಿಡಿಯೋ ತುಣುಕನ್ನು ಕಳುಹಿಸಬೇಕು ಎಂದು ಕೋರಲಾಗಿತ್ತು. ಈಗ ಧಾರಾವಾಹಿ ನಟಿಗೆ ಈ ಅದೃಷ್ಟ ಒಲಿದಿದೆ ಎನ್ನಲಾಗುತ್ತಿದೆ.

ಅರ್ಜುನ್ ಜನ್ಯ-ಶಿವಣ್ಣ ಸಿನಿಮಾಗೆ ಹೀರೋಯಿನ್ ಸಿಕ್ಕಿದ್ರು? ಕನ್ನಡದ ಕಿರುತೆರೆ ನಟಿಗೆ ಅವಕಾಶ
ರಾಜೇಶ್ ದುಗ್ಗುಮನೆ
|

Updated on: Mar 31, 2023 | 7:59 AM

Share

ಸಂಗೀತ ಸಂಯೋಜಕ ಅರ್ಜುನ್ ಜನ್ಯ (Arjun Janya) ಹಾಗೂ ಖ್ಯಾತ ಹೀರೋ ಶಿವರಾಜ್​ಕುಮಾರ್ ಒಟ್ಟಾಗಿ ಸಿನಿಮಾ ಮಾಡುತ್ತಿರುವ ವಿಚಾರ ಗೊತ್ತೇ ಇದೆ. ಉಪೇಂದ್ರ, ರಾಜ್​ ಬಿ. ಶೆಟ್ಟಿ (Raj B Shetty) ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ಇತ್ತೀಚೆಗಷ್ಟೇ ಹೀರೋಯಿನ್ ಆಯ್ಕೆಗೆ ಆಡಿಷನ್​ಗೆ ಕರೆಯಲಾಗಿತ್ತು. ಮೂಲಗಳ ಪ್ರಕಾರ ಈ ಚಿತ್ರಕ್ಕೆ ನಾಯಕಿಯ ಹೆಸರು ಫೈನಲ್ ಆಗಿದೆ. ಕನ್ನಡ ಧಾರಾವಾಹಿ ನಟಿಯೊಬ್ಬರನ್ನು ಈ ಚಿತ್ರಕ್ಕೆ ಹೀರೋಯಿನ್ ಆಗಿ ಸೆಲೆಕ್ಟ್ ಮಾಡಲಾಗಿದೆ ಎಂದು ವರದಿ ಆಗಿದೆ.

‘ನನ್ನರಸಿ ರಾಧೆ’ ಧಾರಾವಾಹಿ ಖ್ಯಾತಿಯ ಕೌಸ್ತುಭ ಮಣಿ ಅವರು ‘45’ ಚಿತ್ರಕ್ಕೆ ನಾಯಕಿ ಆಗುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಚಿತ್ರತಂಡದವರು ನಾಯಕಿಯ ಆಯ್ಕೆಗೆ ಹುಡುಕಾಟ ನಡೆಸಿದ್ದರು. ಈ ಸಿನಿಮಾದ ನಾಯಕಿ ಕನ್ನಡದವರೇ ಆಗಿದ್ದರೆ ಉತ್ತಮ ಎನ್ನುವ ಅಭಿಪ್ರಾಯ ಚಿತ್ರತಂಡದವರಿಗೆ ಇತ್ತು. ಎಡಿಟ್ ಮಾಡದ ಫೋಟೋ ಹಾಗೂ ಪರ್ಫಾರ್ಮೆನ್ಸ್​ನ ಚಿಕ್ಕ ವಿಡಿಯೋ ತುಣುಕನ್ನು 45kannadamovie@gmail.comಗೆ ಕಳುಹಿಸಬೇಕು ಎಂದು ಕೋರಲಾಗಿತ್ತು. ಈಗ ಕೌಸ್ತುಭಗೆ ಈ ಅದೃಷ್ಟ ಒಲಿದಿದೆ ಎನ್ನಲಾಗುತ್ತಿದೆ.

‘ಕೋಡಲ್ಲು ಮೀಕು ಜೋಹರ್ಲು’ ಹೆಸರಿನ ತೆಲುಗು ಧಾರಾವಾಹಿಯಲ್ಲಿ ನಟಿ ಕೌಸ್ತುಭ ಮಣಿ ನಟಿಸುತ್ತಿದ್ದಾರೆ.  ‘ರಾಮಾಚಾರಿ 2.0’ ಚಿತ್ರದಲ್ಲೂ ನಾಯಕಿಯಾಗಿ ಕೌಸ್ತುಭ ಮಣಿ ನಟಿಸಿದ್ದಾರೆ. ಈಗ ಅವರಿಗೆ ಸ್ಟಾರ್ ನಟರ ಜೊತೆ ನಟಿಸೋ ಅವಕಾಶ ಸಿಕ್ಕಿದೆ.

ಇದನ್ನೂ ಓದಿ: Shiva Rajkumar: ಬರ್ತಿದ್ದಾನೆ ಭೈರತಿ ರಣಗಲ್, ಶಿವಣ್ಣನ ಪ್ಯಾನ್ ಇಂಡಿಯಾ ಸಿನಿಮಾ ಪೋಸ್ಟರ್ ರಿಲೀಸ್

ಶಿವರಾಜ್​ಕುಮಾರ್​ ನಟನೆಯ ‘45’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಸಿನಿಮಾಗೆ ರಮೇಶ್​ ರೆಡ್ಡಿ ಬಂಡವಾಳ ಹೂಡುತ್ತಿದ್ದು, ಅರ್ಜುನ್​ ಜನ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ನಾತಿಚರಾಮಿ’, ‘ಗಾಳಿಪಟ 2’ ಮೊದಲಾದ ಸಿನಿಮಾಗಳನ್ನು ರಮೇಶ್‌ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಈಗ ಅವರು ಶಿವಣ್ಣ-ಅರ್ಜುನ್ ಜನ್ಯಾ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: Shiva Rajkumar: ಪತ್ನಿ ಗೀತಾ ಎದುರೇ ಶಿವಣ್ಣನಿಗೆ ಕಿಸ್ ಕೊಟ್ಟ ಮಹಿಳಾ ಅಭಿಮಾನಿ

ದೊಡ್ಡ ಬಜೆಟ್​ನಲ್ಲಿ ‘45’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭ ಆಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಕಾಣಿಸಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ