AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೀತಸಾಹಿತಿ ಕವಿರಾಜ್​ ಜನ್ಮದಿನ: ದೊಡ್ಡ ಪಾರ್ಟಿ ಬೇಡ, ಬೈಟೂ ಟೀ ಸಾಕು ಅಂತಿದೆ ‘ಭೀಮ’ ತಂಡ

ಅನೇಕ ಸ್ಟಾರ್​ ನಟರ ಸಿನಿಮಾಗಳಿಗೆ ಕವಿರಾಜ್​ ಅವರು ಸಾಂಗ್​ ಬರೆದು ಸೈ ಎನಿಸಿಕೊಂಡಿದ್ದಾರೆ. ದುನಿಯಾ ವಿಜಯ್​ ಮತ್ತು ಕವಿರಾಜ್​ ಅವರದ್ದು ಹಿಟ್​ ಜೋಡಿ. ‘ಭೀಮ’ ಸಿನಿಮಾದಲ್ಲೂ ಅವರ ಕಾಂಬಿನೇಷನ್​ ಇರುವುದರಿಂದ ನಿರೀಕ್ಷೆ ಹೆಚ್ಚಿದೆ.

ಗೀತಸಾಹಿತಿ ಕವಿರಾಜ್​ ಜನ್ಮದಿನ: ದೊಡ್ಡ ಪಾರ್ಟಿ ಬೇಡ, ಬೈಟೂ ಟೀ ಸಾಕು ಅಂತಿದೆ ‘ಭೀಮ’ ತಂಡ
‘ಭೀಮ’ ಸಿನಿಮಾ ತಂಡದ ಜೊತೆ ಕವಿರಾಜ್​
ಮದನ್​ ಕುಮಾರ್​
|

Updated on: Aug 11, 2023 | 6:47 PM

Share

ಕನ್ನಡ ಚಿತ್ರರಂಗದಲ್ಲಿ ಗೀತಸಾಹಿತಿಯಾಗಿ, ನಿರ್ದೇಶಕನಾಗಿ ಕವಿರಾಜ್​ (Kavi Raj) ಅವರು ಗುರುತಿಸಿಕೊಂಡಿದ್ದಾರೆ. ಅವರ ಲೇಖನಿಯಿಂದ ನೂರಾರು ಸೂಪರ್​ ಹಿಟ್​ ಗೀತೆಗಳು ಮೂಡಿಬಂದಿವೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಅವರು ಇಂದಿಗೂ ಬಹುಬೇಡಿಕೆಯ ಲಿರಿಸಿಸ್ಟ್​ ಆಗಿ ಮಿಂಚುತ್ತಿದ್ದಾರೆ. ಇಂದು (ಆಗಸ್ಟ್​ 11) ಅವರಿಗೆ ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಅನೇಕ ಸಿನಿಮಾಗಳಿಗೆ ಕವಿರಾಜ್​ ಅವರು ಸಾಹಿತ್ಯ ಬರೆಯುತ್ತಿದ್ದಾರೆ. ಆ ಪೈಕಿ ‘ಭೀಮ’ ಸಿನಿಮಾ (Bheema Movie) ಮೇಲೆ ವಿಶೇಷವಾದ ನಿರೀಕ್ಷೆ ಇದೆ. ದುನಿಯಾ ವಿಜಯ್​ (Duniya Vijay) ನಟನೆಯ ಈ ಸಿನಿಮಾ ತಂಡದಿಂದ ಇತ್ತೀಚೆಗಷ್ಟೇ ಒಂದು ಸುದ್ದಿ ಹೊರಬಿದ್ದಿದೆ. ‘ಬೇಡ ದೊಡ್ಡ ದೊಡ್ಡ ಪಾರ್ಟಿ, ಕುಡಿಸು ನೀ ಸಾಕು ಬೈಟೂ ಟೀ..’ ಎಂಬ ಸ್ಪೆಷಲ್​ ಸಾಂಗ್​ ಸಿದ್ಧವಾಗುತ್ತಿದೆ.

ಅನೇಕ ಸ್ಟಾರ್​ ನಟರ ಸಿನಿಮಾಗಳಿಗೆ ಕವಿರಾಜ್​ ಅವರು ಸಾಂಗ್​ ಬರೆದು ಸೈ ಎನಿಸಿಕೊಂಡಿದ್ದಾರೆ. ದುನಿಯಾ ವಿಜಯ್​ ಮತ್ತು ಕವಿರಾಜ್​ ಅವರದ್ದು ಹಿಟ್​ ಜೋಡಿ. ಈ ಹಿಂದೆ ದುನಿಯಾ ವಿಜಯ್​ ನಟನೆಯ ‘ಜಾನಿ ಮೇರ ನಾಮ್​ ಪ್ರೀತಿ ಮೇರ ಕಾಮ್​’ ಸಿನಿಮಾಗೆ ಕವಿರಾಜ್​ ಅವರು ಸಾಂಗ್​ ಬರೆದಿದ್ದರು. ‘ಊರಿಗೊಬ್ಳೆ ಪದ್ಮಾವತಿ..’ ಹಾಡು ಸೂಪರ್​ ಹಿಟ್​ ಆಗಿತ್ತು. ಆ ಗೀತೆಯಲ್ಲಿ ರಮ್ಯಾ ಅವರು ಡ್ಯಾನ್ಸ್​ ಮಾಡಿದ್ದರು. ಈಗ ‘ಭೀಮ’ ಸಿನಿಮಾದಲ್ಲಿ ಕವಿರಾಜ್ ಬರೆದಿರುವ ‘ಬೇಡ ದೊಡ್ಡ ದೊಡ್ಡ ಪಾರ್ಟಿ, ಕುಡಿಸು ನೀ ಸಾಕು ಬೈಟೂ ಟೀ..’ ಹಾಡು ಯಾವ ರೀತಿ ಮೂಡಿಬಂದಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

‘ಭೀಮ’ ಸಿನಿಮಾಗೆ ಚರಣ್​ ರಾಜ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ದುನಿಯಾ ವಿಜಯ್​ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ‘ಸಲಗ’ ಚಿತ್ರದಲ್ಲೂ ಚರಣ್ ರಾಜ್​ ಮತ್ತು ದುನಿಯಾ ವಿಜಯ್​ ಮೋಡಿ ಮಾಡಿದ್ದರು. ಈಗ ಅವರ ಜೊತೆಗೆ ಕವಿರಾಜ್​ ಕಾಂಬಿನೇಷನ್​ ಕೂಡ ಸೇರಿಕೊಂಡಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Duniya Vijay: ಪಕ್ಕಾ ಅಭಿಮಾನಿಗೆ ವಿಶೇಷ ಪ್ರೀತಿ ತೋರಿಸಿದ ನಟ ದುನಿಯಾ ವಿಜಯ್

‘ಭೀಮ’ ಚಿತ್ರತಂಡದ ಬಗ್ಗೆ ಕವಿರಾಜ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಟೀಮ್​ ಜೊತೆ ಫೋಟೋ ಕ್ಲಿಕ್ಕಿಸಿದ ಸಂದರ್ಭ ಯಾವ ರೀತಿ ಇತ್ತು ಎಂಬುದನ್ನು ಅವರು ಕ್ಯಾಪ್ಷನ್​ ಮೂಲಕ ವಿವರಿಸಿದ್ದಾರೆ. ‘ಭೀಮನ ಟೀಂಯಿಂದ ಚರಣ್ ರಾಜ್ ಸಂಗೀತದಲ್ಲಿ ಒಂದು ಖಡಕ್ ಸಾಂಗ್ ಲೋಡಿಂಗ್. ಬೇಡ ಬೇಡವೆಂದರೂ ಛೇರ್ ಮೇಲೆ ನನ್ನ ಕೂರಿಸಿ, ತಾವು ಹಿಂದೆ ನಿಂತು ಒಬ್ಬ ತಂತ್ರಜ್ಞನಿಗೆ ಗೌರವ ನೀಡಿದ್ದು ಹೃದಯವಂತ ವಿಜಯ್ ಸರ್’ ಎಂದು ಕವಿರಾಜ್​ ಬರೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!