AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೀತಸಾಹಿತಿ ಕವಿರಾಜ್​ ಜನ್ಮದಿನ: ದೊಡ್ಡ ಪಾರ್ಟಿ ಬೇಡ, ಬೈಟೂ ಟೀ ಸಾಕು ಅಂತಿದೆ ‘ಭೀಮ’ ತಂಡ

ಅನೇಕ ಸ್ಟಾರ್​ ನಟರ ಸಿನಿಮಾಗಳಿಗೆ ಕವಿರಾಜ್​ ಅವರು ಸಾಂಗ್​ ಬರೆದು ಸೈ ಎನಿಸಿಕೊಂಡಿದ್ದಾರೆ. ದುನಿಯಾ ವಿಜಯ್​ ಮತ್ತು ಕವಿರಾಜ್​ ಅವರದ್ದು ಹಿಟ್​ ಜೋಡಿ. ‘ಭೀಮ’ ಸಿನಿಮಾದಲ್ಲೂ ಅವರ ಕಾಂಬಿನೇಷನ್​ ಇರುವುದರಿಂದ ನಿರೀಕ್ಷೆ ಹೆಚ್ಚಿದೆ.

ಗೀತಸಾಹಿತಿ ಕವಿರಾಜ್​ ಜನ್ಮದಿನ: ದೊಡ್ಡ ಪಾರ್ಟಿ ಬೇಡ, ಬೈಟೂ ಟೀ ಸಾಕು ಅಂತಿದೆ ‘ಭೀಮ’ ತಂಡ
‘ಭೀಮ’ ಸಿನಿಮಾ ತಂಡದ ಜೊತೆ ಕವಿರಾಜ್​
ಮದನ್​ ಕುಮಾರ್​
|

Updated on: Aug 11, 2023 | 6:47 PM

Share

ಕನ್ನಡ ಚಿತ್ರರಂಗದಲ್ಲಿ ಗೀತಸಾಹಿತಿಯಾಗಿ, ನಿರ್ದೇಶಕನಾಗಿ ಕವಿರಾಜ್​ (Kavi Raj) ಅವರು ಗುರುತಿಸಿಕೊಂಡಿದ್ದಾರೆ. ಅವರ ಲೇಖನಿಯಿಂದ ನೂರಾರು ಸೂಪರ್​ ಹಿಟ್​ ಗೀತೆಗಳು ಮೂಡಿಬಂದಿವೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಅವರು ಇಂದಿಗೂ ಬಹುಬೇಡಿಕೆಯ ಲಿರಿಸಿಸ್ಟ್​ ಆಗಿ ಮಿಂಚುತ್ತಿದ್ದಾರೆ. ಇಂದು (ಆಗಸ್ಟ್​ 11) ಅವರಿಗೆ ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಅನೇಕ ಸಿನಿಮಾಗಳಿಗೆ ಕವಿರಾಜ್​ ಅವರು ಸಾಹಿತ್ಯ ಬರೆಯುತ್ತಿದ್ದಾರೆ. ಆ ಪೈಕಿ ‘ಭೀಮ’ ಸಿನಿಮಾ (Bheema Movie) ಮೇಲೆ ವಿಶೇಷವಾದ ನಿರೀಕ್ಷೆ ಇದೆ. ದುನಿಯಾ ವಿಜಯ್​ (Duniya Vijay) ನಟನೆಯ ಈ ಸಿನಿಮಾ ತಂಡದಿಂದ ಇತ್ತೀಚೆಗಷ್ಟೇ ಒಂದು ಸುದ್ದಿ ಹೊರಬಿದ್ದಿದೆ. ‘ಬೇಡ ದೊಡ್ಡ ದೊಡ್ಡ ಪಾರ್ಟಿ, ಕುಡಿಸು ನೀ ಸಾಕು ಬೈಟೂ ಟೀ..’ ಎಂಬ ಸ್ಪೆಷಲ್​ ಸಾಂಗ್​ ಸಿದ್ಧವಾಗುತ್ತಿದೆ.

ಅನೇಕ ಸ್ಟಾರ್​ ನಟರ ಸಿನಿಮಾಗಳಿಗೆ ಕವಿರಾಜ್​ ಅವರು ಸಾಂಗ್​ ಬರೆದು ಸೈ ಎನಿಸಿಕೊಂಡಿದ್ದಾರೆ. ದುನಿಯಾ ವಿಜಯ್​ ಮತ್ತು ಕವಿರಾಜ್​ ಅವರದ್ದು ಹಿಟ್​ ಜೋಡಿ. ಈ ಹಿಂದೆ ದುನಿಯಾ ವಿಜಯ್​ ನಟನೆಯ ‘ಜಾನಿ ಮೇರ ನಾಮ್​ ಪ್ರೀತಿ ಮೇರ ಕಾಮ್​’ ಸಿನಿಮಾಗೆ ಕವಿರಾಜ್​ ಅವರು ಸಾಂಗ್​ ಬರೆದಿದ್ದರು. ‘ಊರಿಗೊಬ್ಳೆ ಪದ್ಮಾವತಿ..’ ಹಾಡು ಸೂಪರ್​ ಹಿಟ್​ ಆಗಿತ್ತು. ಆ ಗೀತೆಯಲ್ಲಿ ರಮ್ಯಾ ಅವರು ಡ್ಯಾನ್ಸ್​ ಮಾಡಿದ್ದರು. ಈಗ ‘ಭೀಮ’ ಸಿನಿಮಾದಲ್ಲಿ ಕವಿರಾಜ್ ಬರೆದಿರುವ ‘ಬೇಡ ದೊಡ್ಡ ದೊಡ್ಡ ಪಾರ್ಟಿ, ಕುಡಿಸು ನೀ ಸಾಕು ಬೈಟೂ ಟೀ..’ ಹಾಡು ಯಾವ ರೀತಿ ಮೂಡಿಬಂದಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

‘ಭೀಮ’ ಸಿನಿಮಾಗೆ ಚರಣ್​ ರಾಜ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ದುನಿಯಾ ವಿಜಯ್​ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ‘ಸಲಗ’ ಚಿತ್ರದಲ್ಲೂ ಚರಣ್ ರಾಜ್​ ಮತ್ತು ದುನಿಯಾ ವಿಜಯ್​ ಮೋಡಿ ಮಾಡಿದ್ದರು. ಈಗ ಅವರ ಜೊತೆಗೆ ಕವಿರಾಜ್​ ಕಾಂಬಿನೇಷನ್​ ಕೂಡ ಸೇರಿಕೊಂಡಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Duniya Vijay: ಪಕ್ಕಾ ಅಭಿಮಾನಿಗೆ ವಿಶೇಷ ಪ್ರೀತಿ ತೋರಿಸಿದ ನಟ ದುನಿಯಾ ವಿಜಯ್

‘ಭೀಮ’ ಚಿತ್ರತಂಡದ ಬಗ್ಗೆ ಕವಿರಾಜ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಟೀಮ್​ ಜೊತೆ ಫೋಟೋ ಕ್ಲಿಕ್ಕಿಸಿದ ಸಂದರ್ಭ ಯಾವ ರೀತಿ ಇತ್ತು ಎಂಬುದನ್ನು ಅವರು ಕ್ಯಾಪ್ಷನ್​ ಮೂಲಕ ವಿವರಿಸಿದ್ದಾರೆ. ‘ಭೀಮನ ಟೀಂಯಿಂದ ಚರಣ್ ರಾಜ್ ಸಂಗೀತದಲ್ಲಿ ಒಂದು ಖಡಕ್ ಸಾಂಗ್ ಲೋಡಿಂಗ್. ಬೇಡ ಬೇಡವೆಂದರೂ ಛೇರ್ ಮೇಲೆ ನನ್ನ ಕೂರಿಸಿ, ತಾವು ಹಿಂದೆ ನಿಂತು ಒಬ್ಬ ತಂತ್ರಜ್ಞನಿಗೆ ಗೌರವ ನೀಡಿದ್ದು ಹೃದಯವಂತ ವಿಜಯ್ ಸರ್’ ಎಂದು ಕವಿರಾಜ್​ ಬರೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್