AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೀತಸಾಹಿತಿ ಕವಿರಾಜ್​ ಜನ್ಮದಿನ: ದೊಡ್ಡ ಪಾರ್ಟಿ ಬೇಡ, ಬೈಟೂ ಟೀ ಸಾಕು ಅಂತಿದೆ ‘ಭೀಮ’ ತಂಡ

ಅನೇಕ ಸ್ಟಾರ್​ ನಟರ ಸಿನಿಮಾಗಳಿಗೆ ಕವಿರಾಜ್​ ಅವರು ಸಾಂಗ್​ ಬರೆದು ಸೈ ಎನಿಸಿಕೊಂಡಿದ್ದಾರೆ. ದುನಿಯಾ ವಿಜಯ್​ ಮತ್ತು ಕವಿರಾಜ್​ ಅವರದ್ದು ಹಿಟ್​ ಜೋಡಿ. ‘ಭೀಮ’ ಸಿನಿಮಾದಲ್ಲೂ ಅವರ ಕಾಂಬಿನೇಷನ್​ ಇರುವುದರಿಂದ ನಿರೀಕ್ಷೆ ಹೆಚ್ಚಿದೆ.

ಗೀತಸಾಹಿತಿ ಕವಿರಾಜ್​ ಜನ್ಮದಿನ: ದೊಡ್ಡ ಪಾರ್ಟಿ ಬೇಡ, ಬೈಟೂ ಟೀ ಸಾಕು ಅಂತಿದೆ ‘ಭೀಮ’ ತಂಡ
‘ಭೀಮ’ ಸಿನಿಮಾ ತಂಡದ ಜೊತೆ ಕವಿರಾಜ್​
ಮದನ್​ ಕುಮಾರ್​
|

Updated on: Aug 11, 2023 | 6:47 PM

Share

ಕನ್ನಡ ಚಿತ್ರರಂಗದಲ್ಲಿ ಗೀತಸಾಹಿತಿಯಾಗಿ, ನಿರ್ದೇಶಕನಾಗಿ ಕವಿರಾಜ್​ (Kavi Raj) ಅವರು ಗುರುತಿಸಿಕೊಂಡಿದ್ದಾರೆ. ಅವರ ಲೇಖನಿಯಿಂದ ನೂರಾರು ಸೂಪರ್​ ಹಿಟ್​ ಗೀತೆಗಳು ಮೂಡಿಬಂದಿವೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಅವರು ಇಂದಿಗೂ ಬಹುಬೇಡಿಕೆಯ ಲಿರಿಸಿಸ್ಟ್​ ಆಗಿ ಮಿಂಚುತ್ತಿದ್ದಾರೆ. ಇಂದು (ಆಗಸ್ಟ್​ 11) ಅವರಿಗೆ ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಅನೇಕ ಸಿನಿಮಾಗಳಿಗೆ ಕವಿರಾಜ್​ ಅವರು ಸಾಹಿತ್ಯ ಬರೆಯುತ್ತಿದ್ದಾರೆ. ಆ ಪೈಕಿ ‘ಭೀಮ’ ಸಿನಿಮಾ (Bheema Movie) ಮೇಲೆ ವಿಶೇಷವಾದ ನಿರೀಕ್ಷೆ ಇದೆ. ದುನಿಯಾ ವಿಜಯ್​ (Duniya Vijay) ನಟನೆಯ ಈ ಸಿನಿಮಾ ತಂಡದಿಂದ ಇತ್ತೀಚೆಗಷ್ಟೇ ಒಂದು ಸುದ್ದಿ ಹೊರಬಿದ್ದಿದೆ. ‘ಬೇಡ ದೊಡ್ಡ ದೊಡ್ಡ ಪಾರ್ಟಿ, ಕುಡಿಸು ನೀ ಸಾಕು ಬೈಟೂ ಟೀ..’ ಎಂಬ ಸ್ಪೆಷಲ್​ ಸಾಂಗ್​ ಸಿದ್ಧವಾಗುತ್ತಿದೆ.

ಅನೇಕ ಸ್ಟಾರ್​ ನಟರ ಸಿನಿಮಾಗಳಿಗೆ ಕವಿರಾಜ್​ ಅವರು ಸಾಂಗ್​ ಬರೆದು ಸೈ ಎನಿಸಿಕೊಂಡಿದ್ದಾರೆ. ದುನಿಯಾ ವಿಜಯ್​ ಮತ್ತು ಕವಿರಾಜ್​ ಅವರದ್ದು ಹಿಟ್​ ಜೋಡಿ. ಈ ಹಿಂದೆ ದುನಿಯಾ ವಿಜಯ್​ ನಟನೆಯ ‘ಜಾನಿ ಮೇರ ನಾಮ್​ ಪ್ರೀತಿ ಮೇರ ಕಾಮ್​’ ಸಿನಿಮಾಗೆ ಕವಿರಾಜ್​ ಅವರು ಸಾಂಗ್​ ಬರೆದಿದ್ದರು. ‘ಊರಿಗೊಬ್ಳೆ ಪದ್ಮಾವತಿ..’ ಹಾಡು ಸೂಪರ್​ ಹಿಟ್​ ಆಗಿತ್ತು. ಆ ಗೀತೆಯಲ್ಲಿ ರಮ್ಯಾ ಅವರು ಡ್ಯಾನ್ಸ್​ ಮಾಡಿದ್ದರು. ಈಗ ‘ಭೀಮ’ ಸಿನಿಮಾದಲ್ಲಿ ಕವಿರಾಜ್ ಬರೆದಿರುವ ‘ಬೇಡ ದೊಡ್ಡ ದೊಡ್ಡ ಪಾರ್ಟಿ, ಕುಡಿಸು ನೀ ಸಾಕು ಬೈಟೂ ಟೀ..’ ಹಾಡು ಯಾವ ರೀತಿ ಮೂಡಿಬಂದಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

‘ಭೀಮ’ ಸಿನಿಮಾಗೆ ಚರಣ್​ ರಾಜ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ದುನಿಯಾ ವಿಜಯ್​ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ‘ಸಲಗ’ ಚಿತ್ರದಲ್ಲೂ ಚರಣ್ ರಾಜ್​ ಮತ್ತು ದುನಿಯಾ ವಿಜಯ್​ ಮೋಡಿ ಮಾಡಿದ್ದರು. ಈಗ ಅವರ ಜೊತೆಗೆ ಕವಿರಾಜ್​ ಕಾಂಬಿನೇಷನ್​ ಕೂಡ ಸೇರಿಕೊಂಡಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Duniya Vijay: ಪಕ್ಕಾ ಅಭಿಮಾನಿಗೆ ವಿಶೇಷ ಪ್ರೀತಿ ತೋರಿಸಿದ ನಟ ದುನಿಯಾ ವಿಜಯ್

‘ಭೀಮ’ ಚಿತ್ರತಂಡದ ಬಗ್ಗೆ ಕವಿರಾಜ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಟೀಮ್​ ಜೊತೆ ಫೋಟೋ ಕ್ಲಿಕ್ಕಿಸಿದ ಸಂದರ್ಭ ಯಾವ ರೀತಿ ಇತ್ತು ಎಂಬುದನ್ನು ಅವರು ಕ್ಯಾಪ್ಷನ್​ ಮೂಲಕ ವಿವರಿಸಿದ್ದಾರೆ. ‘ಭೀಮನ ಟೀಂಯಿಂದ ಚರಣ್ ರಾಜ್ ಸಂಗೀತದಲ್ಲಿ ಒಂದು ಖಡಕ್ ಸಾಂಗ್ ಲೋಡಿಂಗ್. ಬೇಡ ಬೇಡವೆಂದರೂ ಛೇರ್ ಮೇಲೆ ನನ್ನ ಕೂರಿಸಿ, ತಾವು ಹಿಂದೆ ನಿಂತು ಒಬ್ಬ ತಂತ್ರಜ್ಞನಿಗೆ ಗೌರವ ನೀಡಿದ್ದು ಹೃದಯವಂತ ವಿಜಯ್ ಸರ್’ ಎಂದು ಕವಿರಾಜ್​ ಬರೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More