AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಸಿಂಪಲ್​ ಆಗಿ ಮದುವೆ ಆಗಲಿದ್ದಾರೆ ಕಾವ್ಯಾ ಗೌಡ

ಇತ್ತೀಚೆಗೆ ದುಬೈಗೆ ತೆರಳಿದ್ದ ಕಾವ್ಯಾ ಅಲ್ಲಿಂದಲೇ ತಮ್ಮ ಲೈಫ್​ ಪಾರ್ಟ್ನರ್​​ಅನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ತಾವು ಮದುವೆ ಆಗುತ್ತಿರುವ ಹುಡುಗನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಸಿಂಪಲ್​ ಆಗಿ ಮದುವೆ ಆಗಲಿದ್ದಾರೆ ಕಾವ್ಯಾ ಗೌಡ
ಕಾವ್ಯಾ ಗೌಡ ಜತೆ ಸೋಮಶೇಖರ್​
ರಾಜೇಶ್ ದುಗ್ಗುಮನೆ
|

Updated on: Apr 28, 2021 | 4:22 PM

Share

ರಾಧಾ ರಮಣ ಧಾರಾವಾಹಿ ಮೂಲಕ ಚಿರಪರಿಚಿತರಾದ ನಟಿ ಕಾವ್ಯಾ ಗೌಡ ಇತ್ತೀಚೆಗೆ ಪ್ರೀ ವೆಡ್ಡಿಂಗ್ ಫೋಟೋಶೂಟ್​ ಮೂಲಕ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡಿದ್ದರು. ಈಗ ಅವರು ಮದುವೆ ದಿನಾಂಕ ಕೂಡ ಘೋಷಣೆ ಮಾಡಿಕೊಂಡಿದ್ದಾರೆ. ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಸಿಂಪಲ್​ ಆಗಿ ಹಸೆಮಣೆ ಏರಲು ಕಾವ್ಯಾ ನಿರ್ಧರಿಸಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ.

ಇತ್ತೀಚೆಗೆ ದುಬೈಗೆ ತೆರಳಿದ್ದ ಕಾವ್ಯಾ ಅಲ್ಲಿಂದಲೇ ತಮ್ಮ ಲೈಫ್​ ಪಾರ್ಟ್ನರ್​​ಅನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ತಾವು ಮದುವೆ ಆಗುತ್ತಿರುವ ಹುಡುಗನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈಗ ಹುಡುಗನ ಬಗ್ಗೆ ಕಾವ್ಯಾ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಮೂಲದ ಉದ್ಯಮಿ ಸೋಮಶೇಖರ್​ ಅವರನ್ನು ಕಾವ್ಯಾ ಗೌಡ ಮದುವೆ ಆಗುತ್ತಿದ್ದಾರೆ. ಮೇ 13ರಂದು ಈ ಜೋಡಿ ಬೆಂಗಳೂರಿನಲ್ಲಿ ಹಸೆಮಣೆ ಏರುತ್ತಿದೆ. ಬೆಂಗಳೂರಿನಲ್ಲಿ ಇಬ್ಬರೂ ಸಿಂಪಲ್​ ಆಗಿ ಮದುವೆ ಆಗಲಿದ್ದಾರೆ. ಆಪ್ತರಿಗೆ ಮಾತ್ರ ಮದುವೆಗೆ ಆಮಂತ್ರಣ ಇರಲಿದೆ. ಕಾವ್ಯಾ ಗೌಡ ಅವರದ್ದು ಅರೇಂಜ್​ ಮ್ಯಾರೇಜ್​ ಅನ್ನೋದು ವಿಶೇಷ.

ಇತ್ತೀಚೆಗೆ ಕಾವ್ಯಾ ಗೌಡ ಸಾಮಾಜಿಕ ಜಾಲತಾಣದಲ್ಲಿ ಸೋಮಶೇಖರ್​ ಜತೆ ಇರುವ ಸಾಲು ಸಾಲು ಪೋಟೋಗಳನ್ನು ಪೋಸ್ಟ್​ ಮಾಡಿದ್ದರು. ಅಲ್ಲದೆ, ಉದ್ದನೆಯ ಸಾಲುಗಳನ್ನು ಬರೆದಿದ್ದರು. ಅಲ್ಲದೆ, ನಿನ್ನನ್ನು ಪಡೆಯಲು ನಾನೆಷ್ಟು ಲಕ್ಕಿ ಎಂದು ಹೇಳಿಕೊಂಡಿದ್ದರು.

2015ರಲ್ಲಿ ತೆರೆಕಂಡ ಶುಭ ವಿವಾಹ ಧಾರಾವಾಹಿ ಮೂಲಕ ಕಾವ್ಯಾ ಗೌಡ ತಮ್ಮ ಕಿರುತೆರೆ ಪಯಣ ಆರಂಭಿಸಿದರು. ನಂತರ ರಾಧಾ ರಮಣದಲ್ಲಿ ರಾಧಾ ಆಗಿ ಕಾಣಿಸಿಕೊಂಡರು. ಗಾಂಧಾರಿ ಧಾರಾವಾಹಿಯಲ್ಲೂ ಕಾವ್ಯಾ ನಟಿಸಿದ್ದರು. 2018ರಲ್ಲಿ ತೆರೆಕಂಡ ಬಕಾಸುರ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟರು.

ಇದನ್ನೂ ಓದಿ: Kavya Gowda: ಪ್ರೀತಿ ವಿಚಾರ ಬಿಚ್ಚಿಟ್ಟ ಕಿರುತೆರೆ ನಟಿ ಕಾವ್ಯಾ ಗೌಡ; ದುಬೈನಲ್ಲಿ ಸಖತ್​ ಫೋಟೋಶೂಟ್​

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ