AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಖ್ಯಾತಿಯ ಕಾವ್ಯಾ ಶೈವಾಗೆ ಅವಮಾನ; ವೇದಿಕೆಯಲ್ಲೇ ಮೈಕ್ ಕಿತ್ತುಕೊಂಡ ವ್ಯಕ್ತಿ

ನಟಿ ಕಾವ್ಯಾ ಶೈವ ಅವರಿಗೆ ಬಿಗ್ ಬಾಸ್ ಖ್ಯಾತಿ ಸಿಕ್ಕಿದೆ. ಕಲಬುರಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುವಾಗ ಅವರ ಕೈಯಿಂದ ಮೈಕ್ ಕಸಿದುಕೊಳ್ಳಲಾಗಿದೆ. ಇದರಿಂದ ವೇದಿಕೆಯಲ್ಲಿ ಗೊಂದಲ ಉಂಟಾಗಿದ್ದು, ಸಂಘಟಕರು ಈ ಘಟನೆಯನ್ನು ಪ್ರಶ್ನಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕಾವ್ಯಾ ಶಾಕ್ ಆಗಿದ್ದರೂ, ಎಲ್ಲಿಯೂ ಕೋಪ ಹೊರಹಾಕಿಲ್ಲ.

ಬಿಗ್ ಬಾಸ್ ಖ್ಯಾತಿಯ ಕಾವ್ಯಾ ಶೈವಾಗೆ ಅವಮಾನ; ವೇದಿಕೆಯಲ್ಲೇ ಮೈಕ್ ಕಿತ್ತುಕೊಂಡ ವ್ಯಕ್ತಿ
ಕಾವ್ಯಾ Image Credit source: Instagram
ರಾಜೇಶ್ ದುಗ್ಗುಮನೆ
|

Updated on: May 25, 2026 | 1:13 PM

Share

ನಟಿ ಕಾವ್ಯಾ ಶೈವ ಅವರಿಗೆ ಬಿಗ್ ಬಾಸ್ (Bigg Boss) ಮೂಲಕ ತುಂಬಾನೇ ಖ್ಯಾತಿ ಸಿಕ್ಕಿದೆ. ಅವರು ಅನೇಕ ಸಮಾರಂಭಗಳಿಗೆ ತೆರಳುತ್ತಿದ್ದಾರೆ. ಈಗ ಅವರು ವೇದಿಕೆ ಮೇಲೆ ಇದ್ದಾಗಲೇ ನಡೆದ ಒಂದು ಘಟನೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಕಾವ್ಯಾ ಅವರು ವೇದಿಕೆ ಮೇಲೆ ಮಾತನಾಡುವಾಗ ಮೈಕ್ ಕಸಿದುಕೊಳ್ಳಲಾಗಿದೆ. ಕಲಬುರಗಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಾ ಇದೆ.

ಕಾವ್ಯಾ ಶೈವ ಅವರು ಕಲಬುರಗಿಯ ಕಲಬುರಗಿಯ ಎಸ್.ಎಂ ಪಂಡಿತ ರಂಗಮಂದಿರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಅವರು ವೇದಿಕೆ ಮೇಲೆ ಮಾತನಾಡುತ್ತಿದ್ದರು. ಆಗಲೇ ವೇದಿಕೆ ಪೂರ್ತಿ ಜನರಿಂದ ತುಂಬಿತ್ತು. ಅವರಿಗೆ ಸರಿಯಾಗಿ ನಿಲ್ಲಲೂ ಜಾಗ ಇರಲಿಲ್ಲ. ಆದಾಗ್ಯೂ ಕಾವ್ಯಾ ಮಾತನಾಡುತ್ತಿದ್ದರು. ಆಗ ಬಂದ ವ್ಯಕ್ತಿಯೋರ್ವ ಕಾವ್ಯಾ ಅವರಿಂದ ಮೈಕ್ ಕಸಿದುಕೊಂಡಿದ್ದಾರೆ. ಇದರಿಂದಾಗಿ ವೇದಿಕೆಯ ಮೇಲೆ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ವೇದಿಕೆ ಮೇಲೆ ಮಾತನಾಡುತ್ತಿದ್ದಾಗ ಏಕಾಏಕಿ ಮೈಕ್ ಕಿತ್ತುಕೊಂಡಿದ್ದನ್ನು ಕಂಡು ಕಾವ್ಯಾ ಶಾಕ್ ಆದರು. ಆದರೆ, ಎಲ್ಲಿಯೂ ಅವರು ಕೋಪ ಹೊರಹಾಕಿಲ್ಲ. ಕಾವ್ಯಾಗೆ ಆದ ಅವಮಾನವನ್ನು ಸಂಘಟಕರೊಬ್ಬರು ಪ್ರಶ್ನಿಸಿದ್ದಾರೆ. ಮೈಕ್ ಕಿತ್ತುಕೊಂಡ ವ್ಯಕ್ತಿ ಹಾಗೂ ವೇದಿಕೆಯ ಮೇಲೆಯೇ ಇದ್ದ ಸಂಘಟಕರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ‘ನಷ್ಟ ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ

ಕಾವ್ಯಾ ಶೈವ ಅವರು ಕಿರುತೆರೆ ಮೂಲಕ ಸದ್ದು ಮಾಡಿದವರು. ‘ಕೆಂಡ ಸಂಪಿಗೆ’ ಸೀರಿಯಲ್ ಅಲ್ಲಿ ನಟಿಸಿದರು. ‘ಕೊತ್ತಲವಾಡಿ’ ಸಿನಿಮಾದಲ್ಲಿ ನಾಯಕಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು