AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCC Trophy: ಡಿಸೆಂಬರ್​ನಲ್ಲಿ ‘ಕನ್ನಡ ಚಲನಚಿತ್ರ ಕಪ್’; ಮಾಹಿತಿ ನೀಡಿದ ಕಿಚ್ಚ ಸುದೀಪ್

ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿರುವ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಈ ಕಾರಣಕ್ಕೆ ಕೆಸಿಸಿ ಆರಂಭಿಸಲಾಗಿದೆ. ‘ಕನ್ನಡ ಚಲನಚಿತ್ರ ಕಪ್’ ಆರಂಭ ಆಗುವಾಗ ಸೆಲೆಬ್ರಿಟಿಗಳು ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಒಂದಷ್ಟು ದಿನ ಕ್ರಿಕೆಟ್​ನಲ್ಲಿ ಕಳೆಯಲಿದ್ದಾರೆ.

KCC Trophy: ಡಿಸೆಂಬರ್​ನಲ್ಲಿ ‘ಕನ್ನಡ ಚಲನಚಿತ್ರ ಕಪ್’; ಮಾಹಿತಿ ನೀಡಿದ ಕಿಚ್ಚ ಸುದೀಪ್
ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Nov 22, 2023 | 6:21 PM

Share

ಕಿಚ್ಚ ಸುದೀಪ್ (Kichcha Sudeep) ಅವರಿಗೆ ಕ್ರಿಕೆಟ್ ಬಗ್ಗೆ ಸಾಕಷ್ಟು ಪ್ರೀತಿ ಇದೆ. ಈ ಕಾರಣಕ್ಕೆ ಸಿನಿಮಾ ಕೆಲಸಗಳ ಜೊತೆ ಅವರು ಕ್ರಿಕೆಟ್ ಕೂಡ ಆಡುತ್ತಾರೆ. ಈಗ ‘ಕನ್ನಡ ಚಲನಚಿತ್ರ ಕಪ್’ (KCC) ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಡಿಸೆಂಬರ್​ನಲ್ಲಿ ಕೆಸಿಸಿಯ ನಾಲ್ಕನೇ ಆವೃತ್ತಿ ಆರಂಭ ಆಗಲಿದೆ. ಈ ಬಗ್ಗೆ ಸುದೀಪ್ ಅವರು ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿರುವ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಈ ಕಾರಣಕ್ಕೆ ಕೆಸಿಸಿ ಆರಂಭಿಸಲಾಗಿದೆ. ‘ಕನ್ನಡ ಚಲನಚಿತ್ರ ಕಪ್’ ಆರಂಭ ಆಗುವಾಗ ಸೆಲೆಬ್ರಿಟಿಗಳು ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಒಂದಷ್ಟು ದಿನ ಕ್ರಿಕೆಟ್​ನಲ್ಲಿ ಕಳೆಯಲಿದ್ದಾರೆ. ಈಗಾಗಲೇ ಯಶಸ್ವಿಯಾಗಿ ಕೆಸಿಸಿಯ ಮೂರು ಸೀಸನ್ ಪೂರ್ಣಗೊಂಡಿದೆ. ಈಗ ನಾಲ್ಕನೇ ಸೀಸನ್ ಆರಂಭ ಆಗಲಿದೆ. ನವೆಂಬರ್ 26ರಂದು ಹರಾಜು ಪ್ರಕ್ರಿಯೆ ನಡೆಯಲಿದೆ.

‘ಡಿಸೆಂಬರ್ 23ರಿಂದ ಡಿಸೆಂಬರ್ 25ರವರೆಗೆ ‘ಕೆಸಿಸಿ’ ನಾಲ್ಕನೇ ಸೀಸನ್ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ಗಳು ನಡೆಯಲಿವೆ. ಕಳೆದ ಸೀಸನ್​ಗಳಲ್ಲಿ ವಿದೇಶದ ಆಟಗಾರರು ಭಾಗಿ ಆಗಿದ್ದರು. ಈ ಬಾರಿಯೂ ವಿದೇಶಿ ಆಟಗಾರರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಶಿವಣ್ಣ, ಉಪೇಂದ್ರ, ಧನಂಜಯ್, ಗಣೇಶ್, ದುನಿಯಾ ವಿಜಯ್, ಕೆಪಿ ಶ್ರೀಕಾಂತ್ ಸೇರಿ ಅನೇಕ ಸೆಲೆಬ್ರಿಟಿಗಳು ಈ ಮ್ಯಾಚ್​ನಲ್ಲಿ ಭಾಗಿ ಆಗಲಿದ್ದಾರೆ.

ಇದನ್ನೂ ಓದಿ: ‘ಕಬ್ಜ’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದ ಈ ಕಲಾವಿದ ‘ಮ್ಯಾಕ್ಸ್’ ಚಿತ್ರಕ್ಕೆ ವಿಲನ್?

ಹಲವು ತಂಡಗಳು ಕೆಸಿಸಿಯಲ್ಲಿ ಭಾಗಿ ಆಗಲಿವೆ. ಎಷ್ಟು ಓವರ್​ಗಳ ಮ್ಯಾಚ್, ಯಾವ ಯಾವ ತಂಡ ಇರಲಿದೆ, ಯಾವ ತಂಡಕ್ಕೆ ಯಾರು ಕ್ಯಾಪ್ಟನ್ ಎಂಬಿತ್ಯಾದಿ ವಿಚಾರಗಳ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಸಿಗುವ ಸಾಧ್ಯತೆ ಇದೆ. ಈ ವರ್ಷದ ಆರಂಭದಲ್ಲಿ ಮೂರನೇ ಸೀಸನ್ ನಡೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:11 pm, Wed, 22 November 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ